ಸುಳ್ಯ: ಸುಳ್ಯದ ಕೆ.ವಿ.ಜಿ.ಇಂಟರ್ ನ್ಯಾಷನಲ್ ಪಬ್ಲಿಕ್ ಶಾಲೆಯ ವಾರ್ಷಿಕ ಕ್ರೀಡಾಕೂಟ ಜರುಗಿತು.
ಕೆ.ವಿ.ಜಿ.ದಂತ ಮಹಾವಿದ್ಯಾಲಯದ ಪೀರಿಯೋಡಾಂಟ್ರಿಕ್ ವಿಭಾಗ ಮುಖ್ಯಸ್ಥ ಡಾ.ದಯಾಕರ.ಎಂ.ಎಂ ಉದ್ಘಾಟಿಸಿದರು. ಕೆ.ವಿ.ಜಿ.ಅಮರಜ್ಯೋತಿ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯೆ ಡಾ.ಯಶೋದಾ ರಾಮಚಂದ್ರ ಅಧ್ಯಕ್ಷತೆ ವಹಿಸಿದ್ದರು. ಪ್ರಾಪ್ತಿ ಮತ್ತು ಆಶಯ ಪ್ರಾರ್ಥನೆಗೈದರು. ಶಾಲಾ ಪ್ರಾಚಾರ್ಯರಾದ ಸುನಿಲ್ ಕುಮಾರ್.ಕೆ.ಸಿ.ಎಲ್ಲರನ್ನೂ ಸ್ವಾಗತಿಸಿದರು. ಆಕರ್ಷಕ ಪಥ ಸಂಚಲನದೊಂದಿಗೆ ಕ್ರೀಡಾ ಜ್ಯೋತಿಯನ್ನು ಬೆಳಗಿಸಲಾಯಿತು. ಲಕ್ಷ್ಮೀ ಲಾವಣ್ಯ ಅತಿಥಿಗಳನ್ನು ಸಭೆಗೆ ಪರಿಚಯಿಸಿದರು.
ಕೆ.ವಿ.ಜಿ.ಐ.ಟಿ.ಐ ನ ಪ್ರಾಚಾರ್ಯ ಚಿದಾನಂದ ಬಾಳಿಲ, ಡೆಂಟಲ್ ಕಾಲೇಜಿನ ಆಡಳಿತಾಧಿಕಾರಿ ಬಿ.ಟಿ.ಮಾಧವ ಉಪಸ್ಥಿತರಿದ್ದರು. ಉಪ ಪ್ರಾಚಾರ್ಯರಾದ ಶಿಲ್ಪಾ ಬಿದ್ದಪ್ಪ ಹಾಗೂ ನಯನಾ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಬಳಿಕ ಚಿಣ್ಣರಿಂದ ಆಕರ್ಷಕ ಏರೋಬಿಕ್ಸ್ ನೃತ್ಯ ಮೂಡಿಬಂತು. ಶಾಲೆಯ ನಾಲ್ಕು ತಂಡಗಳಾದ ಯೆಲ್ಲೋ ಡೈಮಂಡ್, ಬ್ಲೂ ಸಫೈರ್, ಗ್ರೀನ್ ಎಮರಾಲ್ಡ್ ಹಾಗೂ ರೆಡ್ ರೂಬಿ ಇವುಗಳ ನಡುವೆ ನಡೆದ ಪೈಪೋಟಿಯಲ್ಲಿ ಬ್ಲೂ ಸಫೈರ್ ಪ್ರಥಮ ಸ್ಥಾನ ಗಳಿಸಿ ಯೆಲ್ಲೋ ಡೈಮಂಡ್ ಎರಡನೇ ಸ್ಥಾನ ಪಡೆದುಕೊಂಡಿತು.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.
ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…
ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…
ಅಡಿಕೆಯ ಮೈಟ್ ಬಗ್ಗೆ ಸಿಪಿಸಿಆರ್ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…