ಧರ್ಮಸ್ಥಳ : ಜನರಿಗಾಗಿ, ಜನರಿಂದಲೇ ಕೆರೆಗಳ ಹೂಳೆತ್ತುವ ಕೆಲಸವನ್ನು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ನೇತೃತ್ವದಲ್ಲಿ ಮಾಡಲಾಗುತ್ತಿದೆ. ಇದರಿಂದಾಗಿ ಬಯಲು ಸೀಮೆಯ ಎಲ್ಲಾ ಕುಟುಂಬಗಳಿಗೆ ಕುಡಿಯಲು ಹಾಗೂ ಕೃಷಿಗೆ ಬೇಕಾದಷ್ಟು ನೀರು ಒದಗಿಸಲಾಗುವುದು ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕಡಾ.ಎಲ್.ಎಚ್.ಮಂಜುನಾಥ್ ಹೇಳಿದರು.
ಅವರು ಕೆರೆ ಸಂಜೀವಿನಿ ನೋಡಲ್ ಅಧಿಕಾರಿಗಳಿಗೆ ಏರ್ಪಡಿಸಿದ ಪ್ರೇರಣಾ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು. ರಾಜ್ಯದಲ್ಲಿ 63 ಕೆರೆಗಳ ಹೂಳೆತ್ತಲು ಅನುದಾನ ಮಂಜೂರಾಗಿದ್ದು ದುಂದು ವೆಚ್ಚ ಮಾಡದೆ ಅನುದಾನವನ್ನು ವಿನಿಯೋಗಿಸಲಾಗುವುದು ಎಂದು ಅವರು ಭರವಸೆ ನೀಡಿದರು.
ಪ್ರಾದೇಶಿಕ ನಿರ್ದೇಶಕ ಶ್ರೀಹರಿ ಮಾಹಿತಿ, ಮಾರ್ಗದರ್ಶನ ನೀಡಿದರು.
ಕೆರೆ ವಿಭಾಗದ ನಿರ್ದೇಶಕ ಲಕ್ಷ್ಮಣ್, ಎಂ.ಮತ್ತುಯೋಜನಾಧಿಕಾರಿ ಪ್ರವೀಣ್ಕುಮಾರ್, ಎಂಜಿನಿಯರ್ ಸಂಕೇತ್, ತಾಂತ್ರಿಕತಜ್ಞ ಡಿ.ಜಿ. ವೆಂಕಟರಾಮಯ್ಯ, ಬೂದಪ್ಪಗೌಡ ಅಧಿಕಾರಿಗಳಿಗೆ ತರಬೇತಿ ನೀಡಿದರು. ರಾಜ್ಯದ ವಿವಿಧ ಭಾಗಗಳಿಂದ 32 ನೋಡಲ್ ಅಧಿಕಾರಿಗಳು ತರಬೇತಿಯಲ್ಲಿ ಭಾಗವಹಿಸಿದರು.
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…