ಮಂಗಳೂರು: ಕರ್ನಾಟಕ ರಾಜ್ಯಾದ್ಯಾಂತ ಅತಿವೃಷ್ಟಿ ಮಳೆಯಿಂದಾಗಿ ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ನೆರೆ ಸಂತ್ರಸ್ತರ ನೆರವಿಗೆ ಆಡಳಿತ ಮಂಡಳಿಯ ಅನುಮೋದನೆಯಂತೆ ಪ್ರಾಥಮಿಕ ಹಾಲು ಉತ್ಪಾದಕರ ಸಂಘಗಳಿಂದ, ಒಕ್ಕೂಟದ ನಿರ್ದೇಶಕರುಗಳಿಂದ, ಒಕ್ಕೂಟದ ನೌಕರರ ಒಂದು ದಿನದ ವೇತನವನ್ನು ಮತ್ತು ಒಕ್ಕೂಟದ ದೇಣಿಗೆ ಸೇರಿಸಿ ಮುಖ್ಯಮಂತ್ರಿ ಪರಿಹಾರ ನಿಧಿಗೆ ರೂ.30 ಲಕ್ಷಗಳ ಚೆಕನ್ನು ಹಸ್ತಾಂತರಿಸಿದರು.
ಒಕ್ಕೂಟದ ಅಧ್ಯಕ್ಷರಾದ ರವಿರಾಜ ಹೆಗ್ಡೆ, ಉಪಾಧ್ಯಕ್ಷರಾದ ಪ್ರಕಾಶಚಂದ್ರ ಶೆಟ್ಟಿ, ವ್ಯವಸ್ಥಾಪಕ ನಿರ್ದೇಶಕರಾದ ಡಾ.ಜಿ.ವಿ. ಹೆಗ್ಡೆ ಮತ್ತು ನಿರ್ದೇಶಕರುಗಳಾದ ಕಾಪು ದಿವಾಕರ ಶೆಟ್ಟಿ, ನಾರಾಯಣ ಪ್ರಕಾಶ್, ಪದ್ಮನಾಭ ಶೆಟ್ಟಿ ಅರ್ಕಜೆ, ಸುಧಾಕರ ರೈ, ನರಸಿಂಹ ಕಾಮತ್, ಸ್ಮಿತಾ ಶೆಟ್ಟಿ, ಸವಿತಾ ಶೆಟ್ಟಿ ತಂಡವು ಸನ್ಮಾನ್ಯ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪರವರನ್ನು ಭೇಟಿ ಮಾಡಿ ಮುಖ್ಯಮಂತ್ರಿ ಪರಿಹಾರ ನಿಧಿಗೆ ರೂ.30 ಲಕ್ಷಗಳ ಚೆಕನ್ನು ಹಸ್ತಾಂತರಿಸಿದರು.
ಬೆಳ್ತಂಗಡಿ ತಾಲೂಕಿನ ಮುಂಡಾಜೆ, ಮಿತ್ತಬಾಗಿಲು ಪ್ರದೇಶದಲ್ಲಿ ಸಂಕಷ್ಟಕ್ಕೊಳಗಾದ ಹಾಲು ಉತ್ಪಾದಕರ ರಾಸುಗಳಿಗೆ ಪಶು ಆಹಾರವನ್ನು ಮತ್ತು ಉತ್ತರ ಕರ್ನಾಟಕದ ನೆರೆ ಸಂತ್ರಸ್ತರಿಗೆ 9,000 ಲೀಟರ್ ತೃಪ್ತಿ ಹಾಲು (90 ದಿನಗಳ ದೀರ್ಘ ಬಾಳಿಕೆಯ 180 ಮಿ.ಲೀ.ನ 50,000 ಪ್ಯಾಕೆಟ್) ಹಾಗೂ 650 ಸಂಖ್ಯೆ ಬೆಡ್ಶೀಟ್ಗಳನ್ನು ಖರೀದಿಸಿ ಒಟ್ಟು ರೂ.5.12 ಲಕ್ಷ ಮೌಲ್ಯದ ಉತ್ಪನ್ನಗಳನ್ನು ವಿತರಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಗದಗ ಜಿಲ್ಲೆಯ ಕುರ್ತಕೋಟಿ ಗ್ರಾಮದ ರೈತ ಸಹೋದರರು ತಮ್ಮ 10 ಎಕರೆ ಜಮೀನಿನಲ್ಲಿ…
ಅಡಿಕೆ ಬೆಳೆಗಾರರ ವಾಸ್ತವ ಪರಿಸ್ಥಿತಿಯನ್ನು ಅರಿಯಲು ದ ರೂರಲ್ ಮಿರರ್.ಕಾಂ ನಡೆಸಿದ ಸಮೀಕ್ಷೆಯಲ್ಲಿ…
ಇತ್ತೀಚೆಗೆ ಅಡಿಕೆ ಮಾರುಕಟ್ಟೆಯಲ್ಲಿ ಬೆಲೆಯಲ್ಲಿ ಸ್ವಲ್ಪ ಕುಸಿತ ಕಂಡುಬರುತ್ತಿದೆ. ವ್ಯಾಪಾರಿಗಳ ನಿಧಾನ ಖರೀದಿ,…
ಪೂರ್ವ ಮುಂಗಾರು ಅವಧಿಯಲ್ಲಿ ಗುಡುಗು-ಸಿಡಿಲು ಹಾಗೂ ಗಾಳಿ ಮಳೆಯ ಅಪಾಯ ಇರುವ ಹಿನ್ನೆಲೆಯಲ್ಲಿ…
ರಾಜ್ಯದಲ್ಲಿ ಟ್ರಾನ್ಸ್ಫಾರ್ಮರ್ ಕೊರತೆ ಉಂಟಾದ ಹಿನ್ನೆಲೆಯಲ್ಲಿ ಕೇರಳದಿಂದ ಖರೀದಿ ಮಾಡಲು ಸರ್ಕಾರ ನಿರ್ಧರಿಸಿದೆ.…
ಅಕ್ಕಿ ಗದ್ದೆಗಳನ್ನು ಅಡಿಕೆ ತೋಟಗಳಾಗಿ ಪರಿವರ್ತಿಸಿದಾಗ ಮಣ್ಣಿನ ನೈಟ್ರೋಜನ್ ಲಭ್ಯತೆ ಕಡಿಮೆಯಾಗುತ್ತದೆ ಎಂದು…