ಸವಣೂರು : ಸವಣೂರು ಗ್ರಾಮದ ಆರೆಲ್ತಡಿ ಕೆಡೆಂಜಿ ಭಾಗವನ್ನು ಸಂಪರ್ಕಿಸುವ ಜಿ.ಪಂ ರಸ್ತೆಯ ಮಳೆಗಾಲದ ಆರಂಭದಲ್ಲೇ ಕೆಸರುಗದ್ದೆಯಂತಾಗಿದೆ.
ಮಂಜೇಶ್ವರ ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಚಾಪಳ್ಳ ಎಂಬಲ್ಲಿಂದ ಆರೆಲ್ತಡಿ ಶಾಲೆಯ ಗೇಟಿನ ತನಕ ಸುಮಾರು ಎರಡು ಕಿ.ಮೀ ಉದ್ದದ ಈ ರಸ್ತೆಯ ಅರ್ಧ ಭಾಗ ಡಾಂಬರೀಕರಣ ಹಾಗೂ ಕಾಂಕ್ರಿಟೀಕರಣಗೊಂಡಿದ್ದು ಇನ್ನರ್ಧ ಭಾಗ ಮಣ್ಣಿನ ಕಚ್ಛಾ ರಸ್ತೆಯಾಗಿದೆ.
ಈ ಬಾರಿ ಮಳೆಗಾಲದ ಆರಂಭಕ್ಕೆ ಮೊದಲು ಗ್ರಾಮ ಪಂಚಾಯತ್ ಅನುದಾನದಿಂದ ರಸ್ತೆಯ ಹೊಂಡಗಳಿಗೆ ಮಣ್ಣು ತುಂಬಿಸಿ ಅಲ್ಪಸ್ವಲ್ಪ ದುರಸ್ತಿ ಕಾಮಗಾರಿ ನಡೆಸಲಾಗಿದ್ದರೂ, ಅದು ಪ್ರಥಮ ಮಳೆಗೇ ಕೊಚ್ಚಿ ಹೋಗಿದೆ.ಅಷ್ಟೇ ಅಲ್ಲದೆ ರಸ್ತೆಗೆ ಬಿದ್ದ ಮಳೆಯ ನೀರು ಹರಿದು ಹೋಗಲು ಸೂಕ್ತ ಚರಂಡಿ ವ್ಯವಸ್ಥೆ ಇಲ್ಲದಿರುವುದು ರಸ್ತೆ ಇನ್ನಷ್ಟು ಹದಗೆಡಲು ಕಾರಣವಾಗಿದೆ
ಬೆಳಂದೂರು ಜಿ.ಪಂ.ವ್ಯಾಪ್ತಿಯಲ್ಲಿರುವ ಈ ರಸ್ತೆಯ ಮೂಲಕ ಆರೇಲ್ತಡಿ ಶಾಲೆ,ಅಂಗನವಾಡಿ, ಆರೇಲ್ತಡಿ ದೈವಸ್ಥಾನ ಹಾಗೂ ಇಲ್ಲಿನ ಜನವಸತಿ ಪ್ರದೇಶಗಳಿಗೆ ಹೋಗಬೇಕಾಗಿದೆ.ರಸ್ತೆಯ ತುಂಬಾ ಹೊಂಡಗಳು ತುಂಬಿದ್ದು ಅದರಲ್ಲಿ ನೀರು ತುಂಬಿಕೊಂಡು ಪಾದಚಾರಿಗಳಿಗೂ ಕೆಸರಿನ ಸಿಂಚನವಾಗುತ್ತಿದೆ. ಅಲ್ಲದೆ ರಸ್ತೆಯಲ್ಲಿ ಕೆಸರು ತುಂಬಿಕೊಂಡಿರುವುದರಿಂದ ವಾಹನ ಸವಾರರಿಗೆ ಸಮಸ್ಯೆಯಾಗಿ ಪರಿಣಮಿಸಿದೆ.ಈ ರಸ್ತೆಗೆ ಸುಳ್ಯ ಶಾಸಕ ಎಸ್.ಅಂಗಾರ ಹಾಗೂ ಜಿ.ಪಂ.ಸದಸ್ಯರ ಅನುದಾನ ದಲ್ಲಿ ಒಟ್ಟು 35 ಲಕ್ಷರೂ ಗಳ ಕಾಂಕ್ರೀಟಿಕರಣ ಹಾಗೂ ಡಾಮರೀಕರಣ ನಡೆದಿದೆ.
29.04.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದಲ್ಲಿ ತಾಪಮಾನ…
ಹೆಸರಘಟ್ಟದಲ್ಲಿ ಕಂಡುಬಂದ ಹಕ್ಕಿಜ್ವರವನ್ನು ಆರೋಗ್ಯ ಇಲಾಖೆ ಸಂಪೂರ್ಣ ನಿಯಂತ್ರಣಕ್ಕೆ ತಂದಿದೆ. ಮಾನವ ಸೋಂಕಿನ…
ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ಕೊರತೆಯನ್ನು ತಡೆಯಲು ಅರಣ್ಯ ಇಲಾಖೆ ಕೃತಕ ನೀರಿನ ತೊಟ್ಟಿಗಳನ್ನು…
ರಾಜ್ಯದಲ್ಲಿ ಭಾರಿ ಬಿಸಿಲು ಮುಂದುವರಿದಿದ್ದು, ಕೆಲವೆಡೆ ಗುಡುಗು ಸಹಿತ ಮಳೆಯ ಲಕ್ಷಣಗಳಿವೆ. ಏಪ್ರಿಲ್…
ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕೆ ಸಮೂಹ ಕ್ರಮಗಳು ಫಲ ನೀಡುತ್ತಿವೆ. ಗುತ್ತಿಗಾರಿನಲ್ಲಿ ಸಂವಾದ…
2026ರಲ್ಲಿ ಎಲ್ ನಿನೊ ಪರಿಣಾಮದಿಂದ ಭಾರತ ಸೇರಿ ಏಷ್ಯಾದಲ್ಲಿ ಕಡಿಮೆ ಮಳೆ ಮತ್ತು…