Advertisement
ಅಪರಾಧ

ಕೆಲವು ವರ್ಷಗಳ ನಂತರ ಸುಳ್ಯದಲ್ಲಿ ನಡೆದ ಭೀಕರ ಅಪಘಾತ

Share

ಸುಳ್ಯದಲ್ಲಿ  ಕಳೆದ ಕೆಲವು ವರ್ಷಗಳ ಬಳಿಕ ಭೀಕರ ಅಪಘಾತವೊಂದು ನಡೆದಿದೆ. ಸಂಪಾಜೆ ಬಳಿ ಕೆಲ ವರ್ಷದ ಹಿಂದೆ ಭೀಕರವಾಗಿ ಅಪಘಾತ ನಡೆದಿದ್ದರೆ ಅದರ ಬಳಿಕ ಅರಂಬೂರು ಬಳಿ ನಡೆದ ಅಪಘಾತ ಮನ ಕರಗಿಸಿದೆ.


 

ಸುಳ್ಯ: ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸುಳ್ಯ ತಾಲೂಕಿನ ಆಲೆಟ್ಟಿ ಗ್ರಾಮದ ಅರಂಬೂರಿನಲ್ಲಿ ಭಾನುವಾರ ಬೆಳಗ್ಗೆ ಕಾರು ಹಾಗೂ ಬಸ್ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂರು ಮಂದಿ ಮೃತಪಟ್ಟಿದ್ದಾರೆ. ಇಬ್ಬರು ಗಾಯಗೊಂಡಿದ್ದಾರೆ. ಕಾರಿನಲ್ಲಿದ್ದ ರಾಮನಗರ ಜಿಲ್ಲೆಯ ಚೆನ್ನಪಟ್ಟಣ ತಾಲೂಕಿನ ಕೋಲೂರು ನಿವಾಸಿಗಳಾದ ಮಂಜುಳಾ(50) ಸಹೋದರ ನಾಗೇಂದ್ರ(40) ಮತ್ತು ಕಾರು ಚಲಾಯಿಸುತ್ತಿದ್ದ ಸೋಮಣ್ಣ(38) ಮೃತಪಟ್ಟವರು.

ರಾಮನಗರದಿಂದ ಹೊರಟಿದ್ದ ಇವರು  ಸುಳ್ಯದ ತಾಲೂಕಿನ ಚೊಕ್ಕಾಡಿಯಲ್ಲಿನ ಶ್ರೀ ಸತ್ಯಸಾಯಿ ಶಾಲೆಯಲ್ಲಿ  ಓದುತ್ತಿದ್ದ 9 ನೇ ತರಗತಿ ವಿದ್ಯಾರ್ಥಿ ಪೂರ್ವಿಕ್ ಭೇಟಿ ಮಾಡಲು ಬರುತ್ತಿದ್ದರು. ನಾಗೇಂದ್ರ(40) ಹಾಗೂ ಜಯಶೀಲ ಯಾನೆ ಮಲ್ಲಿಕಾ(37)  ಅವರ ಪುತ್ರ ಪೂರ್ವಿಕ ಚೊಕ್ಕಾಡಿಯಲ್ಲಿ  ವ್ಯಾಸಾಂಗ ಮಾಡುತ್ತಿದ್ದ. ಭಾನುವಾರದಾದ್ದರಿಂದ ನೋಡಿ ಮಾತನಾಡಿ ಹೋಗಲು ರಾಮನಗರ ಜಿಲ್ಲೆಯ ಚೆನ್ನಪಟ್ಟಣ ತಾಲೂಕಿನ ಕೋಲೂರಿನಿಂದ ಹೊರಟಿದ್ದರು. ಈ ಸಂದರ್ಭ ನಾಗೇಂದ್ರ ಸಹೋದರಿ ಮಂಜುಳಾ(50)  ಅವರೂ ಆಗಮಿಸಿದ್ದರು. ಇವರ ಮಿತ್ರ ಸೋಮಣ್ಣ(38) ಕಾರು ಚಲಾಯಿಸುತ್ತಿದ್ದರು.  ಕಾರು ಅರಂಬೂರು ಬಳಿ ಬರುತ್ತಿದ್ದಂತೆಯೇ ರಿಕ್ಷಾವನ್ನು ಓವರ್ ಟೇಕ್ ಮಾಡುತ್ತಿದ್ದಾಗ ಎದುರಿನಿಂದ ಬಸ್ಸಿಗೆ ಡಿಕ್ಕಿಯಾಗಿದೆ. ಡಿಕ್ಕಿಯಾದ ರಭಸಕ್ಕೆ ಎಲ್ಲರೂ ಗಾಯಗೊಂಡಿದ್ದರು. ಅಪಘಾತ ಸಂಭವಿಸಿದ ಕೂಡಲೇ ಸ್ಥಳೀಯರು ಸೇರಿ ಗಾಯಾಳುಗಳನ್ನು ಕಾರಿನಿಂದ ಹೊರ ತೆಗೆದು ಸುಳ್ಯದ ಆಸ್ಪತ್ರೆಗೆ ಸಾಗಿಸಿದರು. ಡಿಕ್ಕಿ ಹೊಡೆದ ರಭಸಕ್ಕೆ ಕಾರಿನ ಮುಂಭಾಗ ನುಜ್ಜುಗುಜ್ಜಾಗಿದ್ದು ಬಸ್‍ನ ಮುಂಭಾಗಕ್ಕೆ ಅಂಟಿಕೊಂಡ ರೀತಿಯಲ್ಲಿತ್ತು. ಬಳಿಕ ರೋಪಿನ ಸಹಾಯದಿಂದ ಕಾರನ್ನು ಹಿಂದಕ್ಕೆ ಸರಿಸಿ ಗಾಯಾಳುಗಳನ್ನು ಹೊರ ತೆಗೆಯಲಾಯಿತು. ಕಾರಿನ ಮುಂಭಾಗ ಸಂಪೂರ್ಣ ನುಜ್ಜು ಗುಜ್ಜಾಗಿದ್ದು, ಬಸ್‍ನ ಮುಂಭಾಗವೂ ಜಖಂಗೊಂಡಿದೆ. ವಿಷಯ ತಿಳಿದು ಹಲವು ಮಂದಿ ಸಾರ್ವಜನಿಕರು ಘಟನಾ ಸ್ಥಳಕ್ಕೆ ಮತ್ತು ಆಸ್ಪತ್ರೆಗೆ ಆಗಮಿಸಿದ್ದರು.

ತಲೆಗೆ ಗಂಭೀರ ಗಾಯಗೊಂಡ ಮಂಜುಳಾ ಅವರನ್ನು ಚಿಕಿತ್ಸೆಗಾಗಿ ಸುಳ್ಯದ ಖಾಸಗೀ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ಕರೆ ತಂದರೂ ಮೃತಪಟ್ಟರು. ಗಂಭೀರ ಗಾಯಗೊಂಡ ಸೋಮಣ್ಣ ಮತ್ತು ನಾಗೇಂದ್ರ ಅವರಿಗೆ ಸುಳ್ಯ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯದರೂ ಮೃತಪಟ್ಟಿದ್ದಾರೆ.

ಕಾರಿನಲ್ಲಿದ್ದ ನಾಗೇಂದ್ರ ಪತ್ನಿ ಜಯಶೀಲ ಯಾನೆ ಮಲ್ಲಿಕಾ(37) ಮತ್ತು ಪುತ್ರಿ ತನ್ಮಯಿ(10) ಗಾಯಗೊಂಡಿದ್ದಾರೆ. ಇವರಿಗೆ ಸುಳ್ಯ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಯಿತು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 14-09-2026 | ಸೆ.18ರ ಬಳಿಕ ಮಳೆ ಚಿತ್ರಣ ಬದಲಾಗಬಹುದೇ?

ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…

21 hours ago

ನನ್ನ ಚಿತ್ರ-ನನ್ನ ಖುಷಿ | ಬಣ್ಣಗಳ ಮೂಲಕ ಅರಳಿದ ಗಣೇಶ

ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…

22 hours ago

ನನ್ನ ಚಿತ್ರ-ನನ್ನ ಖುಷಿ | ಬಣ್ಣಗಳ ಲೋಕದಲ್ಲಿ ಪುಟ್ಟ ಮನಸ್ಸಿನ ಖುಷಿ

ನನ್ನ ಚಿತ್ರ – ನನ್ನ ಖುಷಿ | ಗಣೇಶನನ್ನು ಬಣ್ಣಗಳಲ್ಲಿ ಅರಳಿಸಿದ ಪುಟಾಣಿ…

22 hours ago

ವಿಘ್ನಗಳ ಆಚೆ ಕಾಣುವ ಗಣೇಶತತ್ತ್ವ

ಗಣೇಶ ಚತುರ್ಥಿಯನ್ನು ಕೇವಲ ಧಾರ್ಮಿಕ ಆಚರಣೆಯಾಗಿ ನೋಡುವುದಕ್ಕಿಂತ, ಗಣೇಶನ ರೂಪಲಕ್ಷಣಗಳಲ್ಲಿರುವ ಜೀವನದ ಸಂದೇಶಗಳನ್ನು…

1 day ago

ಶಿರಾಡಿ ಘಾಟ್‌ನಲ್ಲಿ ಸೋಮವಾರ ಟ್ರಾಫಿಕ್‌ ಸಂಕಷ್ಟದ ಸಾಧ್ಯತೆ – ಮುಂಜಾಗ್ರತಾ ಕ್ರಮ ಅಗತ್ಯ

ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್‌ನಲ್ಲಿ…

2 days ago