ಸುಳ್ಯ: ಡಿ.7 ರಂದು ಸುಳ್ಯದ ಕೆ.ವಿ.ಜಿ. ಅಮರಜ್ಯೋತಿ ಪದವಿಪೂರ್ವ ಕಾಲೇಜಿನ ವಾರ್ಷಿಕ ಕ್ರೀಡಾಕೂಟ ಸಂಭ್ರಮದಿಂದ ಜರುಗಿತು.
ಕೆ.ವಿ.ಜಿ. ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಚಾರ್ಯರಾದ ಚಿದಾನಂದ ಬಾಳಿಲ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ಕಾಲೇಜಿನ ಪ್ರಾಚಾರ್ಯರಾದ ಡಾ.ಯಶೋದಾ ರಾಮಚಂದ್ರ ಸಭಾಧ್ಯಕ್ಷತೆ ವಹಿಸಿದ್ದರು. ವಿದ್ಯಾರ್ಥಿಗಳ ಪ್ರಾರ್ಥನೆಯ ಬಳಿಕ ಪ್ರಾಚಾರ್ಯರಾದ ಡಾ.ಯಶೋದಾ ರಾಮಚಂದ್ರ ಎಲ್ಲರನ್ನೂ ಸ್ವಾಗತಿಸಿದರು. ಆಕರ್ಷಕ ಪಥ ಸಂಚಲನದೊಂದಿಗೆ ಕ್ರೀಡಾ ಜ್ಯೋತಿಯನ್ನು ಬೆಳಗಿಸಲಾಯಿತು. ಕಾಲೇಜಿನ ಕ್ರೀಡಾ ಧ್ವಜಾರೋಹಣ ಮಾಡಿ ಕಾರ್ಯಕ್ರಮವನ್ನು ಉದ್ಘಾಟಿಸಿದ ಅತಿಥಿಗಳು ಸದೃಢ ಶರೀರದಲ್ಲಿ ಸದೃಢ ಮನಸ್ಸಿರುತ್ತದೆ. ಮಕ್ಕಳನ್ನು ಅರೋಗ್ಯಕರ ನಾಗರಿಕರನ್ನಾಗಿ ಮಾಡುವಲ್ಲಿ ಆಟೋಟಗಳು ಬಹುಮುಖ್ಯ ಪಾತ್ರ ವಹಿಸುತ್ತವೆ. ಆ ನಿಟ್ಟಿನಲ್ಲಿ ಎಲ್ಲರೂ ಕ್ರೀಡಾ ಮನೋಭಾವದಿಂದ ಆಟೋಟಗಳಲ್ಲಿ ಭಾಗವಹಿಸಿ ಎಂದರು.
ಕೆ.ವಿ.ಜಿ. ಐ.ಪಿ.ಎಸ್ ಪ್ರಾಚಾರ್ಯರಾದ ಸುನಿಲ್ ಕುಮಾರ್.ಕೆ.ಸಿ. ಹಾಗೂ ಉಪಪ್ರಾಚಾರ್ಯರಾದ ದೀಪಕ್.ವೈ.ಆರ್ ಉಪಸ್ಥಿತರಿದ್ದರು. ಉಪನ್ಯಾಸಕಿಯರಾದ ಶೋಭಾ ಮತ್ತು ಮಲ್ಲಿಕಾ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದ ಬಳಿಕ ವಿದ್ಯಾರ್ಥಿನಿಯರಿಂದ ಆಕರ್ಷಕ ಏರೋಬಿಕ್ಸ್ ನೃತ್ಯ ಮೂಡಿಬಂತು. ಕಾಲೇಜಿನ ನಾಲ್ಕು ತಂಡಗಳಾದ ಅಚೀವರ್ಸ್, ಬಿಲ್ಡರ್ಸ್, ಕ್ರಿಯೇಟರ್ಸ್ ಹಾಗೂ ಡೆವಲಪರ್ಸ್ ಇವುಗಳ ನಡುವೆ ನಡೆದ ಜಿದ್ದಾಜಿದ್ದಿನ ಪೈಪೋಟಿಯಲ್ಲಿ ಬಿಲ್ಡರ್ಸ್ ತಂಡವು ಪ್ರಥಮ ಸ್ಥಾನ ಗಳಿಸಿ ಡೆವಲಪರ್ಸ್ ತಂಡವು ಎರಡನೇ ಸ್ಥಾನ ಗಳಿಸಿತು. ಅಪರಾಹ್ನ ಸಮಾರೋಪದ ಬಳಿಕ ಕ್ರೀಡಾ ಧ್ವಜಾವರೋಹಣದ ನಂತರ ರಾಷ್ಟ್ರ ಗೀತೆಯೊಂದಿಗೆ ಕ್ರೀಡಾಕೂಟ ಸಂಪನ್ನವಾಯಿತು.
ಘಾನಾದಲ್ಲಿ ಮರ ಬೆಳೆ ವೈವಿಧ್ಯೀಕರಣ ಯೋಜನೆ ಆರಂಭಗೊಂಡಿದ್ದು, ರೈತರ ಆದಾಯ ಹೆಚ್ಚಿಸಲು ಮತ್ತು…
ಕರ್ನಾಟಕದ ವಿವಿಧ ಭಾಗಗಳಲ್ಲಿ ಮತ್ತೆ ಮಳೆಯ ಚಟುವಟಿಕೆ ಹೆಚ್ಚಾಗಿದ್ದು, ಕರಾವಳಿ, ಮಲೆನಾಡು ಹಾಗೂ…
ರಾಜ್ಯದ ಹಲವೆಡೆ ಮಳೆಯಾಗಿದ್ದು, ಬೆಂಗಳೂರಿನಲ್ಲಿ ಮುಂದಿನ 24 ಗಂಟೆಗಳಲ್ಲಿ ಹಗುರ ಮಳೆಯ ಸಾಧ್ಯತೆ…
ರಾಜ್ಯದಲ್ಲಿ ಹೋಟೆಲ್ಗಳಿಗೆ ವಾಣಿಜ್ಯ LPG ಕೊರತೆಯನ್ನು ಸರಿಪಡಿಸಲು ಮಂಗಳವಾರದಿಂದ ಹೆಚ್ಚುವರಿ ಸಿಲಿಂಡರ್ ಸರಬರಾಜು…
ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಕೊರತೆ ಇಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.…
ಚಿಕ್ಕಮಗಳೂರಿನಲ್ಲಿ ಭಾರಿ ಮಳೆಯಿಂದ ಮರಗಳು ಮತ್ತು ವಿದ್ಯುತ್ ಕಂಬಗಳು ಧರೆಗುರುಳಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.…