Advertisement
ಸುದ್ದಿಗಳು

ಕೆ.ವಿ.ಜಿ.ಪಾಲಿಟೆಕ್ನಿಕ್ : ಸರ್ವ್ ತರಬೇತಿ ಕಾರ್ಯಕ್ರಮ

Share

ಸುಳ್ಯ: ಭಾರತೀಯ ರೆಡ್‍ಕ್ರಾಸ್ ಸಂಸ್ಥೆಯ ದಕ್ಷಿಣಕನ್ನಡ ಜಿಲ್ಲಾಘಟಕದ ವತಿಯಿಂದ ಕುರುಂಜಿ ವೆಂಕಟ್ರಮಣ ಗೌಡ ಪಾಲಿಟೆಕ್ನಿಕ್‍ನ ಯುವರೆಡ್‍ ಕ್ರಾಸ್ ಹಾಗೂ ಎನ್ನೆಸ್ಸೆಸ್‍ ಘಟಕ ಹಾಗೂ ನೆಹರೂ ಮೆಮೋರಿಯಲ್‍ ಕಾಲೇಜಿನ ಯುವರೆಡ್‍ಕ್ರಾಸ್ ಘಟಕಗಳ ಸಹಯೋಗದೊಂದಿಗೆ ಸರ್ವ್(ಸೋಸಿಯಲ್ ಎಮೆರ್ಜೆನ್ಸಿರೆಸ್ಪಾನ್ಸ್ ವೊಲಂಟೀಯರ್) ತರಬೇತಿ ಶಿಬಿರವು ಕೆ.ವಿ.ಜಿ.ಪಾಲಿಟೆಕ್ನಿಕ್‍ನಲ್ಲಿ ನಡೆಯಿತು.

ಪಾಲಿಟೆಕ್ನಿಕ್ ಪ್ರಾಂಶುಪಾಲ ಬಾಲಕೃಷ್ಣ ಗೌಡ ಬೊಳ್ಳೂರು ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿ ಪೃಕೃತಿ ವಿಕೋಪಗಳ ಸಂಧರ್ಭದಲ್ಲಿ ಜನರನ್ನು ರಕ್ಷಿಸುವ ಜೊತೆಗೆ ಸ್ವಯಂರಕ್ಷಣೆಯನ್ನೂ ಮಾಡಿಕೊಳ್ಳುವ ಚಾಕಚಕ್ಯತೆಯನ್ನುಇಂತಹ ಶಿಬಿರಗಳಲ್ಲಿ ಕಲಿಯಲು ಸಾಧ್ಯಎಂದು ಹೇಳಿದರು.

ಸಮಾರಂಭವನ್ನು ಉದ್ಘಾಟಿಸಿದ ಉಪಪ್ರಾಂಶುಪಾಲ ಜಯಪ್ರಕಾಶ್ ಕೆ ಮಾತನಾಡಿ ಇಲ್ಲಿತರಬೇತಿ ಪಡೆದ 30 ಜನರ ತಂಡ ಸಮಾಜದಲ್ಲಿ ಇತರರಿಗೂ ಈ ತರಬೇತಿಯನ್ನು ನೀಡುವ ಮೂಲಕ ಜಾಗೃತಿ ಮೂಡಿಸಬೇಕು ಎಂದು ಹೇಳಿದರು.

ಭಾರತೀಯರೆಡ್‍ಕ್ರಾಸ್ ಸಂಸ್ಥೆಯ ದ.ಕ ಜಿಲ್ಲಾ ಘಟಕದ ಸರ್ವ್‍ತರಬೇತಿ ಸಂಚಾಲಕ ಸಚೇತ್ ಸುವರ್ಣ ಶಿಬಿರದ ಬಗ್ಗೆ ಮಾಹಿತಿ ನೀಡಿದರು. ವೇದಿಕೆಯಲ್ಲಿ ಎನ್ನೆಸ್ಸೆಸ್‍ ಘಟಕದ ಕಾರ್ಯಕ್ರಮಾಧಿಕಾರಿ ಸುನಿಲ್ ಕುಮಾರ್‍ಎನ್.ಪಿ, ತರಬೇತುದಾರರಾದ ಅಶ್ವಿನ್‍ಕುಮಾರ್ ಮತ್ತು ಗ್ಲೋರಿಯಾ ರೋಡ್ರಿಗಸ್ ಉಪಸ್ಥಿತರಿದ್ದರು.

ಪಾಲಿಟೆಕ್ನಿಕ್ ಎನ್ನೆಸ್ಸೆಸ್‍ಕಾರ್ಯಕ್ರಮಾಧಿಕಾರಿ ಚಂದ್ರಶೇಖರ ಬಿಳಿನೆಲೆ ಸ್ವಾಗತಿಸಿ ನೆಹರೂ ಮೆಮೋರಿಯಲ್‍ ಕಾಲೇಜಿನ ರೆಡ್‍ಕ್ರಾಸ್‍ ಕಾರ್ಯಕ್ರಮಾಧಿಕಾರಿ ಡಾ.ಅನುರಾಧಾ ಕುರುಂಜಿ ವಂದಿಸಿದರು .

ಉದ್ಘಾಟನಾ ಸಮಾರಂಭದ ನಂತರ ಸಚೇತ್ ಸುವರ್ಣ ತಂಡದವರಿಂದ ವಿವಿಧ ಸಂದರ್ಭಗಳಲ್ಲಿ ಅಂದರೆ ಹೃದಯಾಘಾತ, ಅಪಸ್ಮಾರ, ರಸ್ತೆಅಪಘಾತ, ನಾಯಿ ಕಡಿತ, ಹಾವು ಕಡಿತ, ಇತ್ಯಾದಿ ಸಂದರ್ಭದಲ್ಲಿನ ಡೆಸುವ ಪ್ರಥಮ ಚಿಕಿತ್ಸೆಹಾಗೂ ಪ್ರಕೃತಿ ವಿಕೋಪಗಳ ಸಂದರ್ಭದಲ್ಲಿ ಜನರನ್ನುರಕ್ಷಿಸುವ ಬಗ್ಗೆ ಎರಡು ದಿನಗಳ ಪ್ರಾಯೋಗಿಕ ತರಬೇತಿ ನಡೆಯಿತು.ಕೆವಿಜಿ ಪಾಲಿಟೆಕ್ನಿಕ್ ಮತ್ತು ನೆಹರೂ ಮೆಮೋರಿಯಲ್‍ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಈ ತರಬೇತಿಯಲ್ಲಿ ಭಾಗವಹಿಸಿದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಿಜೋರಾಂನಲ್ಲಿ ಅಕ್ರಮವಾಗಿ ಅಡಿಕೆ ಸಾಗಾಟಕ್ಕೆ ತಡೆ – ₹54.88 ಲಕ್ಷ ಮೌಲ್ಯದ 98 ಚೀಲ ವಶ

ಮಿಜೋರಾಂದ ಚಾಂಫೈ ಜಿಲ್ಲೆಯಲ್ಲಿ ₹54.88 ಲಕ್ಷ ಮೌಲ್ಯದ 98 ಚೀಲ ಅಡಿಕೆ ವಶಪಡಿಸಲಾಗಿದೆ.…

6 hours ago

ಹವಾಮಾನ ವರದಿ | 18-04-2026 | ರಾಜ್ಯದ ಬಹುತೇಕ ಕಡೆ ಸೆಖೆ ಮುಂದುವರಿಕೆ – ಏಪ್ರಿಲ್ 19 ರಿಂದ ಕರಾವಳಿಯಲ್ಲಿ ಮಳೆ ಆರಂಭ!

ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಏಪ್ರಿಲ್ 19ರಿಂದ ಮಳೆ ಆರಂಭವಾಗುವ ಲಕ್ಷಣಗಳು ಗೋಚರಿಸುತ್ತಿವೆ.…

14 hours ago

ಗ್ರಾಮೀಣ ಮೌಲ್ಯಗಳು ಮತ್ತು ನಗರ ಜೀವನ – ಸಮತೋಲನವೇ ನಿಜವಾದ ಮಾರ್ಗ!

ಗ್ರಾಮ ಮತ್ತು ನಗರ ಜೀವನ ಪರಸ್ಪರ ವಿರುದ್ಧವಲ್ಲ, ಪೂರಕ ಶಕ್ತಿಗಳು. ಸಮತೋಲನವೇ ಸಮೃದ್ಧ…

20 hours ago

ದೇಶಾದ್ಯಂತ ಹವಾಮಾನದಲ್ಲಿ ಬದಲಾವಣೆ..! 13 ರಾಜ್ಯಗಳಲ್ಲಿ ಮಳೆ-ಚಂಡಮಾರುತ ಎಚ್ಚರಿಕೆ, ಉತ್ತರ ಭಾರತದಲ್ಲಿ 40°C ದಾಟಿದ ಉಷ್ಣತೆ

ದೇಶದಲ್ಲಿ ಹವಾಮಾನ ತೀವ್ರ ಬದಲಾವಣೆ ಕಂಡುಬರುತ್ತಿದ್ದು, 13 ರಾಜ್ಯಗಳಲ್ಲಿ ಮಳೆ ಮತ್ತು ಗಾಳಿ…

20 hours ago

ಅಂಜನಾದ್ರಿ ಬೆಟ್ಟ ಏರುವವರಿಗೆ ಸಮಯ ನಿಗದಿ .! ಮಧ್ಯಾಹ್ನ 11ರಿಂದ 4ರವರೆಗೆ ಪ್ರವೇಶ ಬ್ಯಾನ್

ಅಂಜನಾದ್ರಿ ಬೆಟ್ಟ ಏರಲು ಮಧ್ಯಾಹ್ನ 11ರಿಂದ ಸಂಜೆ 4ರವರೆಗೆ ನಿರ್ಬಂಧ ವಿಧಿಸಲಾಗಿದೆ. ಬಿಸಿಲಿನ…

21 hours ago

ಕಲಬುರಗಿಯಲ್ಲಿ 43.2°C ತಾಪಮಾನ ದಾಖಲು..! ರಾಜ್ಯದಲ್ಲಿ ಬಿಸಿ ಏರಿಕೆ – ಮುಂದಿನ 5 ದಿನ ಎಚ್ಚರಿಕೆ

ರಾಜ್ಯದಲ್ಲಿ ಉಷ್ಣಾಂಶ ಏರಿಕೆ ಮುಂದುವರಿದಿದ್ದು, ಕಲಬುರಗಿಯಲ್ಲಿ 43.2°C ದಾಖಲಾಗಿದೆ. ಮುಂದಿನ ದಿನಗಳಲ್ಲಿ ಕರಾವಳಿಯಲ್ಲಿ…

21 hours ago