Advertisement
ನಮ್ಮೂರ ಸುದ್ದಿ

ಕೆರೆಯಿಂದ ಕಾಡಿಗೆ ಓಡಿತು ಕಾಡುಕೋಣ….

Share

ಸುಳ್ಯ:ಮಾವಿನಕಟ್ಟೆ ಶ್ರೀ ಮಹಾವಿಷ್ಣು ಮೂರ್ತಿ ದೈವಸ್ಥಾನ ಕೆರೆಗೆ ಬಿದ್ದಿದ್ದ ಕಾಡುಕೋಣದ ಮರಿ ಶನಿವಾರ ಸಂಜೆಯ ಹೊತ್ತಿಗೆ ಕಾಡು ಸೇರಿತು. ಶನಿವಾರ ಬೆಳಗ್ಗಿನಿಂದಲೇ ಸತತ ಪ್ರಯತ್ನದ ಬಳಿಕ ಕಾಡು ಸೇರಲು ಸಾಧ್ಯವಾಯಿತು.

ಸುಳ್ಯ  ತಾಲೂಕಿನ ದೇವಚಳ್ಳ ಗ್ರಾಮದ ಮಾವಿನಕಟ್ಟೆ ಶ್ರೀ ಮಹಾವಿಷ್ಣು ಮೂರ್ತಿ ದೈವಸ್ಥಾನ ಉದಯಗಿರಿ  ಇಲ್ಲಿಯ ಕೆರೆಗೆ ಶುಕ್ರವಾರ ರಾತ್ರಿ  ಆಯ ತಪ್ಪಿ ಕಾಡುಕೋಣ ಬಿದ್ದಿತ್ತು. ಶನಿವಾರ ಬೆಳಗ್ಗೆ ಸ್ಥಳೀಯರಿಗೆ ತಿಳಿದು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದರು. ಬಳಿಕ ಸಂಜೆಯವರೆಗೆ ಕಾರ್ಯಾಚರಣೆ ನಡೆದಿತ್ತು.

 

ಕಾಡುಕೋಣ ಬಿದ್ದ  ವಿಷಯ ತಿಳಿದು ಜನ ಸಾಗರವೇ ಕೆರೆಯ ಕಡೆಗೆ ಬಂದಿತ್ತು. ಬೆಳಗ್ಗಿನಿಂದಲೇ ಕಾಡು ಕೋಣ ರಕ್ಷಣೆ ಕಾರ್ಯ ಪ್ರಾರಂಭವಾಯಿತು. ನೀರಿಗೆ ಬಿದ್ದು ಸುಸ್ತಾಗಿದ್ದ ಕಾಡುಕೋಣವನ್ನು  ಕೋಣವನ್ನು ಹೊರ ಹಾಕುವುದು‌ ತ್ರಾಸದಾಯಕವಾಯಿತು. ಅರಣ್ಯ ಇಲಾಖೆಯ ಅಧಿಕಾರಿಗಳ ಮಾರ್ಗದರ್ಶನ ದಲ್ಲಿ ಯುವಕರ ಶ್ರಮದಿಂದ ಸಂಜೆಯ ವರೆಗೂ ಕಾರ್ಯ ಮುಂದುವರೆಯಿತು. ಕಾಡುಕೋಣವನ್ನು ರಕ್ಷಣೆ ಮಾಡುವುದು ಎಲ್ಲರ ಕಾಳಜಿಯಾಗಿತ್ತು. ಬೆಳಗ್ಗೆ ಅಡಿಕೆ ಮರದ ಪಾಲ ಹಾಕಿದ್ದರೆ ನಂತರ ಹಗ್ಗದ ಸಹಾಯದಿಂದ ಮೇಲೆಳೆದು ಓಡುವಂತೆ ಮಾಡಲಾಯಿತು. ಕೊನೆಗೂ ಸಂಜೆಯ ವೇಳೆಗೆ ಕಾಡುಕೋಣ ಕಾಡು ಸೇರಿತು.

ಈ  ಕಾರ್ಯದಲ್ಲಿ ಸಹಕರಿಸಿದ ಎಲ್ಲರಿಗೂ ಅರಣ್ಯ ಇಲಾಖೆ ವಂದನೆ ಸಲ್ಲಿಸಿದೆ. ವನ್ಯ ಜೀವಿಗಳ ರಕ್ಷಣೆ ನಮ್ಮದು. ಪರಿಸರ ಉಳಿಸಿ ಎಂಬ ಘೋಷ ವಾಕ್ಯ ಮೊಳಗಿತು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

3,000 ವರ್ಷಗಳ ಹಿಂದೆಯೇ ರೈತರು ಹವಾಮಾನ ಬದಲಾವಣೆಗೆ ಹೊಂದಿಕೊಂಡಿದ್ದರು..! ಬಿಹಾರದ ಪುರಾತನ ಬೀಜಗಳು ಹೇಳಿದ ಕೃಷಿ ಪಾಠ

ಬಿಹಾರದ ಯುರೆನ್‌ನಲ್ಲಿ ಪತ್ತೆಯಾದ 5 ಲಕ್ಷಕ್ಕೂ ಹೆಚ್ಚು ಸುಟ್ಟ ಬೀಜಗಳ ಅಧ್ಯಯನವು ಭಾರತದ…

2 minutes ago

ಶ್ರೀಕೃಷ್ಣನನ್ನು ದೇವನಾಗಿ ಮಾತ್ರವಲ್ಲ, ಗುರುವಿನ ರೂಪದಲ್ಲೂ ಕಾಣುವ ದೃಷ್ಟಿ

ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…

6 hours ago

ಹವಾಮಾನ ವರದಿ | 04-09-2026 | ಮುಂಗಾರು ದುರ್ಬಲ… ಆದರೂ ಕರ್ನಾಟಕದಲ್ಲಿ ಗುಡುಗು ಮಳೆ ಮುಂದುವರಿಯುವ ಸಾಧ್ಯತೆ!

ಮುಂಗಾರು ದುರ್ಬಲಗೊಂಡಿದ್ದರೂ ಸ್ಥಳೀಯ ಮೋಡಗಳ ಬೆಳವಣಿಗೆಯಿಂದ ಮಲೆನಾಡು ಹಾಗೂ ಒಳನಾಡಿನಲ್ಲಿ ಗುಡುಗು ಸಹಿತ…

6 hours ago

ಕೃಷಿ ಸಂಕಷ್ಟ ಎಂದರೆ ರೈತನ ಸಾಲ ಮಾತ್ರವಲ್ಲ – ಕೃಷಿ ಕಾರ್ಮಿಕರ ರಕ್ಷಣೆಯೂ ಅಗತ್ಯ

2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…

14 hours ago

ಹಂತ ಹಂತವಾಗಿ 16 ಸಾವಿರ ಶಿಕ್ಷಕರ ನೇಮಕ – ಅನುದಾನಿತ ಶಾಲೆಗಳಿಗೂ 6 ಸಾವಿರ ಹುದ್ದೆ – ಸಚಿವ ಮಧು ಬಂಗಾರಪ್ಪ

ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…

14 hours ago

ಹವಾಮಾನ ವರದಿ | 03-09-2026 | ಕರಾವಳಿ–ಮಲೆನಾಡಿನಲ್ಲಿ ಮತ್ತೆ ಮಳೆಯ ಸಾಧ್ಯತೆ…?

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…

1 day ago