ಸುಳ್ಯ:ಮಾವಿನಕಟ್ಟೆ ಶ್ರೀ ಮಹಾವಿಷ್ಣು ಮೂರ್ತಿ ದೈವಸ್ಥಾನ ಕೆರೆಗೆ ಬಿದ್ದಿದ್ದ ಕಾಡುಕೋಣದ ಮರಿ ಶನಿವಾರ ಸಂಜೆಯ ಹೊತ್ತಿಗೆ ಕಾಡು ಸೇರಿತು. ಶನಿವಾರ ಬೆಳಗ್ಗಿನಿಂದಲೇ ಸತತ ಪ್ರಯತ್ನದ ಬಳಿಕ ಕಾಡು ಸೇರಲು ಸಾಧ್ಯವಾಯಿತು.
ಸುಳ್ಯ ತಾಲೂಕಿನ ದೇವಚಳ್ಳ ಗ್ರಾಮದ ಮಾವಿನಕಟ್ಟೆ ಶ್ರೀ ಮಹಾವಿಷ್ಣು ಮೂರ್ತಿ ದೈವಸ್ಥಾನ ಉದಯಗಿರಿ ಇಲ್ಲಿಯ ಕೆರೆಗೆ ಶುಕ್ರವಾರ ರಾತ್ರಿ ಆಯ ತಪ್ಪಿ ಕಾಡುಕೋಣ ಬಿದ್ದಿತ್ತು. ಶನಿವಾರ ಬೆಳಗ್ಗೆ ಸ್ಥಳೀಯರಿಗೆ ತಿಳಿದು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದರು. ಬಳಿಕ ಸಂಜೆಯವರೆಗೆ ಕಾರ್ಯಾಚರಣೆ ನಡೆದಿತ್ತು.
ಕಾಡುಕೋಣ ಬಿದ್ದ ವಿಷಯ ತಿಳಿದು ಜನ ಸಾಗರವೇ ಕೆರೆಯ ಕಡೆಗೆ ಬಂದಿತ್ತು. ಬೆಳಗ್ಗಿನಿಂದಲೇ ಕಾಡು ಕೋಣ ರಕ್ಷಣೆ ಕಾರ್ಯ ಪ್ರಾರಂಭವಾಯಿತು. ನೀರಿಗೆ ಬಿದ್ದು ಸುಸ್ತಾಗಿದ್ದ ಕಾಡುಕೋಣವನ್ನು ಕೋಣವನ್ನು ಹೊರ ಹಾಕುವುದು ತ್ರಾಸದಾಯಕವಾಯಿತು. ಅರಣ್ಯ ಇಲಾಖೆಯ ಅಧಿಕಾರಿಗಳ ಮಾರ್ಗದರ್ಶನ ದಲ್ಲಿ ಯುವಕರ ಶ್ರಮದಿಂದ ಸಂಜೆಯ ವರೆಗೂ ಕಾರ್ಯ ಮುಂದುವರೆಯಿತು. ಕಾಡುಕೋಣವನ್ನು ರಕ್ಷಣೆ ಮಾಡುವುದು ಎಲ್ಲರ ಕಾಳಜಿಯಾಗಿತ್ತು. ಬೆಳಗ್ಗೆ ಅಡಿಕೆ ಮರದ ಪಾಲ ಹಾಕಿದ್ದರೆ ನಂತರ ಹಗ್ಗದ ಸಹಾಯದಿಂದ ಮೇಲೆಳೆದು ಓಡುವಂತೆ ಮಾಡಲಾಯಿತು. ಕೊನೆಗೂ ಸಂಜೆಯ ವೇಳೆಗೆ ಕಾಡುಕೋಣ ಕಾಡು ಸೇರಿತು.
ಈ ಕಾರ್ಯದಲ್ಲಿ ಸಹಕರಿಸಿದ ಎಲ್ಲರಿಗೂ ಅರಣ್ಯ ಇಲಾಖೆ ವಂದನೆ ಸಲ್ಲಿಸಿದೆ. ವನ್ಯ ಜೀವಿಗಳ ರಕ್ಷಣೆ ನಮ್ಮದು. ಪರಿಸರ ಉಳಿಸಿ ಎಂಬ ಘೋಷ ವಾಕ್ಯ ಮೊಳಗಿತು.
ಮಂಗಳೂರು ತಾಲೂಕಿನ ಎಲ್ಲಾ ಗ್ರಾಮಗಳು ಮಳೆಯಾಶ್ರಿತ ಕೃಷಿಯ ಮೇಲೆ ಹೆಚ್ಚು ಅವಲಂಬಿತವಾಗಿರುವುದರಿಂದ ಹವಾಮಾನ…
ಮರುವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ನೋಂದಾವಣೆಗೊಂಡ ರೈತರ ತಾಲೂಕಿನಲ್ಲಿ ವಿಮೆ ಮಾಡಿಸಲಾಗಿರುವ…
ಇಂದು ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಮಳೆಯಾಗಿದೆ. ಪ್ರಮುಖವಾಗಿ ಕುಮುಟಾ ಮತ್ತು ಅಂಕೋಲಾದಲ್ಲಿ…
ಬೆಂಗಳೂರಿನ ಲಾಲ್ ಬಾಗ್ ನಲ್ಲಿರುವ ಡಾ. ಎಂ.ಎಚ್ ಮರೀಗೌಡ ಸಭಾಂಗಣದಲ್ಲಿ ಮೂರು ದಿನಗಳ…
ಜೇನು ಕೃಷಿ ಲಾಭದಾಯಕವಾಗಿದ್ದು, ರೈತರು ಈ ಕೃಷಿಯಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕು ಎಂದು ಕೇಂದ್ರ…
24.05.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…