ಸಳ್ಯ: ಕುರುಂಜಿ ವೆಂಕಟ್ರಮಣಗೌಡ ಪಾಲಿಟೆಕ್ನಿಕ್ನ 2019-20ನೇ ಸಾಲಿನ ವಿದ್ಯಾರ್ಥಿ ಸಂಘದ ಉದ್ಘಾಟನಾ ಸಮಾರಂಭವು ಇತ್ತಿಚೆಗೆ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಷನ್ನ ಜತೆ ಕಾರ್ಯದರ್ಶಿ ಹೇಮನಾಥ್ ಕೆ.ವಿ ಅಧ್ಯಕ್ಷತೆ ವಹಿಸಿದ್ದರು. ಅತಿಥಿಯಾಗಿ ನೆಹರೂ ಮೆಮೋರಿಯಲ್ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಬಾಲಚಂದ್ರಗೌಡ ಭಾಗವಹಿಸಿ ಶುಭ ಹಾರೈಸಿದರು.
ಕಾಲೇಜಿನ ಪ್ರಾಂಶುಪಾಲ ಬಾಲಕೃಷ್ಣ ಗೌಡ ಬೊಳ್ಳೂರು ವಿದ್ಯಾರ್ಥಿ ಸಂಘದ ಅಗತ್ಯತೆ ಹಾಗೂ ಕಾರ್ಯ ಚಟುವಟಿಕೆಗಳ ಬಗ್ಗೆ ಮಾಹಿತಿ ನೀಡಿದರು. ವಿದ್ಯಾರ್ಥಿ ಕ್ಷೇಮಾಧಿಕಾರಿ ಮಧುಕುಮಾರ್ ಬಿ.ಆರ್ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು. ವಿದ್ಯಾರ್ಥಿ ಸಂಘದ ಅಧ್ಯಕ್ಷ ಚರಿತ್ ರೈಎಸ್ ಸರ್ವರ ಸಹಕಾರ ಕೋರಿದರು. ಸಮಾರಂಭದ ವೇದಿಕೆಯಲ್ಲಿ ಉಪ ಪ್ರಾಂಶುಪಾಲ ಜಯಪ್ರಕಾಶ್ ಕೆ, ಕಛೇರಿ ಅಧೀಕ್ಷಕ ರಾಮಚಂದ್ರಗೌಡ ಪಲ್ಲತಡ್ಕ, ವಿದ್ಯಾರ್ಥಿ ಸಲಹೆಗಾರ ಅನಿಲ್ ಕುಮಾರ್ ಎಸ್ ಹಾಗೂ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು. ಸಾಂಸ್ಕೃತಿಕ ಕಾರ್ಯದರ್ಶಿ ಕಿಶೋರ್ ಎ.ಪಿ ಸ್ವಾಗತಿಸಿ ಕಾರ್ಯದರ್ಶಿ ರಕ್ಷಿತ್ ವಂದಿಸಿದರು. ಗ್ರೀಷ್ಮಾ ಕಾರ್ಯಕ್ರಮ ನಿರೂಪಿಸಿದರು.
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…
ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…
ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…
2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…
ನಾಗಾಲ್ಯಾಂಡ್ನಲ್ಲಿ ರಬ್ಬರ್ ಕೃಷಿ ಸುಮಾರು 29,794 ಹೆಕ್ಟೇರ್ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್ನಲ್ಲಿ ಸೂಕ್ತ…
ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…