ಮಂಗಳೂರು: ಪ್ರಸಕ್ತ ಕೋವಿಡ್ನ ಸಂದಿಗ್ದ ಪರಿಸ್ಥಿತಿಯಲ್ಲಿ ರೈತರಿಗೆ ನೆರವಾಗಲು, ರೈತರು ಮತ್ತು ರೈತ ಸಂಘ ಸಂಸ್ಥೆಯವರು ತಾವು ಬೆಳೆದ ಹೂವು, ಹಣ್ಣು, ತರಕಾರಿಗಳನ್ನು ನೇರ ಮಾರಾಟ ಮಾಡಲು ಕೆ.ಎಂ.ಎಫ್. ಮಳಿಗೆಗಳಲ್ಲಿ ಸ್ಥಳಾವಕಾಶ ಒದಗಿಸಿಕೊಡಲು ಕೆ.ಎಂ.ಎಫ್. ರವರು ಒಪ್ಪಿರುತ್ತಾರೆ. ರೈತರು ತಾವು ಬೆಳೆದ ಹೂವು, ಹಣ್ಣು, ತರಕಾರಿಗಳನ್ನು ಕರ್ನಾಟಕ ಸಹಕಾರಿ ಹಾಲು ಉತ್ಪಾದಕ ಮಹಾಮಂಡಳಿ ನಿಯಮಿತ ಮಳಿಗೆಗಳ ಹತ್ತಿರ ಮಾರಾಟ ಮಾಡಲು ಕೆ.ಎಂ.ಎಫ್. ಮತ್ತು ತೋಟಗಾರಿಕೆ ಇಲಾಖೆ ರವರ ಸಹಯೋಗದೊಂದಿಗೆ ಅವಕಾಶ ಕಲ್ಪಿಸಲಾಗಿದ್ದು, ಆಸಕ್ತ ರೈತರು ಮತ್ತು ರೈತ ಸಂಘ ಸಂಸ್ಥೆಯವರು ಸದರಿ ಅವಕಾಶದ ಅನುಕೂಲ ಪಡೆಯಬಹುದು ಎಂದು ತೋಟಗಾರಿಕಾ ಇಲಾಖೆಯ ಪ್ರಕಟಣೆ ತಿಳಿಸಿದೆ.
ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಬಹುದಾದ ದೂರವಾಣಿ ಸಂಖ್ಯೆ :
ತೋಟಗಾರಿಕೆ ಉಪನಿರ್ದೇಶಕರು, ದ.ಕ.ಜಿ.ಪಂ., ಮಂಗಳೂರು – 9448999226,
ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ಜಿ.ಪಂ., ಮಂಗಳೂರು – 9449258204,
ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ಜಿ.ಪಂ., ಬಂಟ್ವಾಳ – 9448206393,
ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ಜಿ.ಪಂ., ಪುತ್ತೂರು – 9731854527,
ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ಜಿ.ಪಂ., ಸುಳ್ಯ – 9880993238,
ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ಜಿ.ಪಂ., ಬೆಳ್ತಂಗಡಿ – 9980250117,
ಮಾರುಕಟ್ಟೆ ಅಧಿಕಾರಿ, ಕೆ.ಎಂ.ಎಫ್. ಎಂ. ರವಿ, – 9448327317
ಇವರನ್ನು ಸಂಪರ್ಕಿಸಲು ಉಪನಿರ್ದೇಶಕರು, ತೋಟಗಾರಿಕೆ ಇಲಾಖೆ, ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.
ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…
ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…
ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಪರಿಸರ ಸ್ನೇಹಿ ಗಣಪತಿ ಮೂರ್ತಿಗಳನ್ನೇ ಪ್ರತಿಷ್ಠಾಪಿಸಿ ಗಣೇಶೋತ್ಸವ ಆಚರಿಸುವಂತೆ…
ಪಶ್ಚಿಮ ಘಟ್ಟ ಸಂರಕ್ಷಣೆಯ ಹೆಸರಿನಲ್ಲಿ ಕೃಷಿಕರ ಜೀವನೋಪಾಯಕ್ಕೆ ನಿರ್ಬಂಧ ಹೇರಬಾರದು, ಕಸ್ತೂರಿ ರಂಗನ್…
ಸೆಪ್ಟೆಂಬರ್ 5–10ರ ನಂತರ ದೇಶದ ಹಲವು ಭಾಗಗಳಲ್ಲಿ ಮುಂಗಾರು ಮಳೆ ಗಣನೀಯವಾಗಿ ಕಡಿಮೆಯಾಗುವ…
ಕರ್ನಾಟಕದಲ್ಲಿ ಆಗಸ್ಟ್ 23ರಿಂದ 25ರವರೆಗೆ ಹಲವೆಡೆ ಅಲ್ಲಲ್ಲಿ ಸಾಮಾನ್ಯ ಮಳೆಯಷ್ಟೇ ನಿರೀಕ್ಷಿಸಲಾಗಿದ್ದು, ಕರಾವಳಿ…