ಸುಳ್ಯ: ಕೆ.ವಿ.ಜಿ. ದಂತ ಮಹಾವಿದ್ಯಾಲಯದ ವಾರ್ಷಿಕ ಕ್ರೀಡಾಕೂಟ ಕೆ.ವಿ.ಜಿ. ಕ್ರೀಡಾಂಗಣದಲ್ಲಿ ನಡೆಯಿತು. ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ನ ಪ್ರಧಾನ ಕಾರ್ಯದರ್ಶಿ ಡಾ.ರೇಣುಕಾಪ್ರಸಾದ್ ಕೆ.ವಿ. ಕ್ರೀಡಾಕೂಟವನ್ನು ಉದ್ಘಾಟಿಸಿದರು.
ಮುಖ್ಯ ಅತಿಥಿಗಳಾಗಿ ಅಂತಾರಾಷ್ಟ್ರೀಯ ಕಬಡ್ಡಿ ಆಟಗಾರ ಜಗದೀಶ್ ಕುಂಬ್ಳೆ ಕ್ರೀಡಾಕೂಟದ ಧ್ವಜಾರೋಹಣಗೈದು ಶುಭ ಹಾರೈಸಿದರು. ಇವರನ್ನು ಸಮಾರಂಭದಲ್ಲಿ ಸನ್ಮಾನಿಸಲಾಯಿತು. ಕೆ.ವಿ.ಜಿ. ದಂತ ಮಹಾವಿದ್ಯಾಲಯದ ಪ್ರಾಂಶುಪಾಲೆ ಡಾ.ಮೋಕ್ಷಾ ನಾಯಕ್ ಸ್ವಾಗತಿಸಿದರು. ಮುಖ್ಯ ಅತಿಥಿಗಳನ್ನು ಡಾ. ನವೀನ್ಕುಮಾರ್ ಪರಿಚಯಿಸಿದರು.
ಈ ಸಂದರ್ಭದಲ್ಲಿ ರಾಜೀವ್ಗಾಂಧಿ ಆರೋಗ್ಯ ವಿವಿಯ ಅಂತರ್ ಕಾಲೇಜು ಅತ್ಲೆಟಿಕ್ ಕೂಟದ ಪುರುಷರ ವಿಭಾಗದ ವೈಯಕ್ತಿಕ ಚಾಂಪಿಯನ್ ಆದ ಕಾಲೇಜಿನ ವಿದ್ಯಾರ್ಥಿ ಡಾ.ನೋಯಲ್ ಥಾಮಸ್ನ್ನು ಸನ್ಮಾನಿಸಲಾಯಿತು. ಡಾ.ರೇವಂತ್ ಸೂಂತೋಡು ವಂದಿಸಿದರು. ಡಾ.ಜೋಯಿನಾ ಮತ್ತು ಡಾ.ಅಮೃತಾ ಭಟ್ ಕಾರ್ಯಕ್ರಮ ನಿರೂಪಿಸಿದರು. ಕೆ.ವಿ.ಜಿ. ದಂತ ಮಹಾವಿದ್ಯಾಲಯದ ಆಡಳಿತಾಧಿಕಾರಿ ಮಾಧವ ಬಿ.ಟಿ. ಸಹಕರಿಸಿದರು. ಪ್ರೊ.ದಾಮೋದರ ಗೌಡ, ಡಾ.ಎನ್.ಎ.ಜ್ಞಾನೇಶ್, ಎನ್.ಎ.ಜ್ಞಾನೇಶ್, ಸೂರಯ್ಯ ಮತ್ತಿತರರು ಉಪಸ್ಥಿತರಿದ್ದರು.
ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆಯ ಚಟುವಟಿಕೆ ಮತ್ತೆ ಆರಂಭವಾಗುತ್ತಿದೆ. ಕರಾವಳಿ ಜಿಲ್ಲೆಗಳಲ್ಲಿ…
ಕರ್ನಾಟಕದಲ್ಲಿ ಗುಡುಗು ಸಹಿತ ಮಳೆ ಮುಂದುವರಿಯಲಿದೆ, ಕರಾವಳಿ ಮತ್ತು ಮಲೆನಾಡಿನಲ್ಲಿ ಏಪ್ರಿಲ್ 4ರವರೆಗೆ…
ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಗಣನೀಯವಾಗಿ ಹೆಚ್ಚಳವಾಗಿದೆ. ಈ ಹಿನ್ನೆಲೆ ಪ್ರತಿಯೊಂದು ತಾಲೂಕಿನಲ್ಲಿ…
ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲು ಪೊಲೀಸ್…
ಮಾರ್ಚ್ 28ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಮುನ್ಸೂಚನೆ ನೀಡಲಾಗಿದೆ. ಕರಾವಳಿ ಮತ್ತು…
ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…