ಸುಳ್ಯ:ಸುಳ್ಯದ ಕೆವಿಜಿ ಕಾನೂನು ಕಾಲೇಜಿನಲ್ಲಿ ಸಂವಿಧಾನ ದಿನಾಚರಣೆ ನ.26ರಂದು ನಡೆಯಿತು. ಕಾನೂನು ಕಾಲೇಜು ಸಭಾಂಗಣದಲ್ಲಿ ನಡೆದ ಕಾರ್ಯಕ್ರಮವನ್ನು ಸುಳ್ಯ ತಹಶೀಲ್ದಾರ್ ಎನ್.ಎ.ಕುಂಞಿ ಅಹ್ಮದ್ ಉದ್ಘಾಟಿಸಿದರು. ‘ವಿದ್ಯಾರ್ಥಿಗಳು ಅನ್ಯಾಯ, ಭ್ರಷ್ಟ ತೆ ಕಂಡು ಬಂದರೆ ಅದನ್ನು ವಿರೋಧಿಸಿ ಸಂವಿಧಾನದ ದಾರಿಯಲ್ಲಿ ನಡೆಯಬೇಕು’ ಎಂದು ಅವರು ಕರೆ ನೀಡಿದರು.
ಮುಖ್ಯ ಅತಿಥಿಯಾಗಿದ್ದ ವಕೀಲರ ಸಂಘದ ಅಧ್ಯಕ್ಷ ಎಂ.ವೆಂಕಪ್ಪ ಗೌಡ ಮಾತನಾಡಿ “ಎಲ್ಲ ಧರ್ಮಗ್ರಂಥಗಳಿಂದ ಸಂವಿಧಾನ ಗ್ರಂಥ ಶ್ರೇಷ್ಠ ವಾದುದು. ಅದರ ಪಾಲನೆ ನಮ್ಮಲ್ಲಿ ಆಗಬೇಕು” ಎಂದು ಹೇಳಿದರು.
ಕಾಲೇಜಿನ ಪ್ರಾಂಶುಪಾಲ ಉದಯಕೃಷ್ಣ.ಬಿ ಅಧ್ಯಕ್ಷತೆ ವಹಿಸಿದ್ದರು. ಎನ್ನೆಂಸಿ ವಿಶ್ರಾಂತ ಪ್ರಾಂಶುಪಾಲ ಪ್ರೊ. ಬಾಲಚಂದ್ರ ಗೌಡ ಅತಿಥಿಯಾಗಿದ್ದರು. ಕಾನೂನು ಕಾಲೇಜಿನ ವಿದ್ಯಾರ್ಥಿ ಕ್ಷೇಮಾಧಿಕಾರಿ ಟೀನಾ ಹೆಚ್.ಎಸ್., ಉಪನ್ಯಾಸಕ ಕೌಶಿಕ್, ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು ವೇದಿಕೆಯಲ್ಲಿದ್ದರು.
ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…
ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…
ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…
ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಪರಿಸರ ಸ್ನೇಹಿ ಗಣಪತಿ ಮೂರ್ತಿಗಳನ್ನೇ ಪ್ರತಿಷ್ಠಾಪಿಸಿ ಗಣೇಶೋತ್ಸವ ಆಚರಿಸುವಂತೆ…
ಪಶ್ಚಿಮ ಘಟ್ಟ ಸಂರಕ್ಷಣೆಯ ಹೆಸರಿನಲ್ಲಿ ಕೃಷಿಕರ ಜೀವನೋಪಾಯಕ್ಕೆ ನಿರ್ಬಂಧ ಹೇರಬಾರದು, ಕಸ್ತೂರಿ ರಂಗನ್…
ಸೆಪ್ಟೆಂಬರ್ 5–10ರ ನಂತರ ದೇಶದ ಹಲವು ಭಾಗಗಳಲ್ಲಿ ಮುಂಗಾರು ಮಳೆ ಗಣನೀಯವಾಗಿ ಕಡಿಮೆಯಾಗುವ…