Advertisement
ಸುದ್ದಿಗಳು

ಕೆವಿಜಿ ಶಿಕ್ಷಣ ಸಂಸ್ಥೆಯಲ್ಲಿ ಸ್ಥಾಪಕರ ದಿನಾಚರಣೆ: ದೇಶದ ಅಭಿವೃದ್ಧಿಗೆ ಗ್ರಾಮೀಣ ಪ್ರದೇಶದಲ್ಲಿ ಶಿಕ್ಷಣದ ಬೆಳಕು ಹರಿಯಬೇಕು- ಎಂ.ವೀರಪ್ಪ ಮೊಯ್ಲಿ

Share

ಸುಳ್ಯ: ದೇಶ ಅಭಿವೃದ್ಧಿಯಾಗಬೇಕಾದರೆ ಗ್ರಾಮೀಣ ಪ್ರದೇಶದಲ್ಲಿ ಹೆಚ್ಚು ಶಿಕ್ಷಣ ಸಂಸ್ಥೆಗಳು ಸ್ಥಾಪನೆಯಾಗಿ ಶಿಕ್ಷಣದ ಬೆಳಕು ಎಲ್ಲಡೆ ಹರಿಯುವಂತಾಗಬೇಕು ಎಂದು ಮಾಜಿ ಮುಖ್ಯಮಂತ್ರಿ ಎಂ.ವೀರಪ್ಪ ಮೊಯ್ಲಿ ಹೇಳಿದ್ದಾರೆ.

ಕೆ.ವಿ.ಜಿ ವಿದ್ಯಾಸಂಸ್ಥೆಗಳ ಸ್ಥಾಪಕ ಡಾ.ಕುರುಂಜಿ ವೆಂಕಟ್ರಮಣ ಗೌಡರ 91ನೇ ಜನ್ಮ ದಿನೋತ್ಸವದ ಅಂಗವಾಗಿ ಕೆ.ವಿ.ಜಿ ಶಿಕ್ಷಣ ಸಂಸ್ಥೆಗಳ ವತಿಯಿಂದ ನೆಹರೂ ಸ್ಮಾರಕ ಮಹಾ ವಿದ್ಯಾಲಯದಲ್ಲಿ ನಡೆದ ಸ್ಥಾಪಕರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಶಿಕ್ಷಣದಿಂದ ಮಾತ್ರ ದೇಶದಲ್ಲಿ ಸಮಾನತೆ ತರಲು ಸಾಧ್ಯ. ಆದುದರಿಂದ ದೇಶ ಅಭಿವೃದ್ಧಿಯಾಗಲು ಮತ್ತು ಸಮಾನತೆ ನೆಲೆಸಲು ಎಲ್ಲಾ ರೀತಿಯ ಉನ್ನತ ಶಿಕ್ಷಣ ಎಲ್ಲರಿಗೂ ದೊರೆಯುವಂತಾಗಬೇಕು ಎಂದರು. ಡಾ.ಕುರುಂಜಿಯವರು ಗ್ರಾಮೀಣ ಪ್ರದೇಶದಲ್ಲಿ ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸಿ ಶ್ರೇಷ್ಠ ಶಿಕ್ಷಣವನ್ನು ಧಾರೆಯೆರೆದಿದ್ದಾರೆ ಎಂದು ಅವರು ಸ್ಮರಿಸಿದರು.

Advertisement

ಮಡಿಕೇರಿ ಆಕಾಶವಾಣಿಯ ಹಿರಿಯ ಉದ್ಘೋಷಕ ಸುಬ್ರಾಯ ಸಂಪಾಜೆ ಡಾ.ಕೆ.ವಿ.ಜಿ ಸಂಸ್ಮರಣಾ ಭಾಷಣ ಮಾಡಿದರು. ಡಾ.ಕುರುಂಜಿಯವರು ಶಿಕ್ಷಣ ಸಂಸ್ಥೆಯನ್ನು ಸ್ಥಾಪಿಸಿ ಸಹಸ್ರಾರು ವಿದ್ಯಾರ್ಥಿಗಳನ್ನು ಬೆಳೆಸಿದ್ದಾರೆ. ಜೊತೆಗೆ ಸುಳ್ಯವನ್ನು ಸಾಮಾಜಿಕವಾಗಿ, ಶೈಕ್ಷಣಿಕವಾಗಿ, ಆರ್ಥಿಕವಾಗಿ ಬೆಳೆಯಲು ಕಾರಣರಾಗಿದ್ದಾರೆ ಎಂದು ಹೇಳಿದರು.
ಅಕಾಡೆಮಿ ಆಪ್ ಲಿಬರಲ್ ಎಜ್ಯುಕೇಶನ್‍ನ ಅಧ್ಯಕ್ಷ ಡಾ.ಕೆ.ವಿ.ಚಿದಾನಂದ ಅಧ್ಯಕ್ಷತೆ ವಹಿಸಿದ್ದರು. ಅಕಾಡೆಮಿಯ ನಿರ್ದೇಶಕರಾದ ಶೋಭಾ ಚಿದಾನಂದ, ಕೆ.ವಿ.ಹೇಮನಾಥ್, ಅಕ್ಷಯ್ ಕೆ.ಸಿ, ಕೆವಿಜಿ ಮೆಡಿಕಲ್ ಕಾಲೇಜಿನ ಡೀನ್ ಶೀಲಾ ಜಿ ನಾಯಕ್, ಪ್ರಾಂಶುಪಾಲೆ ಸತ್ಯವತಿ, ದಂತ ಮಹಾ ವಿದ್ಯಾಲದ ಪ್ರಾಂಶುಪಾಲೆ ಮೋಕ್ಷಾ ನಾಯಕ್, ಆಯುರ್ವೇದ ಕಾಲೇಜಿನ ಪ್ರಾಂಶುಪಾಲ ಡಾ.ಎನ್.ಎಸ್.ಶೆಟ್ಟರ್, ಕೆವಿಜಿ ಇಂಟರ್ ನ್ಯಾಷನಲ್ ಪಬ್ಲಿಕ್ ಸ್ಕೂಲ್‍ನ ಪ್ರಾಂಶುಪಾಲ ಸುನಿಲ್ ಕುಮಾರ್, ಭಾಗಮಂಡಲ ಐಟಿಐ ಕಾಲೇಜಿನ ಪ್ರಾಂಶುಪಾಲ ಶ್ರೀಕಾಂತ್, ಕೆವಿಜಿ ಪಾಲಿಟೆಕ್ನಿಕ್ ಕಾಲೇಜಿನ ಪ್ರಾಂಶುಪಾಲ ಬಾಲಕೃಷ್ಣ ಬೊಳ್ಳೂರು, ನರ್ಸಿಂಗ್ ಕಾಲೇಜು ಪ್ರಾಂಶುಪಾಲೆಯರಾದ ಚಂದ್ರಾವತಿ, ಪ್ರೇಮ, ನೆಹರೂ ಸ್ಮಾರಕ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಹರಿಣಿ ಪುತ್ತೂರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

Advertisement

ಕೆವಿಜಿ ಇಂಗ್ಲೀಷ್ ಮಾಧ್ಯಮ ಪ್ರೌಢ ಶಾಲೆಯ ಮುಖ್ಯೋಪಾಧ್ಯಾಯಿನಿ ಶಾಂತಾ ಬೈಪಡಿತ್ತಾಯ ಆಶಯ ಗೀತೆ ಹಾಡಿದರು. ಕೆ.ವಿ.ಜಿ ಇಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲ ಡಾ.ಎನ್.ಎ.ಜ್ಞಾನೇಶ್ ಸ್ವಾಗತಿಸಿದರು. ನೆಹರೂ ಸ್ಮಾರಕ ಮಹಾ ವಿದ್ಯಾಲಯದ ಪ್ರಾಂಶುಪಾಲ ಡಾ.ಕೆ.ಗಿರಿಧರ ಗೌಡ ಮತ್ತು ಕೆವಿಜಿ ಅಮರ ಜ್ಯೋತಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಯಶೋಧಾ ರಾಮಚಂದ್ರ ಅತಿಥಿಗಳ ಪರಿಚಯ ಮಾಡಿದರು. ಕೆ.ವಿ.ಜಿ ಆಯುರ್ವೇದ ಕಾಲೇಜಿನ ಆಡಳಿತಾಧಿಕಾರಿ ಡಾ.ಲೀಲಾಧರ್ ಡಿ.ವಿ. ವಂದಿಸಿದರು. ಭವಾನಿಶಂಕರ ಅಡ್ತಲೆ, ಬೇಬಿ ವಿದ್ಯಾ, ಅನಿಲ್ ಬಿ.ವಿ. ಕಾರ್ಯಕ್ರಮ ನಿರೂಪಿಸಿದರು. ಸಮಾರಂಭದಲ್ಲಿ ಎಂ.ವೀರಪ್ಪ ಮೊಯ್ಲಿ ಮತ್ತು ಸುಬ್ರಾಯ ಸಂಪಾಜೆ ಅವರನ್ನು ಸನ್ಮಾನಿಸಲಾಯಿತು. ಸಮಾರಂಭಕ್ಕೆ ಮುನ್ನ ಅತಿಥಿಗಳು ಡಾ.ಕುರುಂಜಿ ವೆಂಕಟ್ರಮಣ ಗೌಡರ ಪುತ್ಥಳಿಗೆ ಗಣ್ಯರು ಹಾರಾರ್ಪಣೆ ಮಾಡಿದರು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹಲಸಿನ ಹಾಲಿನಿಂದ ವಸಡು ರೋಗಕ್ಕೆ ಚಿಕಿತ್ಸೆ…? ಬ್ರೆಜಿಲ್‌ ವಿಜ್ಞಾನಿಗಳ ಹೊಸ ಸಂಶೋಧನೆ ಆಶಾಭರವಸೆ ಮೂಡಿಸಿದೆ

ಹಲಸಿನ ಹಾಲು, ದಾಳಿಂಬೆ ಸಿಪ್ಪೆಯ ಸಾರ ಮತ್ತು ಸಿಮ್ವಾಸ್ಟಾಟಿನ್‌ ಬಳಸಿ ವಿಜ್ಞಾನಿಗಳು ವಸಡು…

5 hours ago

ಅಡಿಕೆಗೆ ಬ್ಯಾನ್ ಅಲ್ಲ… ಕಲಬೆರಕೆ ಅಡಿಕೆಗೆ ಬ್ಯಾನ್ ಆಗಬೇಕು..! – ಮಲೆನಾಡಿನ ಅಡಿಕೆಗೆ ಪ್ರತ್ಯೇಕ ಮಾರುಕಟ್ಟೆ ಅಗತ್ಯ

ಅಡಿಕೆ ನಿಷೇಧಿಸುವ ಬದಲು ಕಲಬೆರಕೆ ಅಡಿಕೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ…

8 hours ago

ಬೆಲೆ ಕುಸಿದಾಗ ನಷ್ಟ ಬೇಡ – ರಂಬುಟಾನ್‌ ಫ್ರೀಜ್‌ ಮಾಡಿ, ನಂತರ ಮಾರಾಟ ಮಾಡಿ..! ಕೃಷಿಕನ ಹೊಸ ಪ್ರಯೋಗ

ರಂಬುಟಾನ್‌ ಬೆಲೆ ಕುಸಿದಾಗ ಹಣ್ಣನ್ನು ಫ್ರೀಜ್‌ ಮಾಡಿ ನಂತರ ಮಾರಾಟ ಮಾಡಿದರೆ ಉತ್ತಮ…

9 hours ago

ಚೆಸ್‌ ಬೋರ್ಡ್‌ನ ಆಚೆಗೂ ಗೆಲುವು – ಕಾಪುವಿನಲ್ಲಿ ಚೆಸ್ ಹಬ್ಬ, ವಿದ್ಯಾರ್ಥಿಗಳ ಕನಸುಗಳಿಗೆ ವೇದಿಕೆ | ಗ್ರಾಮೀಣ ಕರ್ನಾಟಕದಲ್ಲಿಯೂ ಬೆಳೆಯುತ್ತಿರುವ ಹೊಸ ಕ್ರೀಡಾ ಸಂಸ್ಕೃತಿ

ಕಾಪುವಿನಲ್ಲಿ ನಡೆಯುತ್ತಿರುವ ಕರ್ನಾಟಕ ಸ್ಟೇಟ್ ಸ್ಕೂಲ್ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…

16 hours ago

ಕಾಪುವಿನಲ್ಲಿ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್‌ಶಿಪ್‌ಗೆ ಚಾಲನೆ – 400ಕ್ಕೂ ಅಧಿಕ ಪ್ರತಿಭೆಗಳು ಭಾಗಿ, 24 ಮಂದಿಗೆ ರಾಷ್ಟ್ರಮಟ್ಟದ ಅವಕಾಶ

ಕಾಪುವಿನಲ್ಲಿ ಆರಂಭವಾದ ಕರ್ನಾಟಕ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…

18 hours ago

34 ಟನ್ ಅಡಿಕೆ ವಂಚನೆ – ಅಸ್ಸಾಂ ವ್ಯಾಪಾರಿಗಳಿಗೆ ಹರಿಯಾಣದಲ್ಲಿ ವಂಚನೆ..!

ಅಸ್ಸಾಂನ ಇಬ್ಬರು ಅಡಿಕೆ ವ್ಯಾಪಾರಿಗಳಿಗೆ ಸೇರಿದ ₹1.12 ಕೋಟಿ ಮೌಲ್ಯದ 34 ಟನ್…

19 hours ago