Advertisement
ಸುದ್ದಿಗಳು

ಕೆಸಿಎಫ್ ಒಮಾನ್: ರಾಷ್ಟ್ರೀಯ ಮಟ್ಟದ ಪ್ರತಿಭೋತ್ಸವ: ಸೊಹಾರ್ ಝೋನ್ ಚಾಂಪಿಯನ್

Share

ಸುಳ್ಯ: ಕರ್ನಾಟಕ ಕಲ್ಚರಲ್ ಫೌಂಡೇಷನ್ ಒಮಾನ್ ಇದರ ವತಿಯಿಂದ 3ನೇ ಆವೃತ್ತಿಯ ರಾಷ್ಟ್ರೀಯ ಮಟ್ಟದ ಪ್ರತಿಭೋತ್ಸವ – 2019 ವು ನಿಝ್ವದ ಹೈತುರಾತ್ ನ ಅಲ್ ಬುಸ್ತಾನ್ ಫಾರ್ಮ್ ಹೌಸ್ ನಲ್ಲಿ ಶುಕ್ರವಾರದಂದು ಬಹಳ ಯಶಸ್ವಿಯಾಗಿ ನಡೆಯಿತು. ಏಳು ಝೋನ್ ಗಳನ್ನು (ಮಸ್ಕತ್,ಬೌಶರ್,ಸೊಹಾರ್, ನಿಝ್ವ, ಸೀಬ್,ಸಲಾಲ,ಬುರೈಮಿ) ಒಳಗೊಂಡ ಪ್ರತಿಭೋತ್ಸವದಲ್ಲಿ ಕೆಸಿಎಫ್ ಸೊಹಾರ್ ಝೋನ್ ಚಾಂಪಿಯನ್ ಪಟ್ಟವನ್ನು ಉಳಿಸಿಕೊಂಡರೆ, ದ್ವಿತೀಯ ಸ್ಥಾನವನ್ನು ಕೆಸಿಎಫ್ ಸೀಬ್ ಝೋನ್, ತೃತೀಯ ಸ್ಥಾನವನ್ನು ಕೆಸಿಎಫ್ ಬೌಶರ್ ಝೋನ್ ಪಡೆದು ಕೊಂಡರು. ವೈಯಕ್ತಿಕ ಚಾಂಪಿಯನ್ ಆಗಿ ಕೆಸಿಎಫ್ ಸೊಹಾರ್ ಝೋನ್ ನ ಆರಿಫ್ ಮದಕ ಗಿಟ್ಟಿಸಿಕೊಂಡರು.

ಕೆಸಿಎಫ್ ಒಮಾನ್ ರಾಷ್ಟ್ರೀಯ ಸಮಿತಿ ಅಧ್ಯಕ್ಷ ಜನಾಬ್ ಅಯ್ಯೂಬ್ ಕೊಡಿ ಇವರ ಅಧ್ಯಕ್ಷತೆಯಲ್ಲಿ ಜರುಗಿದ ಸಮಾರೋಪ ಸಮಾರಂಭದ
ಉದ್ಘಾಟನೆಯನ್ನು ಕೆಸಿಎಫ್ ಅಂತರರಾಷ್ಟ್ರೀಯ ಸಮಿತಿಯ ಶಿಕ್ಷಣ ವಿಭಾಗದ ಕಾರ್ಯದರ್ಶಿ ಬಹು ಉಮರ್ ಸಖಾಫಿ ಮಿತ್ತೂರ್, ಪ್ರಾಸ್ತಾವಿಕ ಭಾಷಣವನ್ನು ಕೆಸಿಎಫ್ ಒಮಾನ್ ಇದರ ಪ್ರಧಾನ ಕಾರ್ಯದರ್ಶಿ ಸಾದಿಕ್ ಹಾಜಿ ಸುಳ್ಯ ಇವರು ನೆರವೇರಿಸಿದರು.

ಮುಖ್ಯ ಅಥಿತಿಯಾಗಿ ಸಯ್ಯಿದ್ ಮುಹಮ್ಮದ್ ಇಲ್ಯಾಸ್ ಅಹ್ಸನಿ ಅಲ್ ಜೀಲಾನಿ ನಿಝ್ವ, ಕೆಸಿಎಫ್ ಅಂತರರಾಷ್ಟ್ರೀಯ ಸಮಿತಿಯ ಆಡಳಿತ ವಿಭಾಗದ ಕಾರ್ಯದರ್ಶಿ ಇಕ್ಬಾಲ್ ಬೊಲ್ಮಾರ್ ಬರ್ಕ ಹಾಗೂ ಸಂಘಟನಾ ಅಧ್ಯಕ್ಷರಾದ ಸಯ್ಯಿದ್ ಆಬಿದ್ ಅಲ್ ಹೈದ್ರೋಸಿ ತಂಙಳ್ ಕೊಡಗು , ಕೋಶಾಧಿಕಾರಿ ಆರಿಫ್ ಕೊಡಿ , ಶಿಕ್ಷಣ ವಿಭಾಗದ ಅಧ್ಯಕ್ಷರಾದ ಉಬೈದುಲ್ಲಾ ಸಖಾಫಿ, ಹಂಝ ಹಾಜಿ ಕನ್ನಂಗಾರ್ ಅಧ್ಯಕ್ಷರು ಇಹ್ಸಾನ್ ಕರ್ನಾಟಕ, ಇಬ್ರಾಹಿಮ್ ಅತ್ರಾಡಿ ಅಧ್ಯಕ್ಷರು ಸಾಂತ್ವನ ವಿಭಾಗ, ಶಮೀರ್ ಉಸ್ತಾದ್ ಹೂಡೆ ಅಧ್ಯಕ್ಷರು ಪಬ್ಲಿಷಿಂಗ್ ವಿಭಾಗ, ಖಾಸಿಂ ಹಾಜಿ ಅಧ್ಯಕ್ಷರು ಆಡಳಿತ ವಿಭಾಗ ಕೆಸಿಎಫ್ ಒಮಾನ್ ರಾಷ್ಟ್ರೀಯ ಸಮಿತಿ ಮತ್ತ ನಿಝ್ವ ಝೋನ್ ಅಧ್ಯಕ್ಷರಾದ ಬಾಷ‌ ತೀರ್ಥಹಳ್ಳಿ, ಪ್ರತಿಭೋತ್ಸವ ಸ್ವಾಗತ ಸಮಿತಿ ಚಯರ್ಮೆನ್ ಅಬ್ಬಾಸ್ ಮರಕಡ ಇವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ವಿವಿಧ ವಿಭಾಗದ ಕಾರ್ಯದರ್ಶಿಗಳಾದ ಸಂಶದ್ದೀನ್ ಪಾಲ್ತಡ್ಕ, ಸಿದ್ದೀಕ್ ಮಾಂಬ್ಲಿ ಸುಳ್ಯ, ಅಶ್ರಫ್ ಭಾರತ್ ಸುಳ್ಯ, ಇಕ್ಬಾಲ್ ಎರ್ಮಾಲ್, ಇರ್ಫಾನ್ ಕೂರ್ನಡ್ಕ, ಹಾಗೂ ಕೆಸಿಎಫ್ ಒಮಾನ್ ರಾಷ್ಟ್ರೀಯ ಸಮಿತಿಯ ನಾಯಕರು ಗಳು ಮತ್ತು ವಿವಿಧ ಝೋನ್ ನಾಯಕರುಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಫ್ಯಾಮಿಲಿ ಮೀಟ್ ಮತ್ತು ಮಹಿಳೆಯರ ಮತ್ತು ಮಕ್ಕಳ ವಿಭಾಗದ ಸ್ಪರ್ಧಾತ್ಮಕ ಕಾರ್ಯಕ್ರಮ ನಡೆಯಿತು.  ಸ್ವಾಗತ ಸಮಿತಿ ಕನ್ವೀನರ್ ಝುಬೈರ್ ಸ ಅದಿ ಪಾಟ್ರಕೋಡಿ ಸ್ವಾಗತಿಸಿ ,ಕಲಂದರ್ ಬಾವ ಪರಪ್ಪು ಕಾರ್ಯಕ್ರಮ ನಿರೂಪಿಸಿದರು. ಪ್ರಸ್ತುತ ಕಾರ್ಯಕ್ರಮದ ಸಂಪೂರ್ಣ ಉಸ್ತುವಾರಿಯನ್ನು ಕೆಸಿಎಫ್ ನಿಝ್ವ ಝೋನ್ ಸಮಿತಿಯರು ವಹಿಸಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಆಸ್ಪತ್ರೆಗಳಲ್ಲಿ ಬಳಕೆಯಾಗದ ಔಷಧ ಮರುಬಳಕೆ – ಹಣವೂ ಉಳಿಯುತ್ತದೆ, ಪರಿಸರವೂ ಕಾಪಾಡುತ್ತದೆ..!

ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…

2 hours ago

ಮಲೆನಾಡಿನಿಂದ ಬಯಲುನಾಡಿನತ್ತ ಅಡಿಕೆ ಬೆಳೆ ವಿಸ್ತರಣೆ : ರಾಣೆಬೆನ್ನೂರಿನಲ್ಲಿ ಹೆಚ್ಚಿದ ರೈತರ ಆಸಕ್ತಿ

ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಭಾಗದಲ್ಲಿ ಅಡಿಕೆ ಬೆಳೆ ವೇಗವಾಗಿ ವಿಸ್ತರಿಸುತ್ತಿದ್ದು, ಉತ್ತಮ ಆದಾಯದ…

2 hours ago

ಕೊಂಬೆಯಲ್ಲ, ಕಾಂಡದಲ್ಲೇ ಗೊಂಚಲು ಗೊಂಚಲಾಗಿ ಹಣ್ಣು! ಪಶ್ಚಿಮ ಘಟ್ಟದ ಅಪರೂಪದ ‘ಕೋಳಿಜುಟ್ಟು’ ಹಣ್ಣಿನ ಕಥೆ

ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…

9 hours ago

ಕಾಡು ಹಣ್ಣು…. ಕೋಳಿ ಜುಟ್ಟು ಹಣ್ಣು…!

ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…

11 hours ago

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಒಡಿಶಾದಲ್ಲಿ ಭಾರಿ ಮಳೆ, ಹಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್

ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…

20 hours ago

ಭರ್ತಿಯಾಗುವ ಹಂತಕ್ಕೆ ಆಲಮಟ್ಟಿ ಜಲಾಶಯ – 114.896 ಟಿಎಂಸಿ ನೀರು ಸಂಗ್ರಹ, 73 ಸಾವಿರ ಕ್ಯೂಸೆಕ್ ಒಳಹರಿವು

ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…

20 hours ago