ಧರ್ಮಸ್ಥಳ : ಜನರಿಗಾಗಿ, ಜನರಿಂದಲೇ ಕೆರೆಗಳ ಹೂಳೆತ್ತುವ ಕೆಲಸವನ್ನು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ನೇತೃತ್ವದಲ್ಲಿ ಮಾಡಲಾಗುತ್ತಿದೆ. ಇದರಿಂದಾಗಿ ಬಯಲು ಸೀಮೆಯ ಎಲ್ಲಾ ಕುಟುಂಬಗಳಿಗೆ ಕುಡಿಯಲು ಹಾಗೂ ಕೃಷಿಗೆ ಬೇಕಾದಷ್ಟು ನೀರು ಒದಗಿಸಲಾಗುವುದು ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕಡಾ.ಎಲ್.ಎಚ್.ಮಂಜುನಾಥ್ ಹೇಳಿದರು.
ಅವರು ಕೆರೆ ಸಂಜೀವಿನಿ ನೋಡಲ್ ಅಧಿಕಾರಿಗಳಿಗೆ ಏರ್ಪಡಿಸಿದ ಪ್ರೇರಣಾ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು. ರಾಜ್ಯದಲ್ಲಿ 63 ಕೆರೆಗಳ ಹೂಳೆತ್ತಲು ಅನುದಾನ ಮಂಜೂರಾಗಿದ್ದು ದುಂದು ವೆಚ್ಚ ಮಾಡದೆ ಅನುದಾನವನ್ನು ವಿನಿಯೋಗಿಸಲಾಗುವುದು ಎಂದು ಅವರು ಭರವಸೆ ನೀಡಿದರು.
ಪ್ರಾದೇಶಿಕ ನಿರ್ದೇಶಕ ಶ್ರೀಹರಿ ಮಾಹಿತಿ, ಮಾರ್ಗದರ್ಶನ ನೀಡಿದರು.
ಕೆರೆ ವಿಭಾಗದ ನಿರ್ದೇಶಕ ಲಕ್ಷ್ಮಣ್, ಎಂ.ಮತ್ತುಯೋಜನಾಧಿಕಾರಿ ಪ್ರವೀಣ್ಕುಮಾರ್, ಎಂಜಿನಿಯರ್ ಸಂಕೇತ್, ತಾಂತ್ರಿಕತಜ್ಞ ಡಿ.ಜಿ. ವೆಂಕಟರಾಮಯ್ಯ, ಬೂದಪ್ಪಗೌಡ ಅಧಿಕಾರಿಗಳಿಗೆ ತರಬೇತಿ ನೀಡಿದರು. ರಾಜ್ಯದ ವಿವಿಧ ಭಾಗಗಳಿಂದ 32 ನೋಡಲ್ ಅಧಿಕಾರಿಗಳು ತರಬೇತಿಯಲ್ಲಿ ಭಾಗವಹಿಸಿದರು.
ಧರ್ಮಸ್ಥಳದಲ್ಲಿ ಶೀಘ್ರದಲ್ಲೇ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ ಎಂದು ಬಿ.ವೈ. ವಿಜಯೇಂದ್ರ…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಡಿಕೆ ಹಾಗೂ ಕಾಳುಮೆಣಸು ಬೆಳೆಗಳಿಗೆ ಹವಾಮಾನ ಆಧಾರಿತ ಬೆಳೆವಿಮೆ…
ಮಹಾರಾಷ್ಟ್ರದಲ್ಲಿ 50ಕ್ಕೂ ಹೆಚ್ಚು ಅಡಿಕೆ ಲಾರಿಗಳನ್ನು ತಡೆಹಿಡಿದ ಘಟನೆ ಅಕ್ರಮ ಆಮದು ಮತ್ತು…
ಕರ್ನಾಟಕದಲ್ಲಿ ದುರ್ಬಲ ಮುಂಗಾರು ಮುಂದುವರಿದಿದ್ದು, ರಾಜ್ಯದ ಬಹುತೇಕ ಭಾಗಗಳಲ್ಲಿ ಚದುರಿದ ಮಳೆಯಷ್ಟೇ ನಿರೀಕ್ಷೆಯಿದೆ.…
ಗೋಕರ್ಣದಲ್ಲಿ ನಡೆಯಲಿರುವ ‘ಅನ್ನಬ್ರಹ್ಮ ಚಾತುರ್ಮಾಸ್ಯ’ದ ಮೂಲಕ ಆಹಾರದ ಮಹತ್ವ ಹಾಗೂ ಅನ್ನ ವ್ಯರ್ಥ…
ಮಾರುಕಟ್ಟೆಯಲ್ಲಿ ತಿರಸ್ಕೃತವಾಗುವ ಗ್ರೇಡ್-ಬಿ ಮಾವು ಮತ್ತು ತೆಂಗುಗಳನ್ನು ಮೌಲ್ಯವರ್ಧಿತ ಉತ್ಪನ್ನಗಳಾಗಿ ಪರಿವರ್ತಿಸಿ ರೈತರಿಗೆ…