ಸುಳ್ಯ: ಕೆವಿಜಿ ಪಾಲಿಟೆಕ್ನಿಕ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಸುವರ್ಣ ಮಹೋತ್ಸವ ಮತ್ತು ಕಾಲೇಜು ಘಟಕದ ದಶಮಾನೋತ್ಸವ ಕಾರ್ಯಕ್ರಮದ ಅಂಗವಾಗಿ 106 ಬಾರಿ ರಕ್ತದಾನ ಮಾಡಿದ ಪಿ.ಬಿ.ಸುಧಾಕರ ರೈ ಯವರನ್ನು ಸನ್ಮಾನಿಸಲಾಯಿತು. ಕಾಲೇಜು ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಷನ್ ಜತೆ ಕಾರ್ಯದರ್ಶಿ ಕೆ.ವಿ. ಹೇಮನಾಥ್ ಅಧ್ಯಕ್ಷತೆ ವಹಿಸಿದ್ದರು. ಕಾಲೇಜಿನ ಪ್ರಾಂಶುಪಾಲ ಬಾಲಕೃಷ್ಣ ಗೌಡ ಬೊಳ್ಳೂರು ಎನ್ನೆಸ್ಸೆಸ್ ಕಾರ್ಯಕ್ರಮಾಧಿಕಾರಿ ಚಂದ್ರಶೇಖರ ಬಿಳಿನೆಲೆ ಉಪಪ್ರಾಂಶುಪಾಲ ಜಯಪ್ರಕಾಶ್ ಕೆ, ಕಛೇರಿ ಅಧೀಕ್ಷಕ ರಾಮಚಂದ್ರ ಗೌಡ ಪಲ್ಲತಡ್ಕ, ಎನ್ನೆಸ್ಸೆಸ್ ಸೇವಾ ಸಂಗಮದ ಅಧ್ಯಕ್ಷ ವಿಜೇತ್ ಶಿರ್ಲಾಲ್, ಎನ್ನೆಸ್ಸೆಸ್ ಘಟಕ ನಾಯಕರಾದ ಭವಿಷ್ಯತ್ ಬಿ, ಸುಬ್ರಹ್ಮಣ್ಯ ಸಿ.ವಿ, ಶರಣ್ಯಾ ಎಂ.ಎಸ್ ಹಾಗೂ ಗ್ರೀಷ್ಮಾ ಉಪಸ್ಥಿತರಿದ್ದರು. ಕಾರ್ಯಕ್ರಮಾಧಿಕಾರಿ ಸುನಿಲ್ಕುಮಾರ್ ಎನ್ ಸ್ವಾಗತಿಸಿ ಘಟಕ ನಾಯಕಿ ಶರಣ್ಯಾ ವಂದಿಸಿದರು, ಕಿಶೋರ್ ಎ.ಪಿ ಕಾರ್ಯಕ್ರಮ ನಿರೂಪಿಸಿದರು.
ಮುಂಬೈನಲ್ಲಿ ನಿರಂತರ ಭಾರೀ ಮಳೆಯಿಂದ ನಗರದಲ್ಲಿ ಜಲಾವೃತ ಮತ್ತು ಸಂಚಾರ ಅಸ್ತವ್ಯಸ್ತವಾಗಿದೆ. IMD…
ಭಾರತೀಯ BIS ಮಾನದಂಡದ ಪ್ರಕಾರ ಅಡಿಕೆಯ ಗುಣಮಟ್ಟವನ್ನು ತೇವಾಂಶ, ಅಫ್ಲಾಟಾಕ್ಸಿನ್, ಕೀಟ ಹಾನಿ,…
ಸ್ವಲ್ಪ ಸಿಹಿ ರುಚಿಯ ಹಲಸಿನ ಕಾಯಿಗೆ ವಿವಿಧ ಮಸಾಲೆಗಳನ್ನು ಸೇರಿಸಿ ಕೆಲವೇ ನಿಮಿಷಗಳಲ್ಲಿ…
ಪ್ರಕೃತಿ ವಿಕೋಪದಿಂದ ಅಡಿಕೆ ತೋಟಗಳಿಗೆ ಆಗುವ ನಷ್ಟಕ್ಕೆ ಸಿಗುತ್ತಿರುವ ಎನ್ಡಿಆರ್ಎಫ್ ಪರಿಹಾರ ಮೊತ್ತ…
ತಮಿಳುನಾಡಿನ ಪನ್ರುಟಿ ಪಟ್ಟಣವನ್ನು ಭಾರತದ ಹಲಸಿನ ಹಣ್ಣಿನ ರಾಜಧಾನಿ ಎಂದು ಕರೆಯಲಾಗುತ್ತದೆ. ಇಲ್ಲಿನ…
ಉತ್ತಮ ಗುಣಮಟ್ಟದ ಅಡಿಕೆ ಆರೋಗ್ಯಕ್ಕೆ ಹಾನಿಕರವಲ್ಲ ಎಂದು ಕ್ಯಾಂಪ್ಕೋ ಅಧ್ಯಕ್ಷ ಎಸ್.ಆರ್. ಸತೀಶ್ಚಂದ್ರ…