ಸುಳ್ಯ: ಕೆ.ವಿ.ಜಿ. ತಾಂತ್ರಿಕ ಮಹಾವಿದ್ಯಾಲಯದ ಇಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಶನ್ ಇಂಜಿನಿಯರಿಂಗ್ ವಿಭಾಗವು 2019-20 ನೇ ಸಾಲಿನ ಇಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಶನ್ ಇಂಜಿನಿಯರಿಂಗ್ ಆಸೋಸಿಯೇಶನ್ ಇದರ ಪದಾಧಿಕಾರಿಗಳ ಪದಗ್ರಹಣ ಹಾಗೂ ದ್ವಿತೀಯ ವರ್ಷದ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮವನ್ನು ಕಾಲೇಜಿನ ಅಡಿಟೋರಿಯಂನಲ್ಲಿ ಹಮ್ಮಿಕೊಂಡಿತು.
ಮುಖ್ಯ ಅತಿಥಿಗಳಾಗಿ ಆಗಮಿಸಿದ ವಿದ್ಯಾರಶ್ಮಿ ವಿದ್ಯಾಲಯ ಸವಣೂರು ಇದರ ಪ್ರಾಂಶುಪಾಲರಾದ ಸೀತಾರಾಮ ಕೇವಳ ಕಾರ್ಯಕ್ರಮವನ್ನು ಉದ್ಘಾಟಿಸಿ ವಿದ್ಯಾರ್ಥಿಗಳಿಗೆ “ಇನ್ವೋಲ್ವ್ ಟು ಇವೋಲ್ವ್” ಎಂಬ ವಿಷಯದ ಕುರಿತು ಮಾಹಿತಿಯನ್ನು ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಡಾ. ಎನ್. ಎ. ಜ್ಞಾನೇಶ್ ಮಾತನಾಡಿ ವಿದ್ಯಾರ್ಥಿಗಳು ಉತ್ತಮ ಶಿಸ್ತು, ಗುಣನಡತೆಗಳನ್ನು ಮೈಗೂಡಿಸಿಕೊಳ್ಳಬೇಕು ಹಾಗೂ ವಿದ್ಯಾರ್ಥಿಗಳ ಪರಿಶ್ರಮ ಮತ್ತು ಕಾರ್ಯಕ್ಷಮತೆಯು ಉನ್ನತಮಟ್ಟದಲ್ಲಿರಬೇಕೆಂದು ಕಿವಿಮಾತು ಹೇಳಿದರು.
ವಿಭಾಗದ ಮುಖ್ಯಸ್ಥ ಹಾಗೂ ಅಸೊಸಿಯೇಶನ್ನ ಅಧ್ಯಕ್ಷರಾದ ಡಾ. ರವಿಕುಮಾರ್ ಎಂ.ಎಸ್. ಪ್ರಾಸ್ತಾವಿಕ ಭಾಷಣ ಮಾಡಿದರು. ಅಸೋಸಿಯೇಶನ್ನ ಸಂಯೋಜಕರಾದ ವಿಭಾಗದ ಪ್ರಾಧ್ಯಾಪಕರುಗಳಾದ ಅಶ್ವಿನಿ ಪಿ. ಮತ್ತು ತೃಪ್ತಿ ಪಿ. ಅತಿಥಿಗಳನ್ನು ಸ್ವಾಗತಿಸಿ, ಅಸೊಸಿಯೇಶನ್ನ ಕಾರ್ಯದರ್ಶಿ ಪೂಜ ಹೆಚ್. 2019-20 ನೇ ಸಾಲಿನಲ್ಲಿ ನಡೆದ ವಿಭಾಗದ ವರದಿಯನ್ನು ಸಭೆಗೆ ಮಂಡಿಸಿದರು. ಮಹಿಳಾ ವಿಭಾಗದ ಅಸೊಸಿಯೇಶನ್ನ ಕಾರ್ಯದರ್ಶಿ ಅನನ್ಯ ಪದಾಧಿಕಾರಿಗಳನ್ನು ಪರಿಚಯಿಸಿದರು. ಅಸೊಸಿಯೇಶನ್ನ ಉಪಾಧ್ಯಕ್ಷರಾದ ಅಭಿಶೇಕ್ ಬಿ.ಎಲ್. ವಂದಿಸಿದರು. ಮೈತ್ರಿ ಮತ್ತು ಮಾಳವಿಕ ಪ್ರಾರ್ಥಿಸಿ, ಸಿಂಚನ ಎ. ಮತ್ತು ಮಸಾಲಿ ಗಿರೀಶ್ ಬಸವರಾಜ್ ಕಾರ್ಯಕ್ರಮವನ್ನು ನಿರೂಪಿಸಿದರು.
ವಿಭಾಗದ ಹಿರಿಯ ವಿದ್ಯಾರ್ಥಿಗಳು ನೂತನ ವಿದ್ಯಾರ್ಥಿಗಳನ್ನು ಈ ವಿಭಾಗಕ್ಕೆ ಆದರದಿಂದ ಬರಮಾಡಿಕೊಂಡು ವಿವಿಧ ವಿನೋದಾವಳಿ ಕಾರ್ಯಕ್ರಮಗಳನ್ನು ನೀಡಿದರು. ಈ ಸಂದರ್ಭದಲ್ಲಿ ವಿಭಾಗದ ಪ್ರಾಧ್ಯಾಪಕರು ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
29.04.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದಲ್ಲಿ ತಾಪಮಾನ…
ಹೆಸರಘಟ್ಟದಲ್ಲಿ ಕಂಡುಬಂದ ಹಕ್ಕಿಜ್ವರವನ್ನು ಆರೋಗ್ಯ ಇಲಾಖೆ ಸಂಪೂರ್ಣ ನಿಯಂತ್ರಣಕ್ಕೆ ತಂದಿದೆ. ಮಾನವ ಸೋಂಕಿನ…
ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ಕೊರತೆಯನ್ನು ತಡೆಯಲು ಅರಣ್ಯ ಇಲಾಖೆ ಕೃತಕ ನೀರಿನ ತೊಟ್ಟಿಗಳನ್ನು…
ರಾಜ್ಯದಲ್ಲಿ ಭಾರಿ ಬಿಸಿಲು ಮುಂದುವರಿದಿದ್ದು, ಕೆಲವೆಡೆ ಗುಡುಗು ಸಹಿತ ಮಳೆಯ ಲಕ್ಷಣಗಳಿವೆ. ಏಪ್ರಿಲ್…
ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕೆ ಸಮೂಹ ಕ್ರಮಗಳು ಫಲ ನೀಡುತ್ತಿವೆ. ಗುತ್ತಿಗಾರಿನಲ್ಲಿ ಸಂವಾದ…
2026ರಲ್ಲಿ ಎಲ್ ನಿನೊ ಪರಿಣಾಮದಿಂದ ಭಾರತ ಸೇರಿ ಏಷ್ಯಾದಲ್ಲಿ ಕಡಿಮೆ ಮಳೆ ಮತ್ತು…