ಸುಳ್ಯ:ಮಾವಿನಕಟ್ಟೆ ಶ್ರೀ ಮಹಾವಿಷ್ಣು ಮೂರ್ತಿ ದೈವಸ್ಥಾನ ಕೆರೆಗೆ ಬಿದ್ದಿದ್ದ ಕಾಡುಕೋಣದ ಮರಿ ಶನಿವಾರ ಸಂಜೆಯ ಹೊತ್ತಿಗೆ ಕಾಡು ಸೇರಿತು. ಶನಿವಾರ ಬೆಳಗ್ಗಿನಿಂದಲೇ ಸತತ ಪ್ರಯತ್ನದ ಬಳಿಕ ಕಾಡು ಸೇರಲು ಸಾಧ್ಯವಾಯಿತು.
ಸುಳ್ಯ ತಾಲೂಕಿನ ದೇವಚಳ್ಳ ಗ್ರಾಮದ ಮಾವಿನಕಟ್ಟೆ ಶ್ರೀ ಮಹಾವಿಷ್ಣು ಮೂರ್ತಿ ದೈವಸ್ಥಾನ ಉದಯಗಿರಿ ಇಲ್ಲಿಯ ಕೆರೆಗೆ ಶುಕ್ರವಾರ ರಾತ್ರಿ ಆಯ ತಪ್ಪಿ ಕಾಡುಕೋಣ ಬಿದ್ದಿತ್ತು. ಶನಿವಾರ ಬೆಳಗ್ಗೆ ಸ್ಥಳೀಯರಿಗೆ ತಿಳಿದು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದರು. ಬಳಿಕ ಸಂಜೆಯವರೆಗೆ ಕಾರ್ಯಾಚರಣೆ ನಡೆದಿತ್ತು.
ಕಾಡುಕೋಣ ಬಿದ್ದ ವಿಷಯ ತಿಳಿದು ಜನ ಸಾಗರವೇ ಕೆರೆಯ ಕಡೆಗೆ ಬಂದಿತ್ತು. ಬೆಳಗ್ಗಿನಿಂದಲೇ ಕಾಡು ಕೋಣ ರಕ್ಷಣೆ ಕಾರ್ಯ ಪ್ರಾರಂಭವಾಯಿತು. ನೀರಿಗೆ ಬಿದ್ದು ಸುಸ್ತಾಗಿದ್ದ ಕಾಡುಕೋಣವನ್ನು ಕೋಣವನ್ನು ಹೊರ ಹಾಕುವುದು ತ್ರಾಸದಾಯಕವಾಯಿತು. ಅರಣ್ಯ ಇಲಾಖೆಯ ಅಧಿಕಾರಿಗಳ ಮಾರ್ಗದರ್ಶನ ದಲ್ಲಿ ಯುವಕರ ಶ್ರಮದಿಂದ ಸಂಜೆಯ ವರೆಗೂ ಕಾರ್ಯ ಮುಂದುವರೆಯಿತು. ಕಾಡುಕೋಣವನ್ನು ರಕ್ಷಣೆ ಮಾಡುವುದು ಎಲ್ಲರ ಕಾಳಜಿಯಾಗಿತ್ತು. ಬೆಳಗ್ಗೆ ಅಡಿಕೆ ಮರದ ಪಾಲ ಹಾಕಿದ್ದರೆ ನಂತರ ಹಗ್ಗದ ಸಹಾಯದಿಂದ ಮೇಲೆಳೆದು ಓಡುವಂತೆ ಮಾಡಲಾಯಿತು. ಕೊನೆಗೂ ಸಂಜೆಯ ವೇಳೆಗೆ ಕಾಡುಕೋಣ ಕಾಡು ಸೇರಿತು.
ಈ ಕಾರ್ಯದಲ್ಲಿ ಸಹಕರಿಸಿದ ಎಲ್ಲರಿಗೂ ಅರಣ್ಯ ಇಲಾಖೆ ವಂದನೆ ಸಲ್ಲಿಸಿದೆ. ವನ್ಯ ಜೀವಿಗಳ ರಕ್ಷಣೆ ನಮ್ಮದು. ಪರಿಸರ ಉಳಿಸಿ ಎಂಬ ಘೋಷ ವಾಕ್ಯ ಮೊಳಗಿತು.
ಕೃಷಿ ಕೂಳೆ ಈಗ ಮಾಲಿನ್ಯದ ಮೂಲವಲ್ಲ, ರೈತರಿಗೆ ಆದಾಯದ ಮೂಲವಾಗುತ್ತಿದೆ. ಬಯೋ-ಬಿಟುಮೆನ್ ತಂತ್ರಜ್ಞಾನ…
ಮಹಿಳೆಯರನ್ನು ಕೃಷಿ ಮೌಲ್ಯ ಸರಪಳಿಯಲ್ಲಿ ಸೇರಿಸಿದರೆ ಆದಾಯ ಮತ್ತು ಉತ್ಪಾದನೆ ಹೆಚ್ಚುತ್ತದೆ. Inclusive…
ಪರಿಸರ ನಾಶವು ಕೇವಲ ಸಮಸ್ಯೆಯಲ್ಲ, ಅದು ಅಪರಾಧ ಎಂಬುದನ್ನು “ಗ್ರೀನ್ ಕ್ರೈಮ್” ಪುಸ್ತಕ…
ಘಾನಾದಲ್ಲಿ ಮರ ಬೆಳೆ ವೈವಿಧ್ಯೀಕರಣ ಯೋಜನೆ ಆರಂಭಗೊಂಡಿದ್ದು, ರೈತರ ಆದಾಯ ಹೆಚ್ಚಿಸಲು ಮತ್ತು…
ಕರ್ನಾಟಕದ ವಿವಿಧ ಭಾಗಗಳಲ್ಲಿ ಮತ್ತೆ ಮಳೆಯ ಚಟುವಟಿಕೆ ಹೆಚ್ಚಾಗಿದ್ದು, ಕರಾವಳಿ, ಮಲೆನಾಡು ಹಾಗೂ…
ರಾಜ್ಯದ ಹಲವೆಡೆ ಮಳೆಯಾಗಿದ್ದು, ಬೆಂಗಳೂರಿನಲ್ಲಿ ಮುಂದಿನ 24 ಗಂಟೆಗಳಲ್ಲಿ ಹಗುರ ಮಳೆಯ ಸಾಧ್ಯತೆ…