ಸವಣೂರು : ಸವಣೂರು ಗ್ರಾಮದ ಆರೆಲ್ತಡಿ ಕೆಡೆಂಜಿ ಭಾಗವನ್ನು ಸಂಪರ್ಕಿಸುವ ಜಿ.ಪಂ ರಸ್ತೆಯ ಮಳೆಗಾಲದ ಆರಂಭದಲ್ಲೇ ಕೆಸರುಗದ್ದೆಯಂತಾಗಿದೆ.
ಮಂಜೇಶ್ವರ ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಚಾಪಳ್ಳ ಎಂಬಲ್ಲಿಂದ ಆರೆಲ್ತಡಿ ಶಾಲೆಯ ಗೇಟಿನ ತನಕ ಸುಮಾರು ಎರಡು ಕಿ.ಮೀ ಉದ್ದದ ಈ ರಸ್ತೆಯ ಅರ್ಧ ಭಾಗ ಡಾಂಬರೀಕರಣ ಹಾಗೂ ಕಾಂಕ್ರಿಟೀಕರಣಗೊಂಡಿದ್ದು ಇನ್ನರ್ಧ ಭಾಗ ಮಣ್ಣಿನ ಕಚ್ಛಾ ರಸ್ತೆಯಾಗಿದೆ.
ಈ ಬಾರಿ ಮಳೆಗಾಲದ ಆರಂಭಕ್ಕೆ ಮೊದಲು ಗ್ರಾಮ ಪಂಚಾಯತ್ ಅನುದಾನದಿಂದ ರಸ್ತೆಯ ಹೊಂಡಗಳಿಗೆ ಮಣ್ಣು ತುಂಬಿಸಿ ಅಲ್ಪಸ್ವಲ್ಪ ದುರಸ್ತಿ ಕಾಮಗಾರಿ ನಡೆಸಲಾಗಿದ್ದರೂ, ಅದು ಪ್ರಥಮ ಮಳೆಗೇ ಕೊಚ್ಚಿ ಹೋಗಿದೆ.ಅಷ್ಟೇ ಅಲ್ಲದೆ ರಸ್ತೆಗೆ ಬಿದ್ದ ಮಳೆಯ ನೀರು ಹರಿದು ಹೋಗಲು ಸೂಕ್ತ ಚರಂಡಿ ವ್ಯವಸ್ಥೆ ಇಲ್ಲದಿರುವುದು ರಸ್ತೆ ಇನ್ನಷ್ಟು ಹದಗೆಡಲು ಕಾರಣವಾಗಿದೆ
ಬೆಳಂದೂರು ಜಿ.ಪಂ.ವ್ಯಾಪ್ತಿಯಲ್ಲಿರುವ ಈ ರಸ್ತೆಯ ಮೂಲಕ ಆರೇಲ್ತಡಿ ಶಾಲೆ,ಅಂಗನವಾಡಿ, ಆರೇಲ್ತಡಿ ದೈವಸ್ಥಾನ ಹಾಗೂ ಇಲ್ಲಿನ ಜನವಸತಿ ಪ್ರದೇಶಗಳಿಗೆ ಹೋಗಬೇಕಾಗಿದೆ.ರಸ್ತೆಯ ತುಂಬಾ ಹೊಂಡಗಳು ತುಂಬಿದ್ದು ಅದರಲ್ಲಿ ನೀರು ತುಂಬಿಕೊಂಡು ಪಾದಚಾರಿಗಳಿಗೂ ಕೆಸರಿನ ಸಿಂಚನವಾಗುತ್ತಿದೆ. ಅಲ್ಲದೆ ರಸ್ತೆಯಲ್ಲಿ ಕೆಸರು ತುಂಬಿಕೊಂಡಿರುವುದರಿಂದ ವಾಹನ ಸವಾರರಿಗೆ ಸಮಸ್ಯೆಯಾಗಿ ಪರಿಣಮಿಸಿದೆ.ಈ ರಸ್ತೆಗೆ ಸುಳ್ಯ ಶಾಸಕ ಎಸ್.ಅಂಗಾರ ಹಾಗೂ ಜಿ.ಪಂ.ಸದಸ್ಯರ ಅನುದಾನ ದಲ್ಲಿ ಒಟ್ಟು 35 ಲಕ್ಷರೂ ಗಳ ಕಾಂಕ್ರೀಟಿಕರಣ ಹಾಗೂ ಡಾಮರೀಕರಣ ನಡೆದಿದೆ.
23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…