ಸುಳ್ಯ: ಪ್ರತಿಷ್ಠಿತ ರಾಜೀವ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯ ಕರ್ನಾಟಕ, ಬೆಂಗಳೂರು ಫೆಬ್ರವರಿ- ಮಾರ್ಚ್ 2019ರಲ್ಲಿ ನಡೆಸಿದ ಅಂತಿಮ ವರ್ಷದ ಬಿ.ಎ.ಯಂ.ಎಸ್ ವಿದ್ಯಾರ್ಥಿಗಳ ಫಲಿತಾಂಶ ಪ್ರಕಟವಾಗಿದ್ದು ಕೆ.ವಿ.ಜಿ ಆಯುರ್ವೇದ ವೈದ್ಯಕೀಯ ಕಾಲೇಜಿಗೆ ಶೇಕಡಾ 100 ಫಲಿತಾಂಶ ದಾಖಲಾಗಿದೆ.
ಅಂತಿಮ ವರ್ಷದ ಬಿ.ಎ.ಯಂ.ಎಸ್ನ 2014-2015ನೇ ಬ್ಯಾಚ್ನಲ್ಲಿ 35 ವಿದ್ಯಾರ್ಥಿಗಳು ಹಾಜರಾಗಿದ್ದು 19 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ಹಾಗೂ 16 ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ ಉತೀರ್ಣರಾಗಿದ್ದಾರೆ.
ಕು.ಅಶೀನಾ ಶಾಹಿನ್ ಓ., ಪ್ರಥಮ, ಕು.ಅಂಜಲಿ ಯಂ.ಯಂ., ದ್ವಿತೀಯ, ಹಾಗೂ ಕು. ಅಂಜನಾಚಂದ್ರನ್ ತೃತೀಯ ಸ್ಥಾನವನ್ನು ಪಡಕೊಂಡಿದ್ದಾರೆ.
ವಿದ್ಯಾರ್ಥಿಗಳನ್ನು ಹಾಗೂ ಉಪನ್ಯಾಸಕರನ್ನು, ಎ.ಓ.ಎಲ್.ಇ ಅಧ್ಯಕ್ಷ ಡಾ. ಚಿದಾನಂದ ಕೆ.ವಿ., ಎ.ಓ.ಎಲ್.ಇ ಖಜಾಂಜಿ ಶೋಭಾ ಚಿದಾನಂದ, ಎ.ಓ.ಎಲ್.ಇ ನಿರ್ದೇಶಕ ಅಕ್ಷಯ್ ಕೆ.ಸಿ., ಎ.ಓ.ಎಲ್.ಇ ನಿರ್ದೇಶಕ ಡಾ. ಐಶ್ವರ್ಯ ಕೆ.ಸಿ., ಕಾಲೇಜಿನ ಪ್ರಾಂಶುಪಾಲ ಡಾ. ಎನ್.ಎಸ್. ಶೆಟ್ಟರ್, ಆಡಳಿತಾಧಿಕಾರಿ ಡಾ. ಲೀಲಾಧರ ಡಿ.ವಿ, ಕಚೇರಿ ಅಧೀಕ್ಷಕ ಚಂದ್ರಕುಮಾರ್ ಕುತ್ಯಾಳ ಅಭಿನಂದಿಸಿದ್ದಾರೆ.
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…