Advertisement
ಸುದ್ದಿಗಳು

ಕೆ.ವಿ.ಜಿ.ಪಾಲಿಟೆಕ್ನಿಕ್ : ಸರ್ವ್ ತರಬೇತಿ ಕಾರ್ಯಕ್ರಮ

Share

ಸುಳ್ಯ: ಭಾರತೀಯ ರೆಡ್‍ಕ್ರಾಸ್ ಸಂಸ್ಥೆಯ ದಕ್ಷಿಣಕನ್ನಡ ಜಿಲ್ಲಾಘಟಕದ ವತಿಯಿಂದ ಕುರುಂಜಿ ವೆಂಕಟ್ರಮಣ ಗೌಡ ಪಾಲಿಟೆಕ್ನಿಕ್‍ನ ಯುವರೆಡ್‍ ಕ್ರಾಸ್ ಹಾಗೂ ಎನ್ನೆಸ್ಸೆಸ್‍ ಘಟಕ ಹಾಗೂ ನೆಹರೂ ಮೆಮೋರಿಯಲ್‍ ಕಾಲೇಜಿನ ಯುವರೆಡ್‍ಕ್ರಾಸ್ ಘಟಕಗಳ ಸಹಯೋಗದೊಂದಿಗೆ ಸರ್ವ್(ಸೋಸಿಯಲ್ ಎಮೆರ್ಜೆನ್ಸಿರೆಸ್ಪಾನ್ಸ್ ವೊಲಂಟೀಯರ್) ತರಬೇತಿ ಶಿಬಿರವು ಕೆ.ವಿ.ಜಿ.ಪಾಲಿಟೆಕ್ನಿಕ್‍ನಲ್ಲಿ ನಡೆಯಿತು.

ಪಾಲಿಟೆಕ್ನಿಕ್ ಪ್ರಾಂಶುಪಾಲ ಬಾಲಕೃಷ್ಣ ಗೌಡ ಬೊಳ್ಳೂರು ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿ ಪೃಕೃತಿ ವಿಕೋಪಗಳ ಸಂಧರ್ಭದಲ್ಲಿ ಜನರನ್ನು ರಕ್ಷಿಸುವ ಜೊತೆಗೆ ಸ್ವಯಂರಕ್ಷಣೆಯನ್ನೂ ಮಾಡಿಕೊಳ್ಳುವ ಚಾಕಚಕ್ಯತೆಯನ್ನುಇಂತಹ ಶಿಬಿರಗಳಲ್ಲಿ ಕಲಿಯಲು ಸಾಧ್ಯಎಂದು ಹೇಳಿದರು.

ಸಮಾರಂಭವನ್ನು ಉದ್ಘಾಟಿಸಿದ ಉಪಪ್ರಾಂಶುಪಾಲ ಜಯಪ್ರಕಾಶ್ ಕೆ ಮಾತನಾಡಿ ಇಲ್ಲಿತರಬೇತಿ ಪಡೆದ 30 ಜನರ ತಂಡ ಸಮಾಜದಲ್ಲಿ ಇತರರಿಗೂ ಈ ತರಬೇತಿಯನ್ನು ನೀಡುವ ಮೂಲಕ ಜಾಗೃತಿ ಮೂಡಿಸಬೇಕು ಎಂದು ಹೇಳಿದರು.

ಭಾರತೀಯರೆಡ್‍ಕ್ರಾಸ್ ಸಂಸ್ಥೆಯ ದ.ಕ ಜಿಲ್ಲಾ ಘಟಕದ ಸರ್ವ್‍ತರಬೇತಿ ಸಂಚಾಲಕ ಸಚೇತ್ ಸುವರ್ಣ ಶಿಬಿರದ ಬಗ್ಗೆ ಮಾಹಿತಿ ನೀಡಿದರು. ವೇದಿಕೆಯಲ್ಲಿ ಎನ್ನೆಸ್ಸೆಸ್‍ ಘಟಕದ ಕಾರ್ಯಕ್ರಮಾಧಿಕಾರಿ ಸುನಿಲ್ ಕುಮಾರ್‍ಎನ್.ಪಿ, ತರಬೇತುದಾರರಾದ ಅಶ್ವಿನ್‍ಕುಮಾರ್ ಮತ್ತು ಗ್ಲೋರಿಯಾ ರೋಡ್ರಿಗಸ್ ಉಪಸ್ಥಿತರಿದ್ದರು.

ಪಾಲಿಟೆಕ್ನಿಕ್ ಎನ್ನೆಸ್ಸೆಸ್‍ಕಾರ್ಯಕ್ರಮಾಧಿಕಾರಿ ಚಂದ್ರಶೇಖರ ಬಿಳಿನೆಲೆ ಸ್ವಾಗತಿಸಿ ನೆಹರೂ ಮೆಮೋರಿಯಲ್‍ ಕಾಲೇಜಿನ ರೆಡ್‍ಕ್ರಾಸ್‍ ಕಾರ್ಯಕ್ರಮಾಧಿಕಾರಿ ಡಾ.ಅನುರಾಧಾ ಕುರುಂಜಿ ವಂದಿಸಿದರು .

ಉದ್ಘಾಟನಾ ಸಮಾರಂಭದ ನಂತರ ಸಚೇತ್ ಸುವರ್ಣ ತಂಡದವರಿಂದ ವಿವಿಧ ಸಂದರ್ಭಗಳಲ್ಲಿ ಅಂದರೆ ಹೃದಯಾಘಾತ, ಅಪಸ್ಮಾರ, ರಸ್ತೆಅಪಘಾತ, ನಾಯಿ ಕಡಿತ, ಹಾವು ಕಡಿತ, ಇತ್ಯಾದಿ ಸಂದರ್ಭದಲ್ಲಿನ ಡೆಸುವ ಪ್ರಥಮ ಚಿಕಿತ್ಸೆಹಾಗೂ ಪ್ರಕೃತಿ ವಿಕೋಪಗಳ ಸಂದರ್ಭದಲ್ಲಿ ಜನರನ್ನುರಕ್ಷಿಸುವ ಬಗ್ಗೆ ಎರಡು ದಿನಗಳ ಪ್ರಾಯೋಗಿಕ ತರಬೇತಿ ನಡೆಯಿತು.ಕೆವಿಜಿ ಪಾಲಿಟೆಕ್ನಿಕ್ ಮತ್ತು ನೆಹರೂ ಮೆಮೋರಿಯಲ್‍ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಈ ತರಬೇತಿಯಲ್ಲಿ ಭಾಗವಹಿಸಿದರು.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 03-09-2026 | ಕರಾವಳಿ–ಮಲೆನಾಡಿನಲ್ಲಿ ಮತ್ತೆ ಮಳೆಯ ಸಾಧ್ಯತೆ…?

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…

5 hours ago

ಹಿಮಾಲಯದಲ್ಲಿ ಹಿಮ ಕರಗಿದರೆ ಅದರ ಪರಿಣಾಮ ಎಲ್ಲಿಗೆ ತಲುಪುತ್ತದೆ? – ಹಿಮಾಲಯದ ದುರಂತದ ಬಳಿಕ ನೇಪಾಳದ ಪ್ರಧಾನಿ ಎಚ್ಚರಿಕೆ

ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…

11 hours ago

ನಾವು ತಿನ್ನುವ ಆಹಾರದಲ್ಲಿ ಕೀಟನಾಶಕ – ಕರ್ನಾಟಕದಲ್ಲಿ 9,176 ಮಾದರಿಗಳಲ್ಲಿ 334 ಮಿತಿ ಮೀರಿವೆ – ದೇಶದ ಅಂಕಿ ಏನು ಹೇಳುತ್ತದೆ?

2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…

19 hours ago

ಒಂದೇ ತೆಂಗಿನ ಮರದಿಂದ ₹10,000 ಆದಾಯ? ಮೌಲ್ಯವರ್ಧನೆಗೆ ಹೊಸ ದಾರಿ ತೋರಿದ ವಿಶ್ವ ತೆಂಗು ದಿನ

ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…

22 hours ago

ಹವಾಮಾನ ವರದಿ | 02-09-2026 | ಉತ್ತರ ಭಾರತದ ವಾಯುಭಾರ ಕುಸಿತ ದುರ್ಬಲವಾಗುವ ಸಾಧ್ಯತೆ

ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…

1 day ago

ಕೃಷಿಗೆ ಸಾಲ ಹೆಚ್ಚಿಸಿ – ಅಲ್ಪಾವಧಿ ಮಾತ್ರವಲ್ಲ, ದೀರ್ಘಾವಧಿ ಸಾಲವೂ ಬೇಕು – ಬ್ಯಾಂಕ್‌ಗಳಿಗೆ ನಿರ್ಮಲಾ ಸೀತಾರಾಮನ್ ಸೂಚನೆ

ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್‌ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…

1 day ago