ಸುಳ್ಯ: ಕುರುಂಜಿ ವೆಂಕಟ್ರಮಣಗೌಡ ಪಾಲಿಟೆಕ್ನಿಕ್ನ ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಯುವರೆಡ್ಕ್ರಾಸ್ ಘಟಕಗಳ ವಾರ್ಷಿಕ ಚಟುವಟಿಕೆಗಳಿಗೆ ಚಾಲನೆ ನೀಡಲಾಯಿತು.
ಕಾಲೇಜಿನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೆ.ವಿ.ಜಿ. ಕಾನೂನು ಮಹಾ ವಿದ್ಯಾಲಯದ ಪ್ರಾಚಾರ್ಯ ಉದಯಕೃಷ್ಣ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಾ ಜೀವನದಲ್ಲಿ ಹೊಂದಾಣಿಕೆ ಹಾಗೂ ತ್ಯಾಗ ಮನೋಭಾವ ರೂಢಿಸಿಕೊಳ್ಳಲು ಎನ್ನೆಸ್ಸೆಸ್ ಹಾಗೂ ಯುವರೆಡ್ಕ್ರಾಸ್ ಘಟಕಗಳು ಸಹಕಾರಿ ಎಂದು ಹೇಳಿದರು.
ಕಾಲೇಜಿನ ಪ್ರಾಂಶುಪಾಲ ಬಾಲಕೃಷ್ಣ ಗೌಡ ಬೊಳ್ಳೂರು ಅದ್ಯಕ್ಷತೆ ವಹಿಸಿದ್ದರು. ಎನ್ನೆಸ್ಸೆಸ್ ಕಾರ್ಯಕ್ರಮಾಧಿಕಾರಿ ಚಂದ್ರಶೇಖರ ಬಿಳಿನೆಲೆ ಪ್ರಾಸ್ತಾವಿಕವಾಗಿ ಮಾತನಾಡಿ ಕಳೆದ ಸೆಮೆಸ್ಟೆರ್ ಪರೀಕ್ಷೆಯಲ್ಲಿ ಸಾಧನೆಗೈದ ಸ್ವಯಂ ಸೇವಕರನ್ನು ಅಭಿನಂದಿಸಿದರು.
ಕಾಲೇಜಿನ ವಿದ್ಯಾರ್ಥಿಕ್ಷೇಮಾಧಿಕಾರಿ ಮಧುಕುಮಾರ್ ಉಪಸ್ಥಿತರಿದ್ದು ಶುಭ ಹಾರೈಸಿದರು.
ಸಮಾರಂಭದ ವೇದಿಕೆಯಲ್ಲಿಎನ್ನೆಸ್ಸೆಸ್ಘಟಕ ನಾಯಕರಾದ ಭವಿಷ್ಯತ್, ಸುಬ್ರಹ್ಮಣ್ಯ, ಶರಣ್ಯ ಹಾಗೂ ಗ್ರೀಷ್ಮಉಪಸ್ಥಿತರಿದ್ದರು.
ಭವ್ಯಶ್ರೀಯವರ ಪ್ರಾರ್ಥನೆಯೊಂದಿಗೆ ಆರಂಭವಾದ ಕಾರ್ಯಕ್ರಮದಲ್ಲಿ ಶರಣ್ಯಾ ಸ್ವಾಗತಿಸಿ, ಹಕೀಂ ವಂದಿಸಿದರು, ಕಿಶೋರ್ ಎ.ಪಿ ಕಾರ್ಯಕ್ರಮ ನಿರೂಪಿಸಿದರು.
ಹಲಸಿನ ಕಾಯಿ ಬಳಸಿ ಸುಲಭವಾಗಿ ಮಾಡುವ ಕರಕರೆ ಬೋಂಡಾ – ಸಾಮಾನ್ಯ ಬೋಂಡಾ…
ಜೀವನವೆಂದರೆ ಕೇವಲ ಉಸಿರಾಟವಲ್ಲ; ಅದು ಅನುಭವಗಳ ಹೂಗುಚ್ಛ, ಭಾವನೆಗಳ ಹಬ್ಬ, ತತ್ತ್ವದ ಹಾದಿ.…
ಗೋವಾದಲ್ಲಿ ಗೇರು ತೋಟಗಳ ಮೇಲೆ ಕೋತಿಗಳ ದಾಳಿ ಆರಂಭವಾಗಿದೆ. ಇದು ಕರಾವಳಿ ಕರ್ನಾಟಕದ…
ಗ್ರಾಮೀಣ ಮಕ್ಕಳಿಗೆ ಮಣ್ಣಿನ ಪಾಠ, ಬದುಕಿನ ಶಿಕ್ಷಣ ಮತ್ತು ಅಂಕದ ಶಿಕ್ಷಣದ ನಡುವಿನ…
ಜಾಗತಿಕ ಕೋಕೋ ಬೆಲೆಗಳು ಒಂದು ವರ್ಷದ ಅವಧಿಯಲ್ಲಿ ಅರ್ಧದಷ್ಟು ಕುಸಿದಿರುವ ಹಿನ್ನೆಲೆಯಲ್ಲಿ ಪಶ್ಚಿಮ…
ಭಾರತ ಮತ್ತು ಬಾಂಗ್ಲಾದೇಶದಲ್ಲಿ ಮೂರು ನಿಪಾ ಪ್ರಕರಣಗಳು ದೃಢಪಟ್ಟಿದ್ದರೂ, ಜಾಗತಿಕ ಹಾಗೂ ಪ್ರಾದೇಶಿಕ…