Advertisement
MIRROR FOCUS

ಕೆಸರಲ್ಲ…. ಮಣ್ಣಿನ ಜೊತೆ ಬೆಸುಗೆ ಹೊಂದುವ ಆಟ : ಇದು ಕೆಸರುಗದ್ದೆ ಕ್ರೀಡಾಕೂಟ.

Share

ಆದುನಿಕ ಜಗತ್ತು ವೇಗವಾಗಿ ಬೆಳೆದಂತೆ ಮಣ್ಣು, ನೀರು, ಗಾಳಿ  ಪರಿಸರದಿದ ದೂರವಾಗುವ ಪರಿಸ್ಥಿತಿ ಬರುತ್ತಿದೆ. ಹೀಗಾಗಿ ಇವುಗಳ ಮೇಲಿನ ಪ್ರೀತಿ ದೂರವಾಗುತ್ತಿದೆ.  ಈ ಕಾರಣದಿಂದ ಮಣ್ಣು ಮಲಿನವಾಗುತ್ತಿದೆ, ಗಾಳಿ ಮಲಿನವಾಗುತ್ತಿದೆ, ನೀರು ಬರಿದಾಗುತ್ತಿದೆ, ಪರಿಸರದ ಮೇಲೆ ಪ್ರೀತಿ ಕಡಿಮೆಯಾಗುತ್ತಿದೆ. ಇಂತಹ ಹೊತ್ತಿನಲ್ಲಿ ಈಗ ವಿವಿದೆಡೆ ಮಣ್ಣಿನ ಜೊತೆ ಸಂಬಂಧ ಹೊಂದುವ, ಮೈಯೆಲ್ಲಾ ಮಣ್ಣಾಗುವ ಆಟಗಳ ಕಡೆಗೆ ಕೆಲವು ಯುವಕ ಸಂಘಗಳು ಮಾಡುತ್ತಿವೆ. ಈ ಕಾರಣದಿಂದ ಯುವಕರಿಗೆ


 

ಸುಳ್ಯ: ಗರುಡ ಯುವಕ ಮಂಡಲ ಚೊಕ್ಕಾಡಿ ಮತ್ತು ಮಯೂರಿ ಯುವತಿ ಮಂಡಲ ಚೊಕ್ಕಾಡಿ ಇವರ ಜಂಟಿ ಆಶ್ರಯದಲ್ಲಿ ಕೆಸರುಗದ್ದೆ ಕ್ರೀಡಾಕೂಟ ‘ಕೆಸರುಡೊಂಜಿ ದಿನ’ ಚೊಕ್ಕಾಡಿ ವಠಾರದ ಗದ್ದೆಯಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಕೆಸರುಡೊಂಜಿ ದಿನ ದಲ್ಲಿ ಸಾರ್ವಜನಿಕ ಪುರುಷರಿಗೆ, ಮಹಿಳೆಯರಿಗೆ,ಮಕ್ಕಳಿಗೆ,  ಹಿರಿಯ ನಾಗರಿಕರಿಗೆ,ದಂಪತಿಗಳಿಗೆ ವಿವಿಧ ಸ್ಪರ್ಧೆ ಗಳನ್ನು ಏರ್ಪಡಿಸಲಾಗಿತ್ತು. ಕೆಸರಿನಲ್ಲಿ ಮಿಂದೆದ್ದ ಸ್ಪರ್ಧಿಗಳು ಉತ್ಸಾಹದಿಂದ ಭಾಗವಹಿಸಿದ್ದರು.

 

 

ಹೀಗಾಗಿ ಎಳೆಯರಿಂದ ತೊಡಗಿ ಹಿರಿಯರವರೆಗೂ ಕೆಸರಿನಲ್ಲಿ ಮಿಂದೆದ್ದರು. ಆಟವಾಡಿದರು, ಓಡಿದರು, ಕುಣಿದಾಡಿದರು. ಹಿರಿಯರು ಕೆಸರಿನಲ್ಲಿ ಓಡುವ ಬಗ್ಗೆ ಹೇಳಿದರು, ಕಿರಿಯರು ಓಡಿ, ಹಾರಿ ಅನುಭವಿಸಿದರು. ಇಡೀ ದಿನ ಮೈಗೆ ಕೆಸರು ಮೆತ್ತಿಕೊಂಡು ಸಂತಸಪಟ್ಟರು.

 

 

 

 

ಕುಸುಮಾಧರ ಕೊಳಂಬೆ ತೆಂಗಿನಕಾಯಿ ಒಡೆಯುವುದರ ಮೂಲಕ ಕಾರ್ಯಕ್ರಮ ವನ್ನು ಉದ್ಘಾಟಿಸಿದರು. ಮಯೂರಿ ಯುವತಿ ಮಂಡಲದ ಅಧ್ಯಕ್ಷೆ ಉಷಾಲತಾ ಪಡ್ಪು ಸಭಾಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಯುವಜನ ಸಂಯುಕ್ತ ಮಂಡಳಿ ಅಧ್ಯಕ್ಷ ಶಂಕರ ಪೆರಾಜೆ, ಗರುಡ ಯುವಕ ಮಂಡಲದ ಸ್ಥಾಪಕಾಧ್ಯಕ್ಷ ಶ್ರೀಧರ ಕರ್ಮಜೆ, ಪ್ರಗತಿಪರ ಕೃಷಿಕ ರಾಮಚಂದ್ರ ಪಡ್ಪು, ಜಯಪ್ರಕಾಶ್ ದೊಡ್ಡಿಹಿತ್ಲು ಉಪಸ್ಥಿತರಿದ್ದರು. ಸತೀಶ್ ಪಿಲಿಕಜೆ ಸ್ವಾಗತಿಸಿ, ಮನೋಜ್ ಪಡ್ಪು ವಂದಿಸಿದರು.ತೀರ್ಥೇಶ್ ನಾರ್ಣಕಜೆ ನಿರೂಪಿಸಿದರು.
ಸಂಜೆ ನಡೆದ ಸನ್ಮಾನ ಮತ್ತು ಬಹುಮಾನ ವಿತರಣಾ ಸಮಾರಂಭದ ಅಧ್ಯಕ್ಷತೆಯನ್ನು ಗರುಡ ಯುವಕ ಮಂಡಲದ ಅಧ್ಯಕ್ಷ ಸತೀಶ ಪಿಲಿಕಜೆ ವಹಿಸಿದ್ದರು. ಮೆಸ್ಕಾಂನ ಕಿಶೋರ್ ಅವರನ್ನು ಸನ್ಮಾನಿಸಲಾಯಿತು. ಸಾರ್ವಜನಿಕ ಶಿಕ್ಷಣ ಇಲಾಖೆಯ ಮಾಜಿ ಉಪನಿರ್ದೇಶಕಿ ಶೀಲಾವತಿ ಕೊಳಂಬೆ ಸನ್ಮಾನ ನೆರವೇರಿಸಿದರು. ಮೆಸ್ಕಾಂ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಹರೀಶ್ ನಾಯ್ಕ್ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಿಸಿದರು.
ಮುಖ್ಯ ಅತಿಥಿ ಗಳಾಗಿ ಯುವಜನ ಸಂಯುಕ್ತ ಮಂಡಳಿಯ ಕಾರ್ಯದರ್ಶಿ ತೇಜಸ್ವಿ ಕಡಪಳ, ಗರುಡ ಯುವಕ ಮಂಡಲ ಚೊಕ್ಕಾಡಿಯ ಗೌರವಾಧ್ಯಕ್ಷ ಮುರಳಿ ಚಿಕ್ಕಿನಡ್ಕ ಉಪಸ್ಥಿತರಿದ್ದರು.
ಮಯೂರಿ ಯುವತಿ ಮಂಡಲದ ಅಧ್ಯಕ್ಷೆ ಉಷಾಲತಾ ಪಡ್ಪು ಸ್ವಾಗತಿಸಿ, ರಕ್ಷತ್ ಕರ್ಮಜೆ ಧನ್ಯವಾದಗೈದರು. ಧರ್ಮಪಾಲ ಶೇಣಿ ಕಾರ್ಯಕ್ರಮ ನಿರೂಪಿಸಿದರು.

 

 

 

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 03-09-2026 | ಕರಾವಳಿ–ಮಲೆನಾಡಿನಲ್ಲಿ ಮತ್ತೆ ಮಳೆಯ ಸಾಧ್ಯತೆ…?

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…

8 hours ago

ಹಿಮಾಲಯದಲ್ಲಿ ಹಿಮ ಕರಗಿದರೆ ಅದರ ಪರಿಣಾಮ ಎಲ್ಲಿಗೆ ತಲುಪುತ್ತದೆ? – ಹಿಮಾಲಯದ ದುರಂತದ ಬಳಿಕ ನೇಪಾಳದ ಪ್ರಧಾನಿ ಎಚ್ಚರಿಕೆ

ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…

14 hours ago

ನಾವು ತಿನ್ನುವ ಆಹಾರದಲ್ಲಿ ಕೀಟನಾಶಕ – ಕರ್ನಾಟಕದಲ್ಲಿ 9,176 ಮಾದರಿಗಳಲ್ಲಿ 334 ಮಿತಿ ಮೀರಿವೆ – ದೇಶದ ಅಂಕಿ ಏನು ಹೇಳುತ್ತದೆ?

2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…

22 hours ago

ಒಂದೇ ತೆಂಗಿನ ಮರದಿಂದ ₹10,000 ಆದಾಯ? ಮೌಲ್ಯವರ್ಧನೆಗೆ ಹೊಸ ದಾರಿ ತೋರಿದ ವಿಶ್ವ ತೆಂಗು ದಿನ

ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…

1 day ago

ಹವಾಮಾನ ವರದಿ | 02-09-2026 | ಉತ್ತರ ಭಾರತದ ವಾಯುಭಾರ ಕುಸಿತ ದುರ್ಬಲವಾಗುವ ಸಾಧ್ಯತೆ

ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…

1 day ago

ಕೃಷಿಗೆ ಸಾಲ ಹೆಚ್ಚಿಸಿ – ಅಲ್ಪಾವಧಿ ಮಾತ್ರವಲ್ಲ, ದೀರ್ಘಾವಧಿ ಸಾಲವೂ ಬೇಕು – ಬ್ಯಾಂಕ್‌ಗಳಿಗೆ ನಿರ್ಮಲಾ ಸೀತಾರಾಮನ್ ಸೂಚನೆ

ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್‌ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…

2 days ago