ಸುಳ್ಯ: ಕೆವಿಜಿ ಪಾಲಿಟೆಕ್ನಿಕ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಸುವರ್ಣ ಮಹೋತ್ಸವ ಮತ್ತು ಕಾಲೇಜು ಘಟಕದ ದಶಮಾನೋತ್ಸವ ಕಾರ್ಯಕ್ರಮದ ಅಂಗವಾಗಿ 106 ಬಾರಿ ರಕ್ತದಾನ ಮಾಡಿದ ಪಿ.ಬಿ.ಸುಧಾಕರ ರೈ ಯವರನ್ನು ಸನ್ಮಾನಿಸಲಾಯಿತು. ಕಾಲೇಜು ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಷನ್ ಜತೆ ಕಾರ್ಯದರ್ಶಿ ಕೆ.ವಿ. ಹೇಮನಾಥ್ ಅಧ್ಯಕ್ಷತೆ ವಹಿಸಿದ್ದರು. ಕಾಲೇಜಿನ ಪ್ರಾಂಶುಪಾಲ ಬಾಲಕೃಷ್ಣ ಗೌಡ ಬೊಳ್ಳೂರು ಎನ್ನೆಸ್ಸೆಸ್ ಕಾರ್ಯಕ್ರಮಾಧಿಕಾರಿ ಚಂದ್ರಶೇಖರ ಬಿಳಿನೆಲೆ ಉಪಪ್ರಾಂಶುಪಾಲ ಜಯಪ್ರಕಾಶ್ ಕೆ, ಕಛೇರಿ ಅಧೀಕ್ಷಕ ರಾಮಚಂದ್ರ ಗೌಡ ಪಲ್ಲತಡ್ಕ, ಎನ್ನೆಸ್ಸೆಸ್ ಸೇವಾ ಸಂಗಮದ ಅಧ್ಯಕ್ಷ ವಿಜೇತ್ ಶಿರ್ಲಾಲ್, ಎನ್ನೆಸ್ಸೆಸ್ ಘಟಕ ನಾಯಕರಾದ ಭವಿಷ್ಯತ್ ಬಿ, ಸುಬ್ರಹ್ಮಣ್ಯ ಸಿ.ವಿ, ಶರಣ್ಯಾ ಎಂ.ಎಸ್ ಹಾಗೂ ಗ್ರೀಷ್ಮಾ ಉಪಸ್ಥಿತರಿದ್ದರು. ಕಾರ್ಯಕ್ರಮಾಧಿಕಾರಿ ಸುನಿಲ್ಕುಮಾರ್ ಎನ್ ಸ್ವಾಗತಿಸಿ ಘಟಕ ನಾಯಕಿ ಶರಣ್ಯಾ ವಂದಿಸಿದರು, ಕಿಶೋರ್ ಎ.ಪಿ ಕಾರ್ಯಕ್ರಮ ನಿರೂಪಿಸಿದರು.
ಭಾರತೀಯ ಮಾವಿನ ಹಣ್ಣಿನ ಆಮದಿಗೆ ನೇಪಾಳ ಯಾವುದೇ ನಿಷೇಧ ಹೇರಿಲ್ಲ ಎಂದು ಭಾರತ…
ರಾಜ್ಯದ ಹಲವೆಡೆ ಮುಂದಿನ ಐದು ದಿನ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿರುವ ಹವಾಮಾನ…
ಹಲಸಿನ ಕಾಯಿ, ಕಾಯಿತುರಿ ಹಾಗೂ ಜೀರಿಗೆ ಬಳಸಿ ತಯಾರಿಸುವ ಈ ಚಟ್ನಿ ಬಿಸಿ…
2023ರಿಂದ 2026ರವರೆಗೆ ಅಡಿಕೆ ಉತ್ಪಾದನಾ ವೆಚ್ಚ ಸುಮಾರು 27% ಏರಿಕೆಯಾಗಿದೆ. ಈ ಲೆಕ್ಕಾಚಾರದ…
ಎಲ್ ನೀನೋ ಮತ್ತು ಲಾ ನೀನಾ ಪ್ರಭಾವದಿಂದ ಮಳೆಯ ಮಾದರಿಯಲ್ಲಿ ಅನಿಶ್ಚಿತತೆ ಹೆಚ್ಚಾಗುತ್ತಿದೆ.…
ಐವರ್ನಾಡು ಗ್ರಾಮ ಪಂಚಾಯತ್ ವ್ಯಾಪ್ತಿಯ ಬೆಂಗಮಲೆಯಲ್ಲಿ ತ್ಯಾಜ್ಯ ಎಸೆದ ಸುಳ್ಯ ನಿವಾಸಿಗೆ ₹5,000…