ಸುಳ್ಯ: ಕುರುಂಜಿ ವೆಂಕಟ್ರಮಣಗೌಡ ಪಾಲಿಟೆಕ್ನಿಕ್ನ ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಯುವರೆಡ್ಕ್ರಾಸ್ ಘಟಕಗಳ ವಾರ್ಷಿಕ ಚಟುವಟಿಕೆಗಳಿಗೆ ಚಾಲನೆ ನೀಡಲಾಯಿತು.
ಕಾಲೇಜಿನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೆ.ವಿ.ಜಿ. ಕಾನೂನು ಮಹಾ ವಿದ್ಯಾಲಯದ ಪ್ರಾಚಾರ್ಯ ಉದಯಕೃಷ್ಣ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಾ ಜೀವನದಲ್ಲಿ ಹೊಂದಾಣಿಕೆ ಹಾಗೂ ತ್ಯಾಗ ಮನೋಭಾವ ರೂಢಿಸಿಕೊಳ್ಳಲು ಎನ್ನೆಸ್ಸೆಸ್ ಹಾಗೂ ಯುವರೆಡ್ಕ್ರಾಸ್ ಘಟಕಗಳು ಸಹಕಾರಿ ಎಂದು ಹೇಳಿದರು.
ಕಾಲೇಜಿನ ಪ್ರಾಂಶುಪಾಲ ಬಾಲಕೃಷ್ಣ ಗೌಡ ಬೊಳ್ಳೂರು ಅದ್ಯಕ್ಷತೆ ವಹಿಸಿದ್ದರು. ಎನ್ನೆಸ್ಸೆಸ್ ಕಾರ್ಯಕ್ರಮಾಧಿಕಾರಿ ಚಂದ್ರಶೇಖರ ಬಿಳಿನೆಲೆ ಪ್ರಾಸ್ತಾವಿಕವಾಗಿ ಮಾತನಾಡಿ ಕಳೆದ ಸೆಮೆಸ್ಟೆರ್ ಪರೀಕ್ಷೆಯಲ್ಲಿ ಸಾಧನೆಗೈದ ಸ್ವಯಂ ಸೇವಕರನ್ನು ಅಭಿನಂದಿಸಿದರು.
ಕಾಲೇಜಿನ ವಿದ್ಯಾರ್ಥಿಕ್ಷೇಮಾಧಿಕಾರಿ ಮಧುಕುಮಾರ್ ಉಪಸ್ಥಿತರಿದ್ದು ಶುಭ ಹಾರೈಸಿದರು.
ಸಮಾರಂಭದ ವೇದಿಕೆಯಲ್ಲಿಎನ್ನೆಸ್ಸೆಸ್ಘಟಕ ನಾಯಕರಾದ ಭವಿಷ್ಯತ್, ಸುಬ್ರಹ್ಮಣ್ಯ, ಶರಣ್ಯ ಹಾಗೂ ಗ್ರೀಷ್ಮಉಪಸ್ಥಿತರಿದ್ದರು.
ಭವ್ಯಶ್ರೀಯವರ ಪ್ರಾರ್ಥನೆಯೊಂದಿಗೆ ಆರಂಭವಾದ ಕಾರ್ಯಕ್ರಮದಲ್ಲಿ ಶರಣ್ಯಾ ಸ್ವಾಗತಿಸಿ, ಹಕೀಂ ವಂದಿಸಿದರು, ಕಿಶೋರ್ ಎ.ಪಿ ಕಾರ್ಯಕ್ರಮ ನಿರೂಪಿಸಿದರು.
ಆಂಧ್ರಪ್ರದೇಶ ಸರ್ಕಾರ ರೈತರಿಂದ ನೇರವಾಗಿ ಕೃಷಿ ಉತ್ಪನ್ನಗಳನ್ನು ಮನೆ ಬಾಗಿಲಿಗೆ ತಲುಪಿಸುವ “Farm-to-Home”…
2025-26ರಲ್ಲಿ ಭಾರತದಲ್ಲಿ 3765.63 ಲಕ್ಷ ಟನ್ ಆಹಾರ ಉತ್ಪಾದನೆ ಸಾಧ್ಯತೆ ಇದ್ದು, ಇದು…
ವಿ.ಆರ್.ಎನ್ ಇನ್ಪೋಟೆಕ್ ಕಂಪೆನಿಯ ಕಸ್ಟಮರ್ ಸಪೋರ್ಟ್ ಎಕ್ಸಿಕ್ಯೂಟಿವ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ಮೇ…
ಬ್ಲಿಂಕಿಟ್ ಕಂಪೆನಿಯ ಪಿಕ್ಕರ್ ಹಾಗೂ ಪ್ಯಾಕರ್ ಹುದ್ದೆಗಳಿಗೆ ಜೂನ್ 1ರಂದು ಮಂಗಳೂರಿನಲ್ಲಿ ನೇರ…
ಬಕ್ರೀದ್ಗೂ ಮುನ್ನ ಗೋಹತ್ಯೆ ಮತ್ತು ಗೋ ರಕ್ಷಣೆಯ ವಿಚಾರ ಮತ್ತೆ ದೇಶದಲ್ಲಿ ಚರ್ಚೆಗೆ…
ಹವಾಮಾನ ಬದಲಾವಣೆಯ ಪರಿಣಾಮಗಳನ್ನು ಎದುರಿಸಲು ದಕ್ಷಿಣ ಕನ್ನಡದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ…