ಕೆ.ವಿ.ಜಿ ಸುಳ್ಯ ಹಬ್ಬ ಪ್ರಯುಕ್ತ ವಿವಿಧ ಕ್ರೀಡಾಕೂಟ ಆಯೋಜನೆ

December 11, 2019
2:04 PM

ಸುಳ್ಯ: ಡಾ.ಕುರುಂಜಿ ವೆಂಕಟ್ರಮಣ ಗೌಡರ 91ನೇ ಜನ್ಮ ದಿನಾಚರಣೆಯ ಪ್ರಯುಕ್ತ ಕೆ.ವಿ.ಜಿ ಸುಳ್ಯ ಹಬ್ಬ ಸಮಾಜ ಸೇವಾ ಸಂಘದ ವತಿಯಿಂದ ನಡೆಯುವ ಕೆ.ವಿ.ಜಿ ಸುಳ್ಯ ಹಬ್ಬದ ಪ್ರಯುಕ್ತ ವಿವಿಧ ಕ್ರೀಡಾ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಕೆ.ವಿ.ಜಿ ಸುಳ್ಯ ಹಬ್ಬ ಸಮಿತಿಯ ಕ್ರೀಡಾ ಸಂಚಾಲಕ ದೊಡ್ಡಣ್ಣ ಬರೆಮೇಲು ತಿಳಿಸಿದ್ದಾರೆ.

Advertisement
Advertisement

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು 18 ವರ್ಷದ ಪುರುಷರ ಕಬಡ್ಡಿ ಪಂದ್ಯಾಟ ಈಗಾಗಲೇ ನಡೆಸಲಾಗಿದೆ. ಡಿ.15ರಂದು ಗಾಂಧೀನಗರ ಶಾಲಾ ಮೈದಾನದಲ್ಲಿ ಪುಟ್ ಬಾಲ್ ಪಂದ್ಯಾಟ ನಡೆಯಲಿದೆ. ಸುಳ್ಯ ತಾಲೂಕು ಬ್ಯಾಡ್ಮಿಂಟನ್ ಅಸೋಸಿಯೇಶನ್ ವತಿಯಿಂದ ಡಿ.21 ರಂದು ಅಂತಾರಾಜ್ಯ ಮಟ್ಟದ ಪುರುಷರ ಬ್ಯಾಡ್ಮಿಂಟನ್ , ಡಿ.22 ರಂದು ಸುಳ್ಯ ತಾಲೂಕು ಮಟ್ಟದ ಪುರುಷ, ಮಹಿಳಾ, ಬಾಲಕ, ಬಾಲಕಿಯರ ಬ್ಯಾಡ್ಮಿಂಟನ್ ಪಂದ್ಯ ಕುರುಂಜಿಗುಡ್ಡೆಯ ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯಲಿದೆ. ಡಿ.24ರಂದು ಸುಳ್ಯ ತಾಲೂಕು ಲಗೋರಿ ಅಸೋಸಿಯೇಷನ್ ಮತ್ತು ದ.ಕ.ಜಿಲ್ಲಾ ಲಗೋರಿ ಅಸೋಸಿಯೇಷನ್ ವತಿಯಿಂದ ರಾಜ್ಯಮಟ್ಟದ ಹೊನಲು ಬೆಳಕಿನ ಲಗೋರಿ ಪಂದ್ಯಾಟ ನಡೆಯಲಿದೆ. ಅಪರಾಹ್ನ ಎರಡರಿಂದ ತಾಲೂಕು ಹಾಗು ಜಿಲ್ಲೆಯ ಲಗೋರಿ ತಂಡಗಳ ಮಧ್ಯೆ ನಾಕೌಟ್ ಮಾದರಿಯ ಪಂದ್ಯಾಟ ನಡೆಯಲಿದ್ದು ಸೆಮಿಫೈನಲ್ ಗೆ ಬಂದ ನಾಲ್ಕು ತಂಡಗಳು ಮತ್ತು ಇತರ ಜಿಲ್ಲೆಗಳಿಂದ ಬಂದ ನಾಲ್ಕು ತಂಡಗಳು ಸೇರಿ ಎಂಟು ತಂಡಗಳ ಮಧ್ಯೆ ಲೀಗ್ ಮಾದರಿಯ ಪಂದ್ಯಾಟ ನಡೆಯಲಿದೆ. ಡಿ.25ರಂದು ಮಹಿಳೆಯರಿಗೆ ತ್ರೋಬಾಲ್ ಪಂದ್ಯಾಟ, ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ವತಿಯಿಂದ ತಾಲೂಕು ಮಟ್ಟದ ಪುರುಷರ ಕಬಡ್ಡಿ ಪಂದ್ಯಾಟ ನಡೆಯಲಿದೆ ಎಂದು ಅವರು ವಿವರಿಸಿದರು.

ಸುದ್ದಿಗೋಷ್ಠಿಯಲ್ಲಿ ಕೆ.ವಿ.ಜಿ ಸುಳ್ಯ ಹಬ್ಬ ಸಮಾಜ ಸೇವಾ ಸಂಘದ ಅಧ್ಯಕ್ಷ ಶೈಲೇಶ್ ಅಂಬೆಕಲ್ಲು, ನಗರ ಪಂಚಾಯತ್ ಸದಸ್ಯ ಶರೀಫ್ ಕಂಠಿ, ಅಬ್ದುಲ್ ರಹಿಮಾನ್ ಮೊಗರ್ಪಣೆ, ಎನ್.ಎ.ರಾಮಚಂದ್ರ ಇದ್ದರು.

Advertisement

Advertisement

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಪರಿಸರ ವಿಚಾರದಲ್ಲಿ ಸರ್ಕಾರದ ಬೇಜವಾಬ್ದಾರಿ..! ಇಲ್ಲಿದೆ ಅಭಿಪ್ರಾಯ..
June 27, 2025
11:35 PM
by: The Rural Mirror ಸುದ್ದಿಜಾಲ
ಬೆಂಗಳೂರು-ಕಣ್ಣೂರು ರೈಲು ವಿಳಂಬ | ಸಕಾಲಿಕ ಸೇವೆಗೆ ಪ್ರಯಾಣಿಕರ ಒತ್ತಾಯ
June 27, 2025
10:44 PM
by: The Rural Mirror ಸುದ್ದಿಜಾಲ
ಶುರುವಾಯಿತು ಕಡಲುಕೊರೆತ..!
June 27, 2025
10:37 PM
by: The Rural Mirror ಸುದ್ದಿಜಾಲ
ಪಶ್ಚಿಮ ಘಟ್ಟಗಳ ಸಂರಕ್ಷಣೆಗೆ  ಜನಜಾಗೃತಿ ಮೂಡಿಸುವ  ವಿನೂತನ ಪ್ರಯತ್ನ
June 27, 2025
8:40 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group