ಸವಣೂರು : ಸವಣೂರು ಗ್ರಾಮದ ಆರೆಲ್ತಡಿ ಕೆಡೆಂಜಿ ಭಾಗವನ್ನು ಸಂಪರ್ಕಿಸುವ ಜಿ.ಪಂ ರಸ್ತೆಯ ಮಳೆಗಾಲದ ಆರಂಭದಲ್ಲೇ ಕೆಸರುಗದ್ದೆಯಂತಾಗಿದೆ.
ಮಂಜೇಶ್ವರ ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಚಾಪಳ್ಳ ಎಂಬಲ್ಲಿಂದ ಆರೆಲ್ತಡಿ ಶಾಲೆಯ ಗೇಟಿನ ತನಕ ಸುಮಾರು ಎರಡು ಕಿ.ಮೀ ಉದ್ದದ ಈ ರಸ್ತೆಯ ಅರ್ಧ ಭಾಗ ಡಾಂಬರೀಕರಣ ಹಾಗೂ ಕಾಂಕ್ರಿಟೀಕರಣಗೊಂಡಿದ್ದು ಇನ್ನರ್ಧ ಭಾಗ ಮಣ್ಣಿನ ಕಚ್ಛಾ ರಸ್ತೆಯಾಗಿದೆ.
ಈ ಬಾರಿ ಮಳೆಗಾಲದ ಆರಂಭಕ್ಕೆ ಮೊದಲು ಗ್ರಾಮ ಪಂಚಾಯತ್ ಅನುದಾನದಿಂದ ರಸ್ತೆಯ ಹೊಂಡಗಳಿಗೆ ಮಣ್ಣು ತುಂಬಿಸಿ ಅಲ್ಪಸ್ವಲ್ಪ ದುರಸ್ತಿ ಕಾಮಗಾರಿ ನಡೆಸಲಾಗಿದ್ದರೂ, ಅದು ಪ್ರಥಮ ಮಳೆಗೇ ಕೊಚ್ಚಿ ಹೋಗಿದೆ.ಅಷ್ಟೇ ಅಲ್ಲದೆ ರಸ್ತೆಗೆ ಬಿದ್ದ ಮಳೆಯ ನೀರು ಹರಿದು ಹೋಗಲು ಸೂಕ್ತ ಚರಂಡಿ ವ್ಯವಸ್ಥೆ ಇಲ್ಲದಿರುವುದು ರಸ್ತೆ ಇನ್ನಷ್ಟು ಹದಗೆಡಲು ಕಾರಣವಾಗಿದೆ
ಬೆಳಂದೂರು ಜಿ.ಪಂ.ವ್ಯಾಪ್ತಿಯಲ್ಲಿರುವ ಈ ರಸ್ತೆಯ ಮೂಲಕ ಆರೇಲ್ತಡಿ ಶಾಲೆ,ಅಂಗನವಾಡಿ, ಆರೇಲ್ತಡಿ ದೈವಸ್ಥಾನ ಹಾಗೂ ಇಲ್ಲಿನ ಜನವಸತಿ ಪ್ರದೇಶಗಳಿಗೆ ಹೋಗಬೇಕಾಗಿದೆ.ರಸ್ತೆಯ ತುಂಬಾ ಹೊಂಡಗಳು ತುಂಬಿದ್ದು ಅದರಲ್ಲಿ ನೀರು ತುಂಬಿಕೊಂಡು ಪಾದಚಾರಿಗಳಿಗೂ ಕೆಸರಿನ ಸಿಂಚನವಾಗುತ್ತಿದೆ. ಅಲ್ಲದೆ ರಸ್ತೆಯಲ್ಲಿ ಕೆಸರು ತುಂಬಿಕೊಂಡಿರುವುದರಿಂದ ವಾಹನ ಸವಾರರಿಗೆ ಸಮಸ್ಯೆಯಾಗಿ ಪರಿಣಮಿಸಿದೆ.ಈ ರಸ್ತೆಗೆ ಸುಳ್ಯ ಶಾಸಕ ಎಸ್.ಅಂಗಾರ ಹಾಗೂ ಜಿ.ಪಂ.ಸದಸ್ಯರ ಅನುದಾನ ದಲ್ಲಿ ಒಟ್ಟು 35 ಲಕ್ಷರೂ ಗಳ ಕಾಂಕ್ರೀಟಿಕರಣ ಹಾಗೂ ಡಾಮರೀಕರಣ ನಡೆದಿದೆ.
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…