ಕೆ.ವಿ.ಜಿ.ಪಾಲಿಟೆಕ್ನಿಕ್ : ಸರ್ವ್ ತರಬೇತಿ ಕಾರ್ಯಕ್ರಮ

September 10, 2019
7:00 PM

ಸುಳ್ಯ: ಭಾರತೀಯ ರೆಡ್‍ಕ್ರಾಸ್ ಸಂಸ್ಥೆಯ ದಕ್ಷಿಣಕನ್ನಡ ಜಿಲ್ಲಾಘಟಕದ ವತಿಯಿಂದ ಕುರುಂಜಿ ವೆಂಕಟ್ರಮಣ ಗೌಡ ಪಾಲಿಟೆಕ್ನಿಕ್‍ನ ಯುವರೆಡ್‍ ಕ್ರಾಸ್ ಹಾಗೂ ಎನ್ನೆಸ್ಸೆಸ್‍ ಘಟಕ ಹಾಗೂ ನೆಹರೂ ಮೆಮೋರಿಯಲ್‍ ಕಾಲೇಜಿನ ಯುವರೆಡ್‍ಕ್ರಾಸ್ ಘಟಕಗಳ ಸಹಯೋಗದೊಂದಿಗೆ ಸರ್ವ್(ಸೋಸಿಯಲ್ ಎಮೆರ್ಜೆನ್ಸಿರೆಸ್ಪಾನ್ಸ್ ವೊಲಂಟೀಯರ್) ತರಬೇತಿ ಶಿಬಿರವು ಕೆ.ವಿ.ಜಿ.ಪಾಲಿಟೆಕ್ನಿಕ್‍ನಲ್ಲಿ ನಡೆಯಿತು.

Advertisement
Advertisement

ಪಾಲಿಟೆಕ್ನಿಕ್ ಪ್ರಾಂಶುಪಾಲ ಬಾಲಕೃಷ್ಣ ಗೌಡ ಬೊಳ್ಳೂರು ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿ ಪೃಕೃತಿ ವಿಕೋಪಗಳ ಸಂಧರ್ಭದಲ್ಲಿ ಜನರನ್ನು ರಕ್ಷಿಸುವ ಜೊತೆಗೆ ಸ್ವಯಂರಕ್ಷಣೆಯನ್ನೂ ಮಾಡಿಕೊಳ್ಳುವ ಚಾಕಚಕ್ಯತೆಯನ್ನುಇಂತಹ ಶಿಬಿರಗಳಲ್ಲಿ ಕಲಿಯಲು ಸಾಧ್ಯಎಂದು ಹೇಳಿದರು.

Advertisement

ಸಮಾರಂಭವನ್ನು ಉದ್ಘಾಟಿಸಿದ ಉಪಪ್ರಾಂಶುಪಾಲ ಜಯಪ್ರಕಾಶ್ ಕೆ ಮಾತನಾಡಿ ಇಲ್ಲಿತರಬೇತಿ ಪಡೆದ 30 ಜನರ ತಂಡ ಸಮಾಜದಲ್ಲಿ ಇತರರಿಗೂ ಈ ತರಬೇತಿಯನ್ನು ನೀಡುವ ಮೂಲಕ ಜಾಗೃತಿ ಮೂಡಿಸಬೇಕು ಎಂದು ಹೇಳಿದರು.

ಭಾರತೀಯರೆಡ್‍ಕ್ರಾಸ್ ಸಂಸ್ಥೆಯ ದ.ಕ ಜಿಲ್ಲಾ ಘಟಕದ ಸರ್ವ್‍ತರಬೇತಿ ಸಂಚಾಲಕ ಸಚೇತ್ ಸುವರ್ಣ ಶಿಬಿರದ ಬಗ್ಗೆ ಮಾಹಿತಿ ನೀಡಿದರು. ವೇದಿಕೆಯಲ್ಲಿ ಎನ್ನೆಸ್ಸೆಸ್‍ ಘಟಕದ ಕಾರ್ಯಕ್ರಮಾಧಿಕಾರಿ ಸುನಿಲ್ ಕುಮಾರ್‍ಎನ್.ಪಿ, ತರಬೇತುದಾರರಾದ ಅಶ್ವಿನ್‍ಕುಮಾರ್ ಮತ್ತು ಗ್ಲೋರಿಯಾ ರೋಡ್ರಿಗಸ್ ಉಪಸ್ಥಿತರಿದ್ದರು.

Advertisement

ಪಾಲಿಟೆಕ್ನಿಕ್ ಎನ್ನೆಸ್ಸೆಸ್‍ಕಾರ್ಯಕ್ರಮಾಧಿಕಾರಿ ಚಂದ್ರಶೇಖರ ಬಿಳಿನೆಲೆ ಸ್ವಾಗತಿಸಿ ನೆಹರೂ ಮೆಮೋರಿಯಲ್‍ ಕಾಲೇಜಿನ ರೆಡ್‍ಕ್ರಾಸ್‍ ಕಾರ್ಯಕ್ರಮಾಧಿಕಾರಿ ಡಾ.ಅನುರಾಧಾ ಕುರುಂಜಿ ವಂದಿಸಿದರು .

ಉದ್ಘಾಟನಾ ಸಮಾರಂಭದ ನಂತರ ಸಚೇತ್ ಸುವರ್ಣ ತಂಡದವರಿಂದ ವಿವಿಧ ಸಂದರ್ಭಗಳಲ್ಲಿ ಅಂದರೆ ಹೃದಯಾಘಾತ, ಅಪಸ್ಮಾರ, ರಸ್ತೆಅಪಘಾತ, ನಾಯಿ ಕಡಿತ, ಹಾವು ಕಡಿತ, ಇತ್ಯಾದಿ ಸಂದರ್ಭದಲ್ಲಿನ ಡೆಸುವ ಪ್ರಥಮ ಚಿಕಿತ್ಸೆಹಾಗೂ ಪ್ರಕೃತಿ ವಿಕೋಪಗಳ ಸಂದರ್ಭದಲ್ಲಿ ಜನರನ್ನುರಕ್ಷಿಸುವ ಬಗ್ಗೆ ಎರಡು ದಿನಗಳ ಪ್ರಾಯೋಗಿಕ ತರಬೇತಿ ನಡೆಯಿತು.ಕೆವಿಜಿ ಪಾಲಿಟೆಕ್ನಿಕ್ ಮತ್ತು ನೆಹರೂ ಮೆಮೋರಿಯಲ್‍ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಈ ತರಬೇತಿಯಲ್ಲಿ ಭಾಗವಹಿಸಿದರು.

Advertisement

 

Advertisement
Advertisement
Advertisement

Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕರಾವಳಿ ಜಿಲ್ಲೆಯ ಕೃಷಿ ಕ್ಷೇತ್ರದ ಕಡೆಗೆ ಗಮನ | ಅಡಿಕೆ ಬೆಳೆಗಾರರ ಸಮಸ್ಯೆ ಪರಿಹಾರಕ್ಕೆ ಯತ್ನ | ಮಂಗಳೂರು ಬಿಜೆಪಿ ಅಭ್ಯರ್ಥಿ ಭರವಸೆ |
April 25, 2024
2:00 PM
by: ದ ರೂರಲ್ ಮಿರರ್.ಕಾಂ
Karnataka Weather | 25-04-2024 | ಮಳೆ ಕಡಿಮೆಯಾಯ್ತು… | ಮೋಡ ಶುರುವಾಯ್ತು |
April 25, 2024
1:00 PM
by: ಸಾಯಿಶೇಖರ್ ಕರಿಕಳ
ಭಾರತದಲ್ಲಿ ಸಮುದ್ರ ಜಲಕೃಷಿ ಚಟುವಟಿಕೆ ಉತ್ತೇಜನ | ಸಮುದ್ರ ಮೀನಿನ ಕೃಷಿಯಲ್ಲಿ ಹೊಸ ಸಾಧನೆ ಮಾಡಿದ ಸಿಎಂಎಫ್​ಆರ್​ಐ
April 24, 2024
9:33 PM
by: The Rural Mirror ಸುದ್ದಿಜಾಲ
ಪ್ಯಾರೀಸ್‌ನಲ್ಲಿ ಕ್ರೀಡೆಗಳ ಮಹಾಸಂಗಮ ಒಲಿಂಪಿಕ್ಸ್‌ಗೆ ಕೆಲವೇ ದಿನ ಬಾಕಿ | ಕೈಬೀಸಿ ಕರೆಯುತ್ತಿದೆ ಪ್ಯಾರಿಸ್‌ | ಒಲಿಂಪಿಕ್ಸ್‌ನಲ್ಲಿರಲಿದೆ ನೂರಾರು ವಿಶೇಷ
April 24, 2024
9:02 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror