Advertisement
ಸುದ್ದಿಗಳು

ಕೇಂದ್ರ ಸರಕಾರ ಪರಿಹಾರ ಘೋಷಿಸಲಿ- ಕೆಪಿಸಿಸಿ ತಂಡ ಆಗ್ರಹ

Share

ಸುಳ್ಯ: ರಾಜ್ಯದಲ್ಲಿ ಕಂಡು ಕೇಳರಿಯದಷ್ಟು ಭೀಕರವಾದ ಪ್ರಳಯದಿಂದ ಜನತೆ ಸಂಪೂರ್ಣ ತತ್ತರಿಸಿ ಹೋಗಿದ್ದರೂ ಕೇಂದ್ರ ಸರಕಾರ ಒಂದು ರೂಪಾಯಿಯವನ್ನೂ ಪರಿಹಾರ ನೀಡದೆ ತೀವ್ರ ಅನ್ಯಾಯ ಮಾಡಿದೆ ಎಂದು ಕೆಪಿಸಿಸಿ ನೇಮಕ ಮಾಡಿದ ಪ್ರಕೃತಿ ವಿಕೋಪ ಅಧ್ಯಯನ ತಂಡ ಹೇಳಿದೆ.

ಸುಳ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಚಿವರಾದ ಬಿ.ರಮಾನಾಥ ರೈ ಮತ್ತು ಯು.ಟಿ.ಖಾದರ್ ಈ ಹಿಂದೆ ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ ಪ್ರವಾಹ ಉಂಟಾದಾಗ ಅಂದಿನ ಪ್ರಧಾನಿ ಮನಮೋಹನ್ ಸಿಂಗ್ ರಾಜ್ಯಕ್ಕೆ ಆಗಮಿಸಿ ವೈಮಾನಿಕ ಸಮೀಕ್ಷೆ ನಡೆಸಿ ತಕ್ಷಣ ಎರಡು ಸಾವಿರ ಕೋಟಿ ಪರಿಹಾರ ಘೋಷಣೆ ಮಾಡಿದ್ದರು. ಆದರೆ ಪ್ರಧಾನಿ ನರೇಂದ್ರ ಮೋದಿಯವರು ಪರಿಹಾರವನ್ನೂ ಘೋಷಿಸದೆ, ರಾಜ್ಯಕ್ಕೆ ಭೇಟಿ ನೀಡಿ ಪ್ರಳಯ ಬಾಧಿತ ಪ್ರದೇಶದ ವೀಕ್ಷಣೆಯನ್ನು ಮಾಡದೆ ಕರ್ನಾಟಕದ ಜನತೆಯನ್ನು ಕಡೆಗಣಿಸಿದ್ದಾರೆ ಎಂದು ಆರೋಪಿಸಿದರು. ಅಮಿತ್ ಷಾ, ನಿರ್ಮಲಾ ಶೀತಾರಾಮನ್ ರಾಜ್ಯಕ್ಕೆ ಭೇಟಿ ನೀಡಿ ಪ್ರವಾಹ ಪೀಡಿತ ಪ್ರದೇಶವನ್ನು ವೀಕ್ಷಿಸಿದರೂ ಯಾವುದೇ ಪರಿಹಾರ ಘೋಷಣೆ ಮಾಡದೆ ಬರಿಗೈಯಲ್ಲಿ ಹಿಂತಿರುಗಿದ್ದಾರೆ ಎಂದರು.

ಸರ್ವಪಕ್ಷ ಸಭೆ ಕರೆಯಲಿ:ರಾಜ್ಯದಲ್ಲಿ ಉಂಟಾಗಿರುವ ಪ್ರಕೃತಿ ವಿಕೋಪದ ಕುರಿತು ಚರ್ಚಿಸಲು ಮುಖ್ಯಮಂತ್ರಿ ಯಡಿಯೂರಪ್ಪ ಸರ್ವ ಪಕ್ಷಗಳ ಸಭೆ ಕರೆದು ಚರ್ಚಿಸಲಿ ಎಂದು ಯು.ಟಿ.ಖಾದರ್ ಒತ್ತಾಯಿಸಿದರು. ಕೊಡಗಿನಲ್ಲಿ ಪ್ರಕೃತಿ ವಿಕೋಪ ಉಂಟಾದ ಸಂದರ್ಭದಲ್ಲಿ ಸಮ್ಮಿಶ್ರ ಸರಕಾರ ಜನರ ಜೊತೆಯಲ್ಲಿ ನಿಂತು ಕೆಲಸ ಮಾಡಿ ಎಲ್ಲಾ ನೆರವನ್ನೂ ನೀಡಿತ್ತು. ಆದರೆ ಈಗ ಸರಕಾರ ಪ್ರಳಯ ಪರಿಸ್ಥಿತಿಯನ್ನು ಎದುರಿಸುವಲ್ಲಿ ಎಡವಿದೆ ಎಂದು ಟೀಕಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 30-07-2026 | ಕರ್ನಾಟಕದಲ್ಲಿ ಇನ್ನೆರಡು ದಿನ ಉತ್ತಮ ಮಳೆ

ಮಧ್ಯಪ್ರದೇಶದಲ್ಲಿರುವ ವಾಯುಭಾರ ಕುಸಿತದ ಪರಿಣಾಮವಾಗಿ ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಹಲವು…

4 hours ago

ಸಮಾಜಕ್ಕೆ ಸರಿದಾರಿಯನ್ನು ತೋರುವುದು ಗುರುವಿನ ಕಾರ್ಯ : ರಾಘವೇಶ್ವರ ಶ್ರೀ

ಗೋಕರ್ಣದ ಅಶೋಕೆಯ ಮೂಲಮಠದಲ್ಲಿ 'ಅನ್ನಬ್ರಹ್ಮ ಚಾತುರ್ಮಾಸ್ಯ' ಆರಂಭಗೊಂಡಿದ್ದು, ಸಮಾಜಕ್ಕೆ ಸರಿಯಾದ ದಾರಿ ತೋರಿಸುವುದು…

12 hours ago

ಅಪೊಲೊ ಫಾರ್ಮಸಿಯಲ್ಲಿ ಉದ್ಯೋಗಾವಕಾಶ : ಆಗಸ್ಟ್‌ 1ರಂದು ಪುತ್ತೂರಿನಲ್ಲಿ ನೇರ ಸಂದರ್ಶನ

ಅಪೊಲೊ ಫಾರ್ಮಸಿ ವತಿಯಿಂದ ವಿವಿಧ ಹುದ್ದೆಗಳ ಭರ್ತಿಗಾಗಿ ಆಗಸ್ಟ್‌ 1ರಂದು ಪುತ್ತೂರಿನಲ್ಲಿ ನೇರ…

12 hours ago

ಹವಾಮಾನ ವರದಿ | 29-07-2026 | ಆ.2 ರಿಂದ ಮಳೆಯ ಸ್ಥಿತಿ ಏನಾಗಬಹುದು..?

ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನಲ್ಲಿ ಇನ್ನೂ ಬಿಟ್ಟುಬಿಟ್ಟು ಮಳೆ ಮುಂದುವರಿಯಲಿದೆ. ಆದರೆ…

1 day ago

ಆಸ್ಪತ್ರೆಗಳಲ್ಲಿ ಬಳಕೆಯಾಗದ ಔಷಧ ಮರುಬಳಕೆ – ಹಣವೂ ಉಳಿಯುತ್ತದೆ, ಪರಿಸರವೂ ಕಾಪಾಡುತ್ತದೆ..!

ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…

2 days ago

ಮಲೆನಾಡಿನಿಂದ ಬಯಲುನಾಡಿನತ್ತ ಅಡಿಕೆ ಬೆಳೆ ವಿಸ್ತರಣೆ : ರಾಣೆಬೆನ್ನೂರಿನಲ್ಲಿ ಹೆಚ್ಚಿದ ರೈತರ ಆಸಕ್ತಿ

ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಭಾಗದಲ್ಲಿ ಅಡಿಕೆ ಬೆಳೆ ವೇಗವಾಗಿ ವಿಸ್ತರಿಸುತ್ತಿದ್ದು, ಉತ್ತಮ ಆದಾಯದ…

2 days ago