ಸವಣೂರು : ಸವಣೂರು ಗ್ರಾಮದ ಆರೆಲ್ತಡಿ ಕೆಡೆಂಜಿ ಭಾಗವನ್ನು ಸಂಪರ್ಕಿಸುವ ಜಿ.ಪಂ ರಸ್ತೆಯ ಮಳೆಗಾಲದ ಆರಂಭದಲ್ಲೇ ಕೆಸರುಗದ್ದೆಯಂತಾಗಿದೆ.
ಮಂಜೇಶ್ವರ ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಚಾಪಳ್ಳ ಎಂಬಲ್ಲಿಂದ ಆರೆಲ್ತಡಿ ಶಾಲೆಯ ಗೇಟಿನ ತನಕ ಸುಮಾರು ಎರಡು ಕಿ.ಮೀ ಉದ್ದದ ಈ ರಸ್ತೆಯ ಅರ್ಧ ಭಾಗ ಡಾಂಬರೀಕರಣ ಹಾಗೂ ಕಾಂಕ್ರಿಟೀಕರಣಗೊಂಡಿದ್ದು ಇನ್ನರ್ಧ ಭಾಗ ಮಣ್ಣಿನ ಕಚ್ಛಾ ರಸ್ತೆಯಾಗಿದೆ.
ಈ ಬಾರಿ ಮಳೆಗಾಲದ ಆರಂಭಕ್ಕೆ ಮೊದಲು ಗ್ರಾಮ ಪಂಚಾಯತ್ ಅನುದಾನದಿಂದ ರಸ್ತೆಯ ಹೊಂಡಗಳಿಗೆ ಮಣ್ಣು ತುಂಬಿಸಿ ಅಲ್ಪಸ್ವಲ್ಪ ದುರಸ್ತಿ ಕಾಮಗಾರಿ ನಡೆಸಲಾಗಿದ್ದರೂ, ಅದು ಪ್ರಥಮ ಮಳೆಗೇ ಕೊಚ್ಚಿ ಹೋಗಿದೆ.ಅಷ್ಟೇ ಅಲ್ಲದೆ ರಸ್ತೆಗೆ ಬಿದ್ದ ಮಳೆಯ ನೀರು ಹರಿದು ಹೋಗಲು ಸೂಕ್ತ ಚರಂಡಿ ವ್ಯವಸ್ಥೆ ಇಲ್ಲದಿರುವುದು ರಸ್ತೆ ಇನ್ನಷ್ಟು ಹದಗೆಡಲು ಕಾರಣವಾಗಿದೆ
ಬೆಳಂದೂರು ಜಿ.ಪಂ.ವ್ಯಾಪ್ತಿಯಲ್ಲಿರುವ ಈ ರಸ್ತೆಯ ಮೂಲಕ ಆರೇಲ್ತಡಿ ಶಾಲೆ,ಅಂಗನವಾಡಿ, ಆರೇಲ್ತಡಿ ದೈವಸ್ಥಾನ ಹಾಗೂ ಇಲ್ಲಿನ ಜನವಸತಿ ಪ್ರದೇಶಗಳಿಗೆ ಹೋಗಬೇಕಾಗಿದೆ.ರಸ್ತೆಯ ತುಂಬಾ ಹೊಂಡಗಳು ತುಂಬಿದ್ದು ಅದರಲ್ಲಿ ನೀರು ತುಂಬಿಕೊಂಡು ಪಾದಚಾರಿಗಳಿಗೂ ಕೆಸರಿನ ಸಿಂಚನವಾಗುತ್ತಿದೆ. ಅಲ್ಲದೆ ರಸ್ತೆಯಲ್ಲಿ ಕೆಸರು ತುಂಬಿಕೊಂಡಿರುವುದರಿಂದ ವಾಹನ ಸವಾರರಿಗೆ ಸಮಸ್ಯೆಯಾಗಿ ಪರಿಣಮಿಸಿದೆ.ಈ ರಸ್ತೆಗೆ ಸುಳ್ಯ ಶಾಸಕ ಎಸ್.ಅಂಗಾರ ಹಾಗೂ ಜಿ.ಪಂ.ಸದಸ್ಯರ ಅನುದಾನ ದಲ್ಲಿ ಒಟ್ಟು 35 ಲಕ್ಷರೂ ಗಳ ಕಾಂಕ್ರೀಟಿಕರಣ ಹಾಗೂ ಡಾಮರೀಕರಣ ನಡೆದಿದೆ.
ಸೆ.8ರಿಂದ ಮಲೆನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮತ್ತೆ ಮಳೆ ಚಟುವಟಿಕೆ ಹೆಚ್ಚಾಗುವ ಸಾಧ್ಯತೆಯಿದೆ.…
ಬೇರೊಬ್ಬರ ಬದುಕಿನೊಂದಿಗೆ ನಿರಂತರ ಹೋಲಿಕೆ ನಮ್ಮ ನೆಮ್ಮದಿ ಮತ್ತು ಆತ್ಮವಿಶ್ವಾಸವನ್ನು ಕಸಿದುಕೊಳ್ಳಬಹುದು. ಮತ್ತೊಬ್ಬರ…
ಶಿಕ್ಷಕರ ದಿನಾಚರಣೆ ಶಿಕ್ಷಕರನ್ನು ಸನ್ಮಾನಿಸುವ ದಿನ ಮಾತ್ರವಲ್ಲ, ಶಿಕ್ಷಕತ್ವ ಮತ್ತು ಶಿಕ್ಷಣದ ನಿಜವಾದ…
ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…
ಬಿಹಾರದ ಯುರೆನ್ನಲ್ಲಿ ಪತ್ತೆಯಾದ 5 ಲಕ್ಷಕ್ಕೂ ಹೆಚ್ಚು ಸುಟ್ಟ ಬೀಜಗಳ ಅಧ್ಯಯನವು ಭಾರತದ…
ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…