ಸುಳ್ಯ: ಕುರುಂಜಿ ವೆಂಕಟ್ರಮಣಗೌಡ ಪಾಲಿಟೆಕ್ನಿಕ್ನ ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಯುವರೆಡ್ಕ್ರಾಸ್ ಘಟಕಗಳ ವಾರ್ಷಿಕ ಚಟುವಟಿಕೆಗಳಿಗೆ ಚಾಲನೆ ನೀಡಲಾಯಿತು.
ಕಾಲೇಜಿನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೆ.ವಿ.ಜಿ. ಕಾನೂನು ಮಹಾ ವಿದ್ಯಾಲಯದ ಪ್ರಾಚಾರ್ಯ ಉದಯಕೃಷ್ಣ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಾ ಜೀವನದಲ್ಲಿ ಹೊಂದಾಣಿಕೆ ಹಾಗೂ ತ್ಯಾಗ ಮನೋಭಾವ ರೂಢಿಸಿಕೊಳ್ಳಲು ಎನ್ನೆಸ್ಸೆಸ್ ಹಾಗೂ ಯುವರೆಡ್ಕ್ರಾಸ್ ಘಟಕಗಳು ಸಹಕಾರಿ ಎಂದು ಹೇಳಿದರು.
ಕಾಲೇಜಿನ ಪ್ರಾಂಶುಪಾಲ ಬಾಲಕೃಷ್ಣ ಗೌಡ ಬೊಳ್ಳೂರು ಅದ್ಯಕ್ಷತೆ ವಹಿಸಿದ್ದರು. ಎನ್ನೆಸ್ಸೆಸ್ ಕಾರ್ಯಕ್ರಮಾಧಿಕಾರಿ ಚಂದ್ರಶೇಖರ ಬಿಳಿನೆಲೆ ಪ್ರಾಸ್ತಾವಿಕವಾಗಿ ಮಾತನಾಡಿ ಕಳೆದ ಸೆಮೆಸ್ಟೆರ್ ಪರೀಕ್ಷೆಯಲ್ಲಿ ಸಾಧನೆಗೈದ ಸ್ವಯಂ ಸೇವಕರನ್ನು ಅಭಿನಂದಿಸಿದರು.
ಕಾಲೇಜಿನ ವಿದ್ಯಾರ್ಥಿಕ್ಷೇಮಾಧಿಕಾರಿ ಮಧುಕುಮಾರ್ ಉಪಸ್ಥಿತರಿದ್ದು ಶುಭ ಹಾರೈಸಿದರು.
ಸಮಾರಂಭದ ವೇದಿಕೆಯಲ್ಲಿಎನ್ನೆಸ್ಸೆಸ್ಘಟಕ ನಾಯಕರಾದ ಭವಿಷ್ಯತ್, ಸುಬ್ರಹ್ಮಣ್ಯ, ಶರಣ್ಯ ಹಾಗೂ ಗ್ರೀಷ್ಮಉಪಸ್ಥಿತರಿದ್ದರು.
ಭವ್ಯಶ್ರೀಯವರ ಪ್ರಾರ್ಥನೆಯೊಂದಿಗೆ ಆರಂಭವಾದ ಕಾರ್ಯಕ್ರಮದಲ್ಲಿ ಶರಣ್ಯಾ ಸ್ವಾಗತಿಸಿ, ಹಕೀಂ ವಂದಿಸಿದರು, ಕಿಶೋರ್ ಎ.ಪಿ ಕಾರ್ಯಕ್ರಮ ನಿರೂಪಿಸಿದರು.
ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನಲ್ಲಿ ಇನ್ನೂ ಬಿಟ್ಟುಬಿಟ್ಟು ಮಳೆ ಮುಂದುವರಿಯಲಿದೆ. ಆದರೆ…
ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…
ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಭಾಗದಲ್ಲಿ ಅಡಿಕೆ ಬೆಳೆ ವೇಗವಾಗಿ ವಿಸ್ತರಿಸುತ್ತಿದ್ದು, ಉತ್ತಮ ಆದಾಯದ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…