ಸುಳ್ಯ: ಸುಳ್ಯದ ಕೆ.ವಿ.ಜಿ. ತಾಂತ್ರಿಕ ಮಹಾವಿದ್ಯಾಲಯದಲ್ಲಿ ನ.9 ಶನಿವಾರದಂದು ದ್ವಿತೀಯ ಪಿ.ಯು.ಸಿ ವಿದ್ಯಾರ್ಥಿಗಳಿಗೆ `ಕೆ.ವಿ.ಜಿ. ಸೈನ್ಸ್ ಟಾಲೆಂಟ್ ಹಂಟ್ – 2019′ ಎಂಬ ಒಂದು ದಿನದ ಸಂವಾದ, ಸಂದರ್ಶನ ಮತ್ತು ಸ್ಪರ್ಧಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಈ ಕಾರ್ಯಕ್ರಮದ ಅಂಗವಾಗಿ ತಜ್ಞರೊಂದಿಗೆ `ವಿಜ್ಞಾನ, ತಂತ್ರಜ್ಞಾನ ಮತ್ತು ಮುಂದಿನ ಅವಕಾಶ’ ಎಂಬ ಸಂವಾದ ವೇದಿಕೆಯನ್ನು ಆಯೋಜಿಸಲಾಗಿದೆ. ಕೆ.ವಿ.ಜಿ. ತಾಂತ್ರಿಕ ಮಹಾವಿದ್ಯಾಲಯದ ಗ್ರಂಥಾಲಯ, ಪ್ರಯೋಗಾಲಯಗಳ ಸಂದರ್ಶನ, ವಿವಿಧ ವಿಷಯಗಳ, ತಾಂತ್ರಿಕ ಉಪಕರಣಗಳ ಬಗ್ಗೆ ಮಾಹಿತಿ ಒದಗಿಸಲು ಈ ಕಾರ್ಯಕ್ರಮದಲ್ಲಿ ಒತ್ತು ನೀಡಲಾಗಿದೆ. ಈ ಕಾರ್ಯಕ್ರಮದಲ್ಲಿ ಸೈನ್ಸ್ ಮೋಡೆಲ್ ಸ್ಪರ್ಧೆ, ‘ಅಭಿವೃದ್ಧಿಗಾಗಿ ವಿಜ್ಞಾನ ಮತ್ತು ತಂತ್ರಜ್ಞಾನದ ಕೊಡುಗೆ’ ಎಂಬ ಪ್ರಚಲಿತ ವಿಷಯದ ಭಾಷಣ ಸ್ಪರ್ಧೆ ಮತ್ತು ವಿಜ್ಞಾನ ರಸಪ್ರಶ್ನೆ ಮತ್ತು ವಿಜ್ಞಾನ ವಿಚಾರ ಸಂಕಿರಣ ಹಾಗೂ ಪ್ರಬಂಧ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿದೆ.
ವಿಜೇತರಿಗೆ ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರಗಳನ್ನು ನೀಡಲಾಗುವುದು. ಭಾಗವಹಿಸಿದ ಎಲ್ಲಾ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ನೀಡಲಾಗುವುದು. ಈ ಕಾರ್ಯಕ್ರಮದಲ್ಲಿ ಸುಳ್ಯ, ಪುತ್ತೂರು, ಕೊಡಗು ಹಾಗೂ ಕಾಸರಗೋಡು ಜಿಲ್ಲೆಯ ಪಿ.ಯು.ಸಿ ಸೈನ್ಸ್ ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ದಿಕ್ಸೂಚಿ ಭಾಷಣವನ್ನು ಪ್ರಾಂಶುಪಾಲ ಡಾ. ಎನ್.ಎ. ಜ್ಞಾನೇಶ್ ಮಾಡಲಿದ್ದಾರೆ. ಈ ವಿಜ್ಞಾನ ಪ್ರತಿಭಾನ್ವೇಷಣೆಯ ಕಾರ್ಯಕ್ರಮವನ್ನು ಕೆ.ವಿ.ಜಿ. ಶಿಕ್ಷಣ ಸಂಸ್ಥೆಗಳ ಸ್ಥಾಪಕಾಧ್ಯಕ್ಷರಾದ ಡಾ. ಕುರುಂಜಿ ವೆಂಕಟ್ರಮಣ ಗೌಡರ ಜನ್ಮ ದಿನೋತ್ಸವದ ಅಂಗವಾಗಿ ಆಯೋಜಿಸಲಾಗಿದೆ.
ಕಾರ್ಯಕ್ರಮವನ್ನು ಎಒಎಲ್ಇ ಪ್ರಧಾನ ಕಾರ್ಯದರ್ಶಿ ಡಾ. ರೇಣುಕಾ ಪ್ರಸಾದ್ ಕೆ.ವಿ. ಉದ್ಘಾಟಿಸಲಿದ್ದಾರೆ. ಮತ್ತು ವಿವಿಧ ವಿಭಾಗಗಳ ಮುಖ್ಯಸ್ಥರುಗಳು, ಬೋದಕ ಹಾಗೂ ಬೋದಕೇತರ ಸಿಬ್ಬಂದಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ.
ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…
ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…
E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ…
ಕರ್ನಾಟಕದಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳಿದ್ದು, ಸೆಪ್ಟೆಂಬರ್ 4ರಿಂದ ಕರಾವಳಿ ಮತ್ತು…
ಭಾರತದ ಅತಿದೊಡ್ಡ ಕಾಫಿ ಉತ್ಸವ 2027 ಫೆಬ್ರವರಿ 26ರಿಂದ 28ರವರೆಗೆ ಬೆಂಗಳೂರಿನಲ್ಲಿ ನಡೆಯಲಿದ್ದು,…