ಸುದ್ದಿಗಳು

ಕೆ.ವಿ.ಜಿ.ಪಾಲಿಟೆಕ್ನಿಕ್ : ಸರ್ವ್ ತರಬೇತಿ ಕಾರ್ಯಕ್ರಮ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸುಳ್ಯ: ಭಾರತೀಯ ರೆಡ್‍ಕ್ರಾಸ್ ಸಂಸ್ಥೆಯ ದಕ್ಷಿಣಕನ್ನಡ ಜಿಲ್ಲಾಘಟಕದ ವತಿಯಿಂದ ಕುರುಂಜಿ ವೆಂಕಟ್ರಮಣ ಗೌಡ ಪಾಲಿಟೆಕ್ನಿಕ್‍ನ ಯುವರೆಡ್‍ ಕ್ರಾಸ್ ಹಾಗೂ ಎನ್ನೆಸ್ಸೆಸ್‍ ಘಟಕ ಹಾಗೂ ನೆಹರೂ ಮೆಮೋರಿಯಲ್‍ ಕಾಲೇಜಿನ ಯುವರೆಡ್‍ಕ್ರಾಸ್ ಘಟಕಗಳ ಸಹಯೋಗದೊಂದಿಗೆ ಸರ್ವ್(ಸೋಸಿಯಲ್ ಎಮೆರ್ಜೆನ್ಸಿರೆಸ್ಪಾನ್ಸ್ ವೊಲಂಟೀಯರ್) ತರಬೇತಿ ಶಿಬಿರವು ಕೆ.ವಿ.ಜಿ.ಪಾಲಿಟೆಕ್ನಿಕ್‍ನಲ್ಲಿ ನಡೆಯಿತು.

Advertisement
Advertisement

ಪಾಲಿಟೆಕ್ನಿಕ್ ಪ್ರಾಂಶುಪಾಲ ಬಾಲಕೃಷ್ಣ ಗೌಡ ಬೊಳ್ಳೂರು ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿ ಪೃಕೃತಿ ವಿಕೋಪಗಳ ಸಂಧರ್ಭದಲ್ಲಿ ಜನರನ್ನು ರಕ್ಷಿಸುವ ಜೊತೆಗೆ ಸ್ವಯಂರಕ್ಷಣೆಯನ್ನೂ ಮಾಡಿಕೊಳ್ಳುವ ಚಾಕಚಕ್ಯತೆಯನ್ನುಇಂತಹ ಶಿಬಿರಗಳಲ್ಲಿ ಕಲಿಯಲು ಸಾಧ್ಯಎಂದು ಹೇಳಿದರು.

ಸಮಾರಂಭವನ್ನು ಉದ್ಘಾಟಿಸಿದ ಉಪಪ್ರಾಂಶುಪಾಲ ಜಯಪ್ರಕಾಶ್ ಕೆ ಮಾತನಾಡಿ ಇಲ್ಲಿತರಬೇತಿ ಪಡೆದ 30 ಜನರ ತಂಡ ಸಮಾಜದಲ್ಲಿ ಇತರರಿಗೂ ಈ ತರಬೇತಿಯನ್ನು ನೀಡುವ ಮೂಲಕ ಜಾಗೃತಿ ಮೂಡಿಸಬೇಕು ಎಂದು ಹೇಳಿದರು.

ಭಾರತೀಯರೆಡ್‍ಕ್ರಾಸ್ ಸಂಸ್ಥೆಯ ದ.ಕ ಜಿಲ್ಲಾ ಘಟಕದ ಸರ್ವ್‍ತರಬೇತಿ ಸಂಚಾಲಕ ಸಚೇತ್ ಸುವರ್ಣ ಶಿಬಿರದ ಬಗ್ಗೆ ಮಾಹಿತಿ ನೀಡಿದರು. ವೇದಿಕೆಯಲ್ಲಿ ಎನ್ನೆಸ್ಸೆಸ್‍ ಘಟಕದ ಕಾರ್ಯಕ್ರಮಾಧಿಕಾರಿ ಸುನಿಲ್ ಕುಮಾರ್‍ಎನ್.ಪಿ, ತರಬೇತುದಾರರಾದ ಅಶ್ವಿನ್‍ಕುಮಾರ್ ಮತ್ತು ಗ್ಲೋರಿಯಾ ರೋಡ್ರಿಗಸ್ ಉಪಸ್ಥಿತರಿದ್ದರು.

ಪಾಲಿಟೆಕ್ನಿಕ್ ಎನ್ನೆಸ್ಸೆಸ್‍ಕಾರ್ಯಕ್ರಮಾಧಿಕಾರಿ ಚಂದ್ರಶೇಖರ ಬಿಳಿನೆಲೆ ಸ್ವಾಗತಿಸಿ ನೆಹರೂ ಮೆಮೋರಿಯಲ್‍ ಕಾಲೇಜಿನ ರೆಡ್‍ಕ್ರಾಸ್‍ ಕಾರ್ಯಕ್ರಮಾಧಿಕಾರಿ ಡಾ.ಅನುರಾಧಾ ಕುರುಂಜಿ ವಂದಿಸಿದರು .

Advertisement

ಉದ್ಘಾಟನಾ ಸಮಾರಂಭದ ನಂತರ ಸಚೇತ್ ಸುವರ್ಣ ತಂಡದವರಿಂದ ವಿವಿಧ ಸಂದರ್ಭಗಳಲ್ಲಿ ಅಂದರೆ ಹೃದಯಾಘಾತ, ಅಪಸ್ಮಾರ, ರಸ್ತೆಅಪಘಾತ, ನಾಯಿ ಕಡಿತ, ಹಾವು ಕಡಿತ, ಇತ್ಯಾದಿ ಸಂದರ್ಭದಲ್ಲಿನ ಡೆಸುವ ಪ್ರಥಮ ಚಿಕಿತ್ಸೆಹಾಗೂ ಪ್ರಕೃತಿ ವಿಕೋಪಗಳ ಸಂದರ್ಭದಲ್ಲಿ ಜನರನ್ನುರಕ್ಷಿಸುವ ಬಗ್ಗೆ ಎರಡು ದಿನಗಳ ಪ್ರಾಯೋಗಿಕ ತರಬೇತಿ ನಡೆಯಿತು.ಕೆವಿಜಿ ಪಾಲಿಟೆಕ್ನಿಕ್ ಮತ್ತು ನೆಹರೂ ಮೆಮೋರಿಯಲ್‍ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಈ ತರಬೇತಿಯಲ್ಲಿ ಭಾಗವಹಿಸಿದರು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 10-06-2025 | ಜೂ.11 ರಿಂದ ರಾಜ್ಯದ ವಿವಿದೆಡೆ ಉತ್ತಮ ಮಳೆಯ ಮುನ್ಸೂಚನೆ

ಜೂನ್ 12ರಿಂದ ರಾಜ್ಯದ ಬಹುತೇಕ ಭಾಗಗಳಲ್ಲಿ ಉತ್ತಮ ಹಾಗೂ ಕೆಲವು ಭಾಗಗಳಲ್ಲಿ ಭಾರಿ…

3 hours ago

ಮುಂದಿನ 4-5 ದಿನಗಳಲ್ಲಿ ದೇಶದ ವಾಯುವ್ಯ ಭಾಗಗಳಲ್ಲಿ ತೀವ್ರ ತಾಪಮಾನ | ದಕ್ಷಿಣದಲ್ಲಿ ಉತ್ತಮ ಮಳೆ |

ಜೂನ್‌ 12 ರಿಂದ 15 ರವರೆಗೆ ಕರ್ನಾಟಕದಲ್ಲಿ  ಮತ್ತು ಜೂನ್ 13 ರಿಂದ…

9 hours ago

ಈರುಳ್ಳಿ ಮತ್ತು ಕೆಂಪುಮೆಣಸಿನಕಾಯಿ ಬೆಳೆಗಳಿಗೆ ವಿಮಾ ಸೌಲಭ್ಯ ಅಧಿಸೂಚನೆ

ಗದಗ ಜಿಲ್ಲೆಯಲ್ಲಿ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಭಿಮಾ ಯೋಜನೆಯಡಿ ತೋಟಗಾರಿಕೆ ಬೆಳೆಗಳಾದ…

10 hours ago

11 ವರ್ಷಗಳಲ್ಲಿ ಭಾರತದ ಕಡು ಬಡವರ ಸಂಖ್ಯೆ ತಗ್ಗಿದೆ – ಸಚಿವ ಪ್ರಹ್ಲಾದ್ ಜೋಶಿ

ಕಳೆದ 11 ವರ್ಷಗಳಲ್ಲಿ ಭಾರತದ ಕಡು ಬಡವರ ಸಂಖ್ಯೆ ಶೇಕಡ 21.1 ರಿಂದ…

10 hours ago

25 ಗ್ರೀನ್‌ಫೀಲ್ಡ್ ಎಕ್ಸ್‌ಪ್ರೆಸ್ ಹೆದ್ದಾರಿಗಳ ನಿರ್ಮಾಣ -ಸಚಿವ ನಿತಿನ್‌ ಗಡ್ಕರಿ

ಬಂದರು ಸಂಪರ್ಕಕ್ಕಾಗಿ ಮತ್ತು ಧಾರ್ಮಿಕ ಪ್ರವಾಸೋದ್ಯಮಕ್ಕಾಗಿ 3 ಸಾವಿರ ಕಿಲೋ ಮೀಟರ್‌ಗಿಂತ  ಹೆಚ್ಚಿನ…

10 hours ago

ಧನ, ಧಾನ್ಯ, ಸಂಪತ್ತಿಗಾಗಿ ಇಂತಹ ಕೆಲಸಗಳನ್ನು ಮಾಡಿ…

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

10 hours ago