Advertisement
ವಿಶೇಷ ವರದಿಗಳು

ಕೆಸರಿನಲ್ಲಿ ಮಿಂದೆದ್ದ ಬಾಳಿಲ ಶಾಲೆಯ ಮಕ್ಕಳು..! “ಕೈ ಕೆಸರಾದರೆ ಬಾಯಿ ಮೊಸರು” ಎಂದ ಪುಟಾಣಿಗಳು…

Share

ಬಾಳಿಲ: ಶಾಲೆಯಲ್ಲಿ  ನಿರ್ಮಾಣ ಮಾಡಿದ ಗದ್ದೆ. ಈ ಗದ್ದೆಯೊಳಗೆ ಇಳಿದ ವಿದ್ಯಾರ್ಥಿಗಳು. “ಕೈ ಕೆಸರಾದರೆ ಬಾಯಿ ಮೊಸರು” ಎಂಬ ಗಾದೆಯ ನಿಜವಾದ ಅರ್ಥ ಕಲಿತ ಮಕ್ಕಳು. ಉಣ್ಣುವ ಮೊದಲು ರೈತನ ಕಷ್ಟ ಅರಿತ ಬಾಲಕರು… ಇದಿಷ್ಟು ಒಂದು ಗದ್ದೆಯೊಳಗಿನ ಸಣ್ಣ ಕತೆ….

ಗ್ರಾಮೀಣ ಕ್ರೀಡೆಗಳು, ಹಳ್ಳಿ ಆಟಗಳ ಸೊಗಡನ್ನು ತೋರಿಸುವಂತ ಆಟಗಳಿಗೆ ಬಾಳಿಲ ವಿದ್ಯಾಬೋಧಿನಿ ಹಿರಿಯ ಪ್ರಾಥಮಿಕ ಶಾಲೆಯು ಹೆಚ್ಚು ಉತ್ತೇಜಿಸುತ್ತಿದೆ. ಅದರ ಜೊತೆಗೆ ಕೃಷಿ ಬದುಕನ್ನೂ ಈ ಶಾಲೆ ತೆರೆದಿಡುತ್ತದೆ.ಗುರುವಾರ ಶಾಲೆಯ ಗದ್ದೆಯಲ್ಲಿ ನಡೆದ ಗದ್ದೆ ಕೆಸರು ಮಣ್ಣಿನ ಆಟವೇ ಸಾಕ್ಷಿ.

ಸುಳ್ಯ ತಾಲೂಕಿನ ಬಾಳಿಲದಲ್ಲಿರುವ ವಿದ್ಯಾಬೋಧಿನಿ ಹಿರಿಯ ಪ್ರಾಥಮಿಕ ಶಾಲೆಯ ಅಂಗಳದಲ್ಲಿ ಯಾವುದೇ ಆಟ, ಕೈದೋಟಗಳಿಗೆ ಉಪಯೋಗವಾದೆ ಉಳಿದಿದ್ದ ಮೂರು ಸೆಂಟ್ಸ್ ಜಾಗದಲ್ಲಿ ಎಸ್‍ಡಿಎಂಸಿ ಸಮಿತಿಯ ನೆರವಿನೊಂದಿಗೆ ಗದ್ದೆಯ ನಿರ್ಮಾಣ ಮಾಡಿದರು. ಅಕ್ಕಿ ಬೆಳೆಯುವ ರೈತನ ಕಷ್ಟವನ್ನು ಪ್ರತಿ ಹಂತದಿಂದಲೂ ಕಣ್ಣಾರೆ ಕಂಡು ಅನುಭವಿಸಿದ ಮಕ್ಕಳು ಅಕ್ಕಿ ಹೇಗೆ ಬೆಳೆಯಬಹುದು ಎಂಬುದನ್ನು ಇಲ್ಲಿನ 2 ನೇ ತರಗತಿ ಮಕ್ಕಳೂ ನಿರರ್ಗಳವಾಗಿ ಹೇಳಬಲ್ಲರು.

ಮಳೆ ತಡವಾಗಿ ಹಾಗು ನಿಧಾನವಾಗಿ ಬರುವ ಕಾರಣ ಪ್ರಸಕ್ತ ವರ್ಷ ತುಸು ತಡವಾಗಿ ಗದ್ದೆಯ ಕೆಲಸ ಆರಂಭವಾಗಿದೆ. ಮೊದಲನೇ ಹಂತದ ಉಳುಮೆಯನ್ನು ಟ್ರ್ಯಾಕ್ಟರ್ ಮೂಲಕ ಪೂರ್ಣಗೊಂಡಾಗ ಪ್ರತಿಯೊಂದು ಮಕ್ಕಳ ಮುಖದಲ್ಲಿಯೂ ಸಂತೃಪ್ತಿ ಭಾವನೆ ಕಾಣಿಸುತ್ತಿದ್ದವು. ನೀರಿನ ಅಭಾವ ಎದುರಾದಾಗ ಶಾಲೆಯ ಹಿರಿಯ ವಿದ್ಯಾರ್ಥಿ ಶ್ರೀನಾಥ್ ದೋಳ್ತೋಡಿ ತಮ್ಮ ಮನೆಯ ಪಂಪ್ ತಂದು ಶಾಲೆಯ ಬಾವಿಗೆ ಅಳವಡಿಸಿ ನೀರಿನ ವ್ಯವಸ್ಥೆ ಮಾಡಿಕೊಟ್ಟಾಗ ಮಕ್ಕಳಿಗೆ ಕೆಸರುಗದ್ದೆ ಆಟದ ತುಡಿತ ಹೆಚ್ಚಾಯಿತು.

ಭತ್ತದ ಬೇಸಾಯದ ನಂತರ ಶಾಲಾ ಎಸ್‍ಡಿಎಂಸಿ ಸಮಿತಿಯ ಅನುಮತಿ ಪಡೆದ ಮಕ್ಕಳು ಕೆಸರಿನಾಟಕ್ಕೆ ಧುಮುಕಿದರು. ಸಣ್ಣ ಮಕ್ಕಳು ಚಪ್ಪಾಳೆ ಶಿಳ್ಳೆಗಳ ಮೂಲಕ ಸಾಥ್ ನೀಡಿದರು. ಭತ್ತದ ಕೃಷಿ ಕೇವಲ ಹಿರಿಯರಿಗೆ ಸೀಮಿತವಾಗದೆ ತಾವು ಇದರಲ್ಲಿ ಆಸಕ್ತ ಮತ್ತು ಸಮರ್ಥರು ಎಂಬುದನ್ನು ಬಾಳಿಲ ವಿದ್ಯಾಬೋಧಿನಿ ಹಿರಿಯ ಪ್ರಾಥಮಿಕ ಮಕ್ಕಳು ಸಾಬೀತು ಮಾಡಿದರು. ತಾವು ಕೇವಲ ಪಠ್ಯಕ್ಕೆ ಸೀಮಿತವಾಗಿರದೆ ದೇಶದ ಪ್ರಧಾನ ಉದ್ಯೋಗ ಕೃಷಿಯ ಕುರಿತು ಹಾಗು ಅನ್ನ ನೀಡುವ ರೈತನ ಶ್ರಮವನ್ನು ಸ್ವತಃ ತಿಳಿದುಕೊಳ್ಳಲು ಉತ್ತೇಜಿಸಿದ್ದು ಶಿಕ್ಷಕರು ಎನ್ನುನ್ನಾತರೆ ಶಾಲಾ ವಿದ್ಯಾರ್ಥಿಗಳು.

ತಮಗೇ ಬೇಸಾಯವೇನೆಮದರೆ ತಿಳಿದಿರಲಿಲ್ಲ. ಆದರೆ ಕಳೆದೆರಡು ವರ್ಷದಿಂದ ಬೇಸಾಯವನ್ನು ಹಾಗು ಅಕ್ಕಿ ಬೆಳೆಯುವುದರಲ್ಲಿ ರೈತನ ಶ್ರಮವೇನೆಂದು ತಿಳಿಯಿತು. – ಜೀವನ್, ಶಾಲಾ ವಿದ್ಯಾರ್ಥಿ ನಾಯಕ

 

ಗದ್ದೆ  ಮಾಯವಾಗಿದ್ದು, ಅದರ ಸುಂದರ ಅನುಭವದಿಂದ ನಾವು ಮಕ್ಕಳನ್ನು ವಂಚಿತರನ್ನಾಗಿಸಿದ್ದೇವೆ. ನಮ್ಮ ಶಾಲೆಗೆ ಬರುವ ಮಕ್ಕಳು ಗದ್ದೆ ಬೇಸಾಯ ಮತ್ತು ಕೆಸರಿನಾಟದ ಸೊಬಗನ್ನು ಸವಿಯುವುದರಿಂದ ವಂಚಿತರಾಗಬಾರದು ಹಾಗು ಭತ್ತ ಬೇಸಾಯದ ಬಗ್ಗೆ ಇಂದಿನ ಮಕ್ಕಳಿಗೆ ಒಲವು ಮೂಡಿಸಿ ಭತ್ತ ಬೇಸಾಯ ಉಳಿಸಿಕೊಳ್ಳಬೇಕೆಂಬ ಹಂಬಲ ನಮ್ಮದು. – ಜಾಹ್ನವಿ ಕಾಂಚೋಡು, ಶಾಲಾ ಎಸ್‍ಡಿಎಂಸಿ ಅಧ್ಯಕ್ಷೆ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?

ಗುಟ್ಕಾ–ಪಾನ್‌ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…

3 hours ago

ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…

21 hours ago

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

1 day ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

1 day ago

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುತ್ತಿದೆಯೇ? – ಹೊಸ ಅಧ್ಯಯನದ ಎಚ್ಚರಿಕೆ

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…

1 day ago

ಹವಾಮಾನ ಬದಲಾವಣೆಯಿಂದ ರೈತರ ರಕ್ಷಣೆಗೆ ಸರ್ಕಾರದ ತಂತ್ರ – 310 ಜಿಲ್ಲೆಗಳು ಅಪಾಯದಲ್ಲಿ, 2,661 ಸಹಿಷ್ಣು ತಳಿಗಳ ಅಭಿವೃದ್ಧಿ

ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…

2 days ago