Advertisement
ಮಾಹಿತಿ

ಕೆ.ವಿ.ಜಿ. ತಾಂತ್ರಿಕ ಮಹಾವಿದ್ಯಾಲಯದಲ್ಲಿ ಕೆ.ವಿ.ಜಿ. ಸೈನ್ಸ್ ಟಾಲೆಂಟ್ ಹಂಟ್ – 2019

Share

ಸುಳ್ಯ: ಸುಳ್ಯದ ಕೆ.ವಿ.ಜಿ. ತಾಂತ್ರಿಕ ಮಹಾವಿದ್ಯಾಲಯದಲ್ಲಿ ನ.9 ಶನಿವಾರದಂದು ದ್ವಿತೀಯ ಪಿ.ಯು.ಸಿ ವಿದ್ಯಾರ್ಥಿಗಳಿಗೆ `ಕೆ.ವಿ.ಜಿ. ಸೈನ್ಸ್ ಟಾಲೆಂಟ್ ಹಂಟ್ – 2019′ ಎಂಬ ಒಂದು ದಿನದ ಸಂವಾದ, ಸಂದರ್ಶನ ಮತ್ತು ಸ್ಪರ್ಧಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಈ ಕಾರ್ಯಕ್ರಮದ ಅಂಗವಾಗಿ ತಜ್ಞರೊಂದಿಗೆ `ವಿಜ್ಞಾನ, ತಂತ್ರಜ್ಞಾನ ಮತ್ತು ಮುಂದಿನ ಅವಕಾಶ’ ಎಂಬ ಸಂವಾದ ವೇದಿಕೆಯನ್ನು ಆಯೋಜಿಸಲಾಗಿದೆ. ಕೆ.ವಿ.ಜಿ. ತಾಂತ್ರಿಕ ಮಹಾವಿದ್ಯಾಲಯದ ಗ್ರಂಥಾಲಯ, ಪ್ರಯೋಗಾಲಯಗಳ ಸಂದರ್ಶನ, ವಿವಿಧ ವಿಷಯಗಳ, ತಾಂತ್ರಿಕ ಉಪಕರಣಗಳ ಬಗ್ಗೆ ಮಾಹಿತಿ ಒದಗಿಸಲು ಈ ಕಾರ್ಯಕ್ರಮದಲ್ಲಿ ಒತ್ತು ನೀಡಲಾಗಿದೆ. ಈ ಕಾರ್ಯಕ್ರಮದಲ್ಲಿ ಸೈನ್ಸ್ ಮೋಡೆಲ್ ಸ್ಪರ್ಧೆ, ‘ಅಭಿವೃದ್ಧಿಗಾಗಿ ವಿಜ್ಞಾನ ಮತ್ತು ತಂತ್ರಜ್ಞಾನದ ಕೊಡುಗೆ’ ಎಂಬ ಪ್ರಚಲಿತ ವಿಷಯದ ಭಾಷಣ ಸ್ಪರ್ಧೆ ಮತ್ತು ವಿಜ್ಞಾನ ರಸಪ್ರಶ್ನೆ ಮತ್ತು ವಿಜ್ಞಾನ ವಿಚಾರ ಸಂಕಿರಣ ಹಾಗೂ ಪ್ರಬಂಧ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿದೆ.

ವಿಜೇತರಿಗೆ ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರಗಳನ್ನು ನೀಡಲಾಗುವುದು. ಭಾಗವಹಿಸಿದ ಎಲ್ಲಾ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ನೀಡಲಾಗುವುದು. ಈ ಕಾರ್ಯಕ್ರಮದಲ್ಲಿ ಸುಳ್ಯ, ಪುತ್ತೂರು, ಕೊಡಗು ಹಾಗೂ ಕಾಸರಗೋಡು ಜಿಲ್ಲೆಯ ಪಿ.ಯು.ಸಿ ಸೈನ್ಸ್ ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ದಿಕ್ಸೂಚಿ ಭಾಷಣವನ್ನು ಪ್ರಾಂಶುಪಾಲ ಡಾ. ಎನ್.ಎ. ಜ್ಞಾನೇಶ್ ಮಾಡಲಿದ್ದಾರೆ. ಈ ವಿಜ್ಞಾನ ಪ್ರತಿಭಾನ್ವೇಷಣೆಯ ಕಾರ್ಯಕ್ರಮವನ್ನು ಕೆ.ವಿ.ಜಿ. ಶಿಕ್ಷಣ ಸಂಸ್ಥೆಗಳ ಸ್ಥಾಪಕಾಧ್ಯಕ್ಷರಾದ ಡಾ. ಕುರುಂಜಿ ವೆಂಕಟ್ರಮಣ ಗೌಡರ ಜನ್ಮ ದಿನೋತ್ಸವದ ಅಂಗವಾಗಿ ಆಯೋಜಿಸಲಾಗಿದೆ.

ಕಾರ್ಯಕ್ರಮವನ್ನು ಎಒಎಲ್‌ಇ ಪ್ರಧಾನ ಕಾರ್ಯದರ್ಶಿ ಡಾ. ರೇಣುಕಾ ಪ್ರಸಾದ್ ಕೆ.ವಿ. ಉದ್ಘಾಟಿಸಲಿದ್ದಾರೆ. ಮತ್ತು ವಿವಿಧ ವಿಭಾಗಗಳ ಮುಖ್ಯಸ್ಥರುಗಳು, ಬೋದಕ ಹಾಗೂ ಬೋದಕೇತರ ಸಿಬ್ಬಂದಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮುಂಗಾರು ಅಬ್ಬರ | ಕರ್ನಾಟಕ ಸೇರಿ ದೇಶದ ಹಲವೆಡೆ ಭಾರೀ ಮಳೆ – ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್, ಕೇರಳದಲ್ಲಿ ರೆಡ್ ಅಲರ್ಟ್

ದೇಶದಲ್ಲಿ ನೈಋತ್ಯ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗುವ…

7 hours ago

ಕೀಟನಾಶಕವೇ ರೈತರ ಜೀವಕ್ಕೆ ಕಂಟಕ…? ರಾಜಸ್ಥಾನದಲ್ಲಿ 2 ವರ್ಷದಲ್ಲಿ 535 ರೈತರ ಸಾವು – ಬೆಚ್ಚಿಬೀಳಿಸಿದ ವರದಿ..!

ರಾಜಸ್ಥಾನದಲ್ಲಿ ಕಳೆದ ಎರಡು ವರ್ಷಗಳಲ್ಲಿ ಕೀಟನಾಶಕ ಬಳಕೆಯಿಂದ 535 ರೈತರು ಮೃತಪಟ್ಟಿರುವುದು ಬಹಿರಂಗವಾಗಿದೆ.…

19 hours ago

ಕೊಟ್ಟಿಯೂರು ದೇವಸ್ಥಾನದಲ್ಲಿ ‘ಬಾವಳಿಕೆಟ್ಟು’ ವಿವಾದ – ಮುಸ್ಲಿಂ ಕುಟುಂಬದ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಆರೋಪ, ನಿಜಾಂಶವೇನು?

ಕೊಟ್ಟಿಯೂರು ದೇವಸ್ಥಾನದಲ್ಲಿ ‘ಬಾವಳಿಕೆಟ್ಟು’ ಆಚರಣೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಹೊಸ ವಿವಾದ ಹುಟ್ಟಿಕೊಂಡಿದೆ.…

21 hours ago

ಹವಾಮಾನ ವರದಿ | 07.06.2026 | ಜೂನ್ 8ರಿಂದ ರಾಜ್ಯದಲ್ಲಿ ಮುಂಗಾರು ಚುರುಕು| ಕರಾವಳಿ-ಮಲೆನಾಡಿನಲ್ಲಿ ಉತ್ತಮ ಮಳೆ, ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ

ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆಗಳು ಜೂ. 8ರಿಂದ ಮತ್ತಷ್ಟು ಚುರುಕುಗೊಳ್ಳುವ ಲಕ್ಷಣಗಳು ಕಂಡುಬಂದಿದ್ದು, ಕರಾವಳಿ…

1 day ago

“ಜಾಕ್‌ಫ್ರೂಟ್‌ ಹಬ್ಬ”ಕ್ಕೆ ಜನಸಾಗರ – 50 ಕ್ಕೂ ಹೆಚ್ಚು ಹಲಸಿನ ಮೌಲ್ಯವರ್ಧಿತ ಉತ್ಪನ್ನಗಳ ಪ್ರದರ್ಶನ

ಜೋಯಿಡಾದಲ್ಲಿ ನಡೆದ ಹಲಸು ಉತ್ಸವದಲ್ಲಿ 50ಕ್ಕೂ ಹೆಚ್ಚು ಮೌಲ್ಯವರ್ಧಿತ ಹಲಸಿನ ಉತ್ಪನ್ನಗಳು ಪ್ರದರ್ಶನಗೊಂಡು…

2 days ago