Advertisement
ಕಾರ್ಯಕ್ರಮಗಳು

ಕೆ.ವಿ.ಜಿ.ಅಮರಜ್ಯೋತಿಯಲ್ಲಿ ಸಂಭ್ರಮದ ‘ಎಜುಸ್ಕೇಪ್’ 2019.

Share

ಸುಳ್ಯ: ನ.31ರಂದು ಸುಳ್ಯದ ಕೆ.ವಿ.ಜಿ.ಅಮರಜ್ಯೋತಿ ಪದವಿಪೂರ್ವ ಕಾಲೇಜಿನಲ್ಲಿ ಸುಳ್ಯ ತಾಲೂಕಿನ ವಿವಿಧ ಶಾಲೆಯ ವಿದ್ಯಾರ್ಥಿಗಳಿಗೆ ‘ಎಜುಸ್ಕೇಪ್’ 2019 ಎಂಬ ವಿನೂತನ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಸಭಾ ಕಾರ್ಯಕ್ರಮದ ಆರಂಭದಲ್ಲಿ ವಿದ್ಯಾರ್ಥಿಗಳು ಪ್ರಾರ್ಥನೆ ಮಾಡಿದರು. ಉದ್ಘಾಟನಾ ಸಮಾರಂಭದ ಮುಖ್ಯ ಅತಿಥಿಗಳಾಗಿ ಕೆ.ವಿ.ಜಿ.ತಾಂತ್ರಿಕ ಮಹಾವಿದ್ಯಾಲಯದ ಪ್ರಾಚಾರ್ಯ ಡಾ.ಎನ್.ಎ.ಜ್ಞಾನೇಶ್ ಆಗಮಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ ಇಂದು ತಂತ್ರಜ್ಞಾನ ವೇಗವಾಗಿ ಬೆಳೆಯುತ್ತಿದೆ, ನೀವೆಲ್ಲರೂ ಇನ್ನೂ ಹೆಚ್ಚಿನ ನೂತನ ಆವಿಷ್ಕಾರಗಳನ್ನು ಕಂಡುಹಿಡಿದು ನಾಡಿಗೆ ಹೆಸರು ತರುವಂತಾಗಲಿ ಎಂದು ಶುಭ ಹಾರೈಸಿದರು.

ಸಭಾ ಕಾರ್ಯಕ್ರಮದ ಬಳಿಕ ಆವಿಷ್ಕಾರ್ ಎಂಬ ಶೀರ್ಷಿಕೆಯಡಿಯಲ್ಲಿ ನೂತನ ವಿಜ್ಞಾನ ಮಾದರಿ ತಯಾರಿ, ಗಾಜಿನ ಬಾಟಲಿಯ ಮೇಲೆ ಕಲಾತ್ಮಕ ಚಿತ್ರಣ, ಜನಪದ ಗೀತೆ, ಚರ್ಚಾಸ್ಪರ್ಧೆ, ಹಾಸ್ಯಾಭಿನಯ ಹಾಗೂ ಚಂದ್ರಯಾನ-2 ಎಂಬ ವಿಷಯದ ಕುರಿತಂತೆ ವಿಷಯ ಮಂಡನೆ ಇವೆಲ್ಲವುಗಳನ್ನೊಳಗೊಂಡ ವಿಶಿಷ್ಟ ಮಾದರಿಯ ಕಾರ್ಯಕ್ರಮಗಳು ಏಕಕಾಲದಲ್ಲಿ ನಾನಾ ವೇದಿಕೆಗಳಲ್ಲಿ ಮೂಡಿಬಂದವು. ಕೆ.ವಿ.ಜಿ. ಸಹಸಂಸ್ಥೆಯ ಅನೇಕ ಉಪನ್ಯಾಸಕರು ನಿರ್ಣಾಯಕರಾಗಿ ಆಗಮಿಸಿದ್ದರು. ಪ್ರಾಚಾರ್ಯರಾದ ಡಾ.ಯಶೋದಾ ರಾಮಚಂದ್ರ, ಉಪಪ್ರಾಚಾರ್ಯ ದೀಪಕ್.ವೈ.ಆರ್ ಉಪಸ್ಥಿತರಿದ್ದರು. ಜಾಕ್ವೆಲಿನ್ ಎಲಿಜಬೆತ್ ಜೋಸ್, ಸಾಬಿರಾ ಹಸನ್ ಹಾಗೂ ಆಯಿಷತ್ ಇರ್ಷಾದಾ ಕಾರ್ಯಕ್ರಮ ನಿರೂಪಣೆ ಮಾಡಿದರು. ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ಆಯೋಜಿಸಲಾಗಿತ್ತು.

ಸ್ಪರ್ಧಾ ವಿಜೇತರಿಗೆ ಅಪರಾಹ್ನ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಕೆ.ವಿ.ಜಿ.ತಾಂತ್ರಿಕ ಮಹಾವಿದ್ಯಾಲಯದ ಉಪಪ್ರಾಚಾರ್ಯ ಡಾ. ಶ್ರೀಧರ್.ಕೆ ಅವರು ಹಸ್ತಾಂತರಿಸಿದರು. ಜೀವಶಾಸ್ತ್ರ ಮತ್ತು ಭೌತಶಾಸ್ತ್ರ ಉಪನ್ಯಾಸಕರಾದ ಧನಶ್ರೀ.ಕೆ ಹಾಗೂ ಭವ್ಯಾ.ಸಿ.ಟಿ. ಕಾರ್ಯಕ್ರಮದ ಸಂಯೋಜಕರಾಗಿ ಆರಂಭದಿಂದಲೂ ಅಹರ್ನಿಶಿ ಶ್ರಮಿಸಿದರು. ಇತರ ಎಲ್ಲ ಉಪನ್ಯಾಸಕರೂ ಸಹಕರಿಸಿದರು. ಕಾರ್ಯಕ್ರಮಕ್ಕೆ ಆಗಮಿಸಿದ್ದ ಎಲ್ಲರಿಗೂ ಬೋಜನ ವ್ಯವಸ್ಥೆ ಮಾಡಲಾಗಿತ್ತು. ರಾಷ್ಟ್ರಗೀತೆಯೊಂದಿಗೆ ಕಾರ್ಯಕ್ರಮ ಸಂಪನ್ನವಾಯಿತು.

ಸ್ಪರ್ಧಾ ವಿಜೇತರ ವಿವರ ಇಂತಿದೆ.
(1) ಬಾಟಲ್ ಪೇಂಟಿಂಗ್ ನಲ್ಲಿ ಪ್ರಥಮ : ಅಪೂರ್ವ.ಪಿ.ಎ. ( ಕೆವಿಜಿ ಇಎಂಎಚ್‍ಎಸ್, ಸುಳ್ಯ), ದ್ವಿತೀಯ: ಪವನ್. (ಸ್ನೇಹ ಪ್ರೌಢಶಾಲೆ,ಸುಳ್ಯ), ತೃತೀಯ: ಅಮಿತ್.ಟಿ.ಎಸ್. (ಸತ್ಯ ಸಾಯಿ ವಿದ್ಯಾ ಕೇಂದ್ರ, ಚೊಕ್ಕಾಡಿ)
(2) ಟೆಕ್ ಅಂಡ್ ಟಾಕ್ ನಲ್ಲಿ ಪ್ರಥಮ : ಭೀಮ ಕಶ್ಯಪ್ (ಸತ್ಯ ಸಾಯಿ ವಿದ್ಯಾ ಕೇಂದ್ರ, ಚೊಕ್ಕಾಡಿ), ದ್ವಿತೀಯ: ವಸುದೇವ.ಡಿ.ಎಂ. (ಸತ್ಯ ಸಾಯಿ ವಿದ್ಯಾ ಕೇಂದ್ರ, ಚೊಕ್ಕಾಡಿ), ತೃತೀಯ: ಅಂಕಿತ್.ಡಿ.ಎ.( ಸೈಂಟ್ ಜೋಸೆಫ್, ಸುಳ್ಯ.)
(3) ಹಾಸ್ಯಾಭಿನಯದಲ್ಲಿ ಪ್ರಥಮ : ಪೃಥ್ವಿ . (ಕೆವಿಜಿಐಪಿಎಸ್,ಸುಳ್ಯ), ದ್ವಿತೀಯ: ಲಿಖಿತ್ (ಸ್ನೇಹ ಪ್ರೌಢಶಾಲೆ,ಸುಳ್ಯ)
(4) ಚರ್ಚಾಸ್ಪರ್ಧೆಯಲ್ಲಿ ಪ್ರಥಮ : ಶಾರಿಕಾ.ಕೆ.ಆರ್ (ಕೆವಿಜಿಐಪಿಎಸ್,ಸುಳ್ಯ), ದ್ವಿತೀಯ: ಕೋಮಲ್ (ಸತ್ಯ ಸಾಯಿ ವಿದ್ಯಾ ಕೇಂದ್ರ, ಚೊಕ್ಕಾಡಿ), ತೃತೀಯ: ವಿದ್ಯಾಶ್ರೀ (ಕೆವಿಜಿಐಪಿಎಸ್,ಸುಳ್ಯ)
(5) ವಿಜ್ಞಾನ ಮಾದರಿ ತಯಾರಿಯಲ್ಲಿ ಪ್ರಥಮ : ವಸುದೇವ.ಡಿ.ಎಂ ಮತ್ತು ಆರ್ಯ.ಎಸ್. (ಸತ್ಯ ಸಾಯಿ ವಿದ್ಯಾ ಕೇಂದ್ರ, ಚೊಕ್ಕಾಡಿ), ದ್ವಿತೀಯ: ತೀರ್ಥೇಶ್.ಕೆ ಮತ್ತು ದೀಪಕ್.ಡಿ.ಟಿ (ಕೆವಿಜಿ ಇಎಂಎಚ್‍ಎಸ್, ಸುಳ್ಯ), ತೃತೀಯ: ಪ್ರಜ್ವಲ್.ಕೆ.ಎಂ ಮತ್ತು ಪ್ರಣಾಮ್.ಎಂ.ಕೆ (ಸ್ನೇಹ ಪ್ರೌಢಶಾಲೆ,ಸುಳ್ಯ)
(6) ಜನಪದ ಗೀತೆಯಲ್ಲಿ ಪ್ರಥಮ : ಲಿಪಿಶ್ರೀ. (ಸೈಂಟ್ ಜೋಸೆಫ್, ಸುಳ್ಯ.), ದ್ವಿತೀಯ: ವಿದ್ಯಾಶ್ರೀ (ಕೆವಿಜಿಐಪಿಎಸ್,ಸುಳ್ಯ), ತೃತೀಯ: ದೀಕ್ಷಾ.ಯು.ಜಿ. ( ಸರ್ಕಾರಿ ಪ್ರೌಢಶಾಲೆ, ಎಣ್ಮೂರು)

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ಮಾರುಕಟ್ಟೆ- ಸದ್ಯ ಮಾರುಕಟ್ಟೆ ಸ್ಥಿರ | ರಬ್ಬರ್‌ ಧಾರಣೆ ಇಳಿಕೆಯ ಹಾದಿ

ರಾಜ್ಯದ ಪ್ರಮುಖ ಅಡಿಕೆ ಮಾರುಕಟ್ಟೆಗಳಲ್ಲಿ ಇಂದು ಬೆಲೆಗಳು ಸಾಮಾನ್ಯವಾಗಿ ಸ್ಥಿರವಾಗಿದ್ದು, ಉತ್ತಮ ಗುಣಮಟ್ಟದ…

4 hours ago

ಹವಾಮಾನ ವರದಿ | 07-03-2026 | ಕರಾವಳಿಯಲ್ಲಿ ಮೋಡ–ಮಳೆಯ ಸುಳಿವು | ಜೋರು ಮಳೆಯ ಲಕ್ಷಣವಿಲ್ಲ

ಕರಾವಳಿ ಜಿಲ್ಲೆಗಳಲ್ಲಿ ಮೋಡ ಹಾಗೂ ಸೆಖೆಯ ವಾತಾವರಣ ಮುಂದುವರಿಯಲಿದ್ದು, ಕೆಲವೆಡೆ ಸಂಜೆ ಅಥವಾ…

4 hours ago

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ವಿರುದ್ಧ ಬಿಗುವಿನ ಕ್ರಮ | ಪಾಕಿಸ್ತಾನದಲ್ಲಿ ವಿಷಕಾರಿ ಅಡಿಕೆ ವಿರುದ್ಧ ದಾಳಿ

ಮ್ಯಾನ್ಮಾರ್‌ನಿಂದ ಅಡಿಕೆ ಕಳ್ಳಸಾಗಣೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಕಠಿಣಗೊಳಿಸಿದೆ.…

7 hours ago

ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧ..

16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಿಸುವ ಮಹತ್ವದ ಘೋಷಣೆ ರಾಜ್ಯ…

11 hours ago

ಕುಕ್ಕೆ–ಕೊಲ್ಲೂರು ದೇವಾಲಯಗಳಿಗೆ ಅಭಿವೃದ್ಧಿ ಪ್ರಾಧಿಕಾರ : ಮುಜರಾಯಿ ಇಲಾಖೆಗೆ ಬಜೆಟ್ ಬಲ

ಕುಕ್ಕೆ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಗಳಿಗೆ ಅಭಿವೃದ್ಧಿ ಪ್ರಾಧಿಕಾರ ರಚಿಸುವ ಮಹತ್ವದ…

11 hours ago

ರೈತರಿಗೆ ಬಜೆಟ್‌ನಲ್ಲಿ ಸಿಕ್ಕ 15 ಘೋಷಣೆಗಳು | ಕೃಷಿ, ಅಡಿಕೆ, ಮೀನುಗಾರಿಕೆ ಕ್ಷೇತ್ರಕ್ಕೆ ವಿಶೇಷ ಯೋಜನೆಗಳು

ರಾಜ್ಯ ಬಜೆಟ್‌ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…

22 hours ago