ಸುಳ್ಯ: ಕೆ.ವಿ.ಜಿ. ದಂತ ಮಹಾವಿದ್ಯಾಲಯದ ವಾರ್ಷಿಕ ಕ್ರೀಡಾಕೂಟ ಕೆ.ವಿ.ಜಿ. ಕ್ರೀಡಾಂಗಣದಲ್ಲಿ ನಡೆಯಿತು. ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ನ ಪ್ರಧಾನ ಕಾರ್ಯದರ್ಶಿ ಡಾ.ರೇಣುಕಾಪ್ರಸಾದ್ ಕೆ.ವಿ. ಕ್ರೀಡಾಕೂಟವನ್ನು ಉದ್ಘಾಟಿಸಿದರು.
ಮುಖ್ಯ ಅತಿಥಿಗಳಾಗಿ ಅಂತಾರಾಷ್ಟ್ರೀಯ ಕಬಡ್ಡಿ ಆಟಗಾರ ಜಗದೀಶ್ ಕುಂಬ್ಳೆ ಕ್ರೀಡಾಕೂಟದ ಧ್ವಜಾರೋಹಣಗೈದು ಶುಭ ಹಾರೈಸಿದರು. ಇವರನ್ನು ಸಮಾರಂಭದಲ್ಲಿ ಸನ್ಮಾನಿಸಲಾಯಿತು. ಕೆ.ವಿ.ಜಿ. ದಂತ ಮಹಾವಿದ್ಯಾಲಯದ ಪ್ರಾಂಶುಪಾಲೆ ಡಾ.ಮೋಕ್ಷಾ ನಾಯಕ್ ಸ್ವಾಗತಿಸಿದರು. ಮುಖ್ಯ ಅತಿಥಿಗಳನ್ನು ಡಾ. ನವೀನ್ಕುಮಾರ್ ಪರಿಚಯಿಸಿದರು.
ಈ ಸಂದರ್ಭದಲ್ಲಿ ರಾಜೀವ್ಗಾಂಧಿ ಆರೋಗ್ಯ ವಿವಿಯ ಅಂತರ್ ಕಾಲೇಜು ಅತ್ಲೆಟಿಕ್ ಕೂಟದ ಪುರುಷರ ವಿಭಾಗದ ವೈಯಕ್ತಿಕ ಚಾಂಪಿಯನ್ ಆದ ಕಾಲೇಜಿನ ವಿದ್ಯಾರ್ಥಿ ಡಾ.ನೋಯಲ್ ಥಾಮಸ್ನ್ನು ಸನ್ಮಾನಿಸಲಾಯಿತು. ಡಾ.ರೇವಂತ್ ಸೂಂತೋಡು ವಂದಿಸಿದರು. ಡಾ.ಜೋಯಿನಾ ಮತ್ತು ಡಾ.ಅಮೃತಾ ಭಟ್ ಕಾರ್ಯಕ್ರಮ ನಿರೂಪಿಸಿದರು. ಕೆ.ವಿ.ಜಿ. ದಂತ ಮಹಾವಿದ್ಯಾಲಯದ ಆಡಳಿತಾಧಿಕಾರಿ ಮಾಧವ ಬಿ.ಟಿ. ಸಹಕರಿಸಿದರು. ಪ್ರೊ.ದಾಮೋದರ ಗೌಡ, ಡಾ.ಎನ್.ಎ.ಜ್ಞಾನೇಶ್, ಎನ್.ಎ.ಜ್ಞಾನೇಶ್, ಸೂರಯ್ಯ ಮತ್ತಿತರರು ಉಪಸ್ಥಿತರಿದ್ದರು.
ಕರ್ನಾಟಕದಲ್ಲಿ ಸದ್ಯ ಮಳೆ ಕಡಿಮೆಯಾಗಿದ್ದು, ಬಿಸಿಲು ಹೆಚ್ಚಾಗಿರುವ ನಡುವೆಯೇ ಸೆ.14ರಿಂದ ದಕ್ಷಿಣ ಒಳನಾಡಿನಲ್ಲಿ…
ನೀರಿನ ಕೊರತೆ ಮತ್ತು ಹವಾಮಾನ ಬದಲಾವಣೆಯ ನಡುವೆ ಭತ್ತ–ಗೋಧಿಯಂತಹ ಹೆಚ್ಚಿನ ನೀರು ಮತ್ತು…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…
ಇಂಪೀರಿಯಲ್ ಕಾಲೇಜ್ ಲಂಡನ್ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…
ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…
ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…