ಸುಳ್ಯ: ಕೆ.ವಿ.ಜಿ. ತಾಂತ್ರಿಕ ಮಹಾವಿದ್ಯಾಲಯದ ಇಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಶನ್ ಇಂಜಿನಿಯರಿಂಗ್ ವಿಭಾಗವು 2019-20 ನೇ ಸಾಲಿನ ಇಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಶನ್ ಇಂಜಿನಿಯರಿಂಗ್ ಆಸೋಸಿಯೇಶನ್ ಇದರ ಪದಾಧಿಕಾರಿಗಳ ಪದಗ್ರಹಣ ಹಾಗೂ ದ್ವಿತೀಯ ವರ್ಷದ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮವನ್ನು ಕಾಲೇಜಿನ ಅಡಿಟೋರಿಯಂನಲ್ಲಿ ಹಮ್ಮಿಕೊಂಡಿತು.
ಮುಖ್ಯ ಅತಿಥಿಗಳಾಗಿ ಆಗಮಿಸಿದ ವಿದ್ಯಾರಶ್ಮಿ ವಿದ್ಯಾಲಯ ಸವಣೂರು ಇದರ ಪ್ರಾಂಶುಪಾಲರಾದ ಸೀತಾರಾಮ ಕೇವಳ ಕಾರ್ಯಕ್ರಮವನ್ನು ಉದ್ಘಾಟಿಸಿ ವಿದ್ಯಾರ್ಥಿಗಳಿಗೆ “ಇನ್ವೋಲ್ವ್ ಟು ಇವೋಲ್ವ್” ಎಂಬ ವಿಷಯದ ಕುರಿತು ಮಾಹಿತಿಯನ್ನು ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಡಾ. ಎನ್. ಎ. ಜ್ಞಾನೇಶ್ ಮಾತನಾಡಿ ವಿದ್ಯಾರ್ಥಿಗಳು ಉತ್ತಮ ಶಿಸ್ತು, ಗುಣನಡತೆಗಳನ್ನು ಮೈಗೂಡಿಸಿಕೊಳ್ಳಬೇಕು ಹಾಗೂ ವಿದ್ಯಾರ್ಥಿಗಳ ಪರಿಶ್ರಮ ಮತ್ತು ಕಾರ್ಯಕ್ಷಮತೆಯು ಉನ್ನತಮಟ್ಟದಲ್ಲಿರಬೇಕೆಂದು ಕಿವಿಮಾತು ಹೇಳಿದರು.
ವಿಭಾಗದ ಮುಖ್ಯಸ್ಥ ಹಾಗೂ ಅಸೊಸಿಯೇಶನ್ನ ಅಧ್ಯಕ್ಷರಾದ ಡಾ. ರವಿಕುಮಾರ್ ಎಂ.ಎಸ್. ಪ್ರಾಸ್ತಾವಿಕ ಭಾಷಣ ಮಾಡಿದರು. ಅಸೋಸಿಯೇಶನ್ನ ಸಂಯೋಜಕರಾದ ವಿಭಾಗದ ಪ್ರಾಧ್ಯಾಪಕರುಗಳಾದ ಅಶ್ವಿನಿ ಪಿ. ಮತ್ತು ತೃಪ್ತಿ ಪಿ. ಅತಿಥಿಗಳನ್ನು ಸ್ವಾಗತಿಸಿ, ಅಸೊಸಿಯೇಶನ್ನ ಕಾರ್ಯದರ್ಶಿ ಪೂಜ ಹೆಚ್. 2019-20 ನೇ ಸಾಲಿನಲ್ಲಿ ನಡೆದ ವಿಭಾಗದ ವರದಿಯನ್ನು ಸಭೆಗೆ ಮಂಡಿಸಿದರು. ಮಹಿಳಾ ವಿಭಾಗದ ಅಸೊಸಿಯೇಶನ್ನ ಕಾರ್ಯದರ್ಶಿ ಅನನ್ಯ ಪದಾಧಿಕಾರಿಗಳನ್ನು ಪರಿಚಯಿಸಿದರು. ಅಸೊಸಿಯೇಶನ್ನ ಉಪಾಧ್ಯಕ್ಷರಾದ ಅಭಿಶೇಕ್ ಬಿ.ಎಲ್. ವಂದಿಸಿದರು. ಮೈತ್ರಿ ಮತ್ತು ಮಾಳವಿಕ ಪ್ರಾರ್ಥಿಸಿ, ಸಿಂಚನ ಎ. ಮತ್ತು ಮಸಾಲಿ ಗಿರೀಶ್ ಬಸವರಾಜ್ ಕಾರ್ಯಕ್ರಮವನ್ನು ನಿರೂಪಿಸಿದರು.
ವಿಭಾಗದ ಹಿರಿಯ ವಿದ್ಯಾರ್ಥಿಗಳು ನೂತನ ವಿದ್ಯಾರ್ಥಿಗಳನ್ನು ಈ ವಿಭಾಗಕ್ಕೆ ಆದರದಿಂದ ಬರಮಾಡಿಕೊಂಡು ವಿವಿಧ ವಿನೋದಾವಳಿ ಕಾರ್ಯಕ್ರಮಗಳನ್ನು ನೀಡಿದರು. ಈ ಸಂದರ್ಭದಲ್ಲಿ ವಿಭಾಗದ ಪ್ರಾಧ್ಯಾಪಕರು ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…
ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.