ಸವಣೂರು : ಸವಣೂರು ಗ್ರಾಮದ ಆರೆಲ್ತಡಿ ಕೆಡೆಂಜಿ ಭಾಗವನ್ನು ಸಂಪರ್ಕಿಸುವ ಜಿ.ಪಂ ರಸ್ತೆಯ ಮಳೆಗಾಲದ ಆರಂಭದಲ್ಲೇ ಕೆಸರುಗದ್ದೆಯಂತಾಗಿದೆ.
ಮಂಜೇಶ್ವರ ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಚಾಪಳ್ಳ ಎಂಬಲ್ಲಿಂದ ಆರೆಲ್ತಡಿ ಶಾಲೆಯ ಗೇಟಿನ ತನಕ ಸುಮಾರು ಎರಡು ಕಿ.ಮೀ ಉದ್ದದ ಈ ರಸ್ತೆಯ ಅರ್ಧ ಭಾಗ ಡಾಂಬರೀಕರಣ ಹಾಗೂ ಕಾಂಕ್ರಿಟೀಕರಣಗೊಂಡಿದ್ದು ಇನ್ನರ್ಧ ಭಾಗ ಮಣ್ಣಿನ ಕಚ್ಛಾ ರಸ್ತೆಯಾಗಿದೆ.
ಈ ಬಾರಿ ಮಳೆಗಾಲದ ಆರಂಭಕ್ಕೆ ಮೊದಲು ಗ್ರಾಮ ಪಂಚಾಯತ್ ಅನುದಾನದಿಂದ ರಸ್ತೆಯ ಹೊಂಡಗಳಿಗೆ ಮಣ್ಣು ತುಂಬಿಸಿ ಅಲ್ಪಸ್ವಲ್ಪ ದುರಸ್ತಿ ಕಾಮಗಾರಿ ನಡೆಸಲಾಗಿದ್ದರೂ, ಅದು ಪ್ರಥಮ ಮಳೆಗೇ ಕೊಚ್ಚಿ ಹೋಗಿದೆ.ಅಷ್ಟೇ ಅಲ್ಲದೆ ರಸ್ತೆಗೆ ಬಿದ್ದ ಮಳೆಯ ನೀರು ಹರಿದು ಹೋಗಲು ಸೂಕ್ತ ಚರಂಡಿ ವ್ಯವಸ್ಥೆ ಇಲ್ಲದಿರುವುದು ರಸ್ತೆ ಇನ್ನಷ್ಟು ಹದಗೆಡಲು ಕಾರಣವಾಗಿದೆ
ಬೆಳಂದೂರು ಜಿ.ಪಂ.ವ್ಯಾಪ್ತಿಯಲ್ಲಿರುವ ಈ ರಸ್ತೆಯ ಮೂಲಕ ಆರೇಲ್ತಡಿ ಶಾಲೆ,ಅಂಗನವಾಡಿ, ಆರೇಲ್ತಡಿ ದೈವಸ್ಥಾನ ಹಾಗೂ ಇಲ್ಲಿನ ಜನವಸತಿ ಪ್ರದೇಶಗಳಿಗೆ ಹೋಗಬೇಕಾಗಿದೆ.ರಸ್ತೆಯ ತುಂಬಾ ಹೊಂಡಗಳು ತುಂಬಿದ್ದು ಅದರಲ್ಲಿ ನೀರು ತುಂಬಿಕೊಂಡು ಪಾದಚಾರಿಗಳಿಗೂ ಕೆಸರಿನ ಸಿಂಚನವಾಗುತ್ತಿದೆ. ಅಲ್ಲದೆ ರಸ್ತೆಯಲ್ಲಿ ಕೆಸರು ತುಂಬಿಕೊಂಡಿರುವುದರಿಂದ ವಾಹನ ಸವಾರರಿಗೆ ಸಮಸ್ಯೆಯಾಗಿ ಪರಿಣಮಿಸಿದೆ.ಈ ರಸ್ತೆಗೆ ಸುಳ್ಯ ಶಾಸಕ ಎಸ್.ಅಂಗಾರ ಹಾಗೂ ಜಿ.ಪಂ.ಸದಸ್ಯರ ಅನುದಾನ ದಲ್ಲಿ ಒಟ್ಟು 35 ಲಕ್ಷರೂ ಗಳ ಕಾಂಕ್ರೀಟಿಕರಣ ಹಾಗೂ ಡಾಮರೀಕರಣ ನಡೆದಿದೆ.
ಮುಂದಿನ ಎರಡು ಮೂರು ದಿನಗಳಲ್ಲಿ ದೇಶದ ವಾಯುವ್ಯ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ…
ವಿಧಾತ್ರಿ ಎಂ, 6 ನೇ ತರಗತಿ, ರೋಟರಿ ಮಿಡ್ಟೌನ್ ಶಾಲೆ, ಮೈಸೂರು | …
ನೈನಿಕಾ.ಬಿ.ಸಿ , 4ನೇ ತರಗತಿ , ಸೈಂಟ್ ಆನ್ಸ್ ಇಂಗ್ಲಿಷ್ ಮಾಧ್ಯಮ ಶಾಲೆ,…
ನಯೋನಿಕಾ.ಬಿ.ಸಿ., 4 ನೇ ತರಗತಿ, ಸೈಂಟ್ ಆನ್ಸ್ ಶಾಲೆ ಕಡಬ | -…
ನಿಪಾ ವೈರಸ್ ಹರಡುವಿಕೆಯ ವಿರುದ್ಧ ರಾಜ್ಯವು ತನ್ನ ತಡೆಗಟ್ಟುವ ಕ್ರಮಗಳನ್ನು ತೀವ್ರಗೊಳಿಸಿದೆ ಎಂದು…
ನಮ್ಮ ಭಾರತೀಯ ಸಂಸ್ಕೃತಿಯಲ್ಲಿ ಗುರುವಿಗೆ ವಿಶೇಷವಾದ ಸ್ಥಾನವನ್ನು ನೀಡಲಾಗಿದೆ. ದೇವರು ಹಾಗೂ ಗುರು…