Advertisement
ಧಾರ್ಮಿಕ

ಕೇನ್ಯದಲ್ಲಿ ಲಕ್ಷ್ಮೀ ನರಸಿಂಹ ಮಠದ ಗುಡಿ ನಿರ್ಮಾಣಕ್ಕೆ ಶಿಲಾನ್ಯಾಸ

Share

ಬಳ್ಪ:  ದೇವರ ವಿವಿಧ ರೂಪಗಳಲ್ಲಿ ಶ್ರೀ ಲಕ್ಷ್ಮಿ ನರಸಿಂಹ ದೇವರು ಒಂದು. ನರಸಿಂಹ ದೇವರು ಸ್ಥಂಭಮೂರ್ತಿಯಾಗಿ ದಿವ್ಯವಾಗಿ ಅವತರಿಸಿರುವರು. ನರಸಿಂಹ ದೇವರ ಉಪಾಸನೆಗೆ ಅಪಾರ ಶಕ್ತಿ ಹಾಗೂ ಅನಂತ ಪ್ರಭೆ ಇದೆ ಎಂದು ಸುಬ್ರಹ್ಮಣ್ಯ ಸಂಪುಟ ಶ್ರೀ ನರಸಿಂಹ ಸ್ವಾಮಿ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ ಶ್ರೀಗಳು ಹೇಳಿದರು.

Advertisement

ಅವರು ಕೇನ್ಯ ಗ್ರಾಮದ ಲಕ್ಷ್ಮೀ ನರಸಿಂಹ ದೇವರು ಕಾಯಂಬಾಡಿ ಮಠದ ನೂತನ ಆಲಯ ನಿರ್ಮಾಣಕ್ಕೆ ಶುಕ್ರವಾರ ಭೂಮಿ ಪೂಜೆ ನೆರವೇರಿಸಿ ಆಶಿರ್ವಚನ ನೀಡಿದರು. ಸೂರ್ಯನ ಬೆಳಕಿನ ಕಿರಣಗಳಲ್ಲಿ ಸಕಾರಾತ್ಮಕ ಶಕ್ತಿ ಇರುತ್ತವೆ, ಸೂರ್ಯನ ಕಿರಣಗಳು ಭೂಮಿಯ ಮೇಲೆ ಹರಿಯುವ ಸಂದರ್ಭ ಅದು ಶುಭಮುಹೂರ್ತ. ಈ ಕಾಲದಲ್ಲಿ ಜರಗುವ ಎಲ್ಲ ಕಾರ್ಯಗಳು ಯಶಸ್ವಿಯಾಗುತ್ತವೆ ಎಂದರು.
ಧಾರ್ಮಿಕ ಉಪನ್ಯಾಸ ನೀಡಿದ ಶ್ರೀ ಸರಸ್ವತಿ ವಿದ್ಯಾಲಯದ ಸಂಚಾಲಕ ಅವಿನಾಶ್ ಕೊಡಂಕೆರಿ,” ಪರಮಾತ್ಮನ ಆರಾಧನೆಯಿಂದ ಭಕ್ತರು ಬದುಕಿನಲ್ಲಿ ಸರಿಯಾದ ಪಥವನ್ನು ಹಿಡಿಯಲು ಸಾಧ್ಯ. ಇದಕ್ಕೆ ಆಲಯಗಳ ಅಗತ್ಯವಿದೆ. ಗ್ರಾಮದ ಸುಭೀಕ್ಷೆ ಹಾಗೂ ಸಮೃದ್ಧ ಆಕಾಂಕ್ಷೆಗೆ ದೇಗುಲಗಳ ನಿರ್ಮಾಣ ಆಗಬೇಕಿದೆ” ಎಂದರು.
ಸತ್ಯನಾರಾಯಣ ಭಟ್ ಕಾಯಂಬಾಡಿ ಪ್ರಸ್ತಾವನೆಗೈದರು. ಉದ್ಯಮಿ ಕೆ.ಅಚ್ಚುತ ಭಟ್ ಸಭಾಧ್ಯಕ್ಷತೆ ವಹಿಸಿದ್ದರು. ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಸದಸ್ಯ ಕೆ. ರವೀಂದ್ರ ಶೆಟ್ಟಿ, ನಿವೃತ್ತ ತಹಶೀಲ್ದಾರ್ ಜಿ. ಗೆಜ್ಜೆ ತಮ್ಮಯ್ಯ ಗೌಡ, ಉದ್ಯಮಿ ಸದಾನಂದ ರೈ ಅರ್ಗುಡಿ, ಕಾರ್ಕಳದ ಪ್ರಕೃತಿ ಸ್ಟೋನ್ ಕ್ರಾಪ್ಟ್ ಮಾಲಕ ಪ್ರದೀಪ್ ಪಾಠಕ್, ಬಳ್ಪ ಕುಂಜತ್ತಾಡಿ ಶ್ರೀ ವನದುರ್ಗಾ ದೇವಿ ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಬಾಲಕೃಷ್ಣ ರೈ ಬಿರ್ಕಿ, ಕಣ್ಕಲ್ ಬೀಡಿನ ರವಿ ಅಮ್ಮಣ್ಣಾಯ, ಯುವರಾಜ ಕಣ್ಕಲ್ಲು ಮುಖ್ಯ ಅತಿಥಿಗಳಾಗಿದ್ದರು.
ತಂತ್ರಿಗಳಾದ ರವಿಕುಮಾರ ಆಚಾರ್ಯ ಕಾರ್ಕಳ ಅವರ ನೇತೃತ್ವದಲ್ಲಿ ವೈದಿಕ ವಿಧಿವಿಧಾನಗಳು ನಡೆದವು.

ಪ್ರಕಾಶ್ ಭಟ್ ವಂದಿಸಿ ಕೃಷ್ಣ ವೈಲಾಯ ಕಾರ್ಯಕ್ರಮ ನಿರೂಪಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ದೇಶದ ಪ್ರಮುಖ ಜಲಾಶಯಗಳಲ್ಲಿ ನೀರಿನ ಸಂಗ್ರಹ ಕುಸಿತ : ಮಳೆಯ ಕೊರತೆ ಪರಿಣಾಮ

ಮಳೆಯ ಕೊರತೆಯಿಂದ ದೇಶದ ಜಲಾಶಯಗಳ ನೀರಿನ ಮಟ್ಟ ಕುಸಿದಿರುವುದು ಬೇಸಿಗೆ ತಿಂಗಳುಗಳಲ್ಲಿ ನೀರಿನ…

1 hour ago

ಭಾರತ–ಬ್ರೆಜಿಲ್ ಕೃಷಿ ಸಹಕಾರ : ನೈಸರ್ಗಿಕ ಕೃಷಿಗೆ ಒತ್ತು, ಶೀಘ್ರದಲ್ಲೇ MoU

ಭಾರತ ಮತ್ತು ಬ್ರೆಜಿಲ್ ನಡುವೆ ಕೃಷಿ ಕ್ಷೇತ್ರದಲ್ಲಿ ಸಹಕಾರವನ್ನು ಮತ್ತಷ್ಟು ಬಲಪಡಿಸಲು ಮಹತ್ವದ…

1 hour ago

ಕರಾವಳಿಯಲ್ಲಿ ಅಕಾಲಿಕ ಮಳೆ ಅಬ್ಬರ | ಸುಬ್ರಹ್ಮಣ್ಯದ ಬಳಿ 42 ಮಿಮೀ, ಅಡಿಕೆ ಬೆಳೆಗಾರರಿಗೆ ಸಂಕಷ್ಟ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಹಲವೆಡೆ ಶನಿವಾರ ಸಂಜೆ ಅಕಾಲಿಕ ಮಳೆಯಾಗಿದ್ದು,…

14 hours ago

ಹವಾಮಾನ ವರದಿ | 21-02-2026 | ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಲಕ್ಷಣ | ಎಲ್ಲೆಲ್ಲಾ ಮಳೆ ಇದೆ…? ಎಷ್ಟು ದಿನ ಮಳೆ ಸಾಧ್ಯತೆ…?

ಕರ್ನಾಟಕದಲ್ಲಿ ಫೆಬ್ರುವರಿ 27ರವರೆಗೆ ಬಿಸಿಲಿನ ಜೊತೆಗೆ ತುಂತುರು ಮತ್ತು ಗುಡುಗು ಮಳೆಯ ಮುನ್ಸೂಚನೆ.…

20 hours ago

ಮಿಶ್ರ ಕೃಷಿಯತ್ತ ಮಲೆನಾಡಿನ ರೈತನ ಹೆಜ್ಜೆ ಅನಿವಾರ್ಯ

ಮಲೆನಾಡಿನಲ್ಲಿ ಅಡಿಕೆ ರೈತರು ಮಿಶ್ರ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಹವಾಮಾನ ಬದಲಾವಣೆ, ಬೆಲೆ…

1 day ago

ನಂದಿನಿ ಉತ್ಪನ್ನಗಳ ವಿರುದ್ಧದ ವದಂತಿ ನಂಬಬೇಡಿ : ಗ್ರಾಹಕರಿಗೆ ಕೆಎಂಎಫ್ ಮನವಿ

ನಂದಿನಿ ಹಾಲು ಮತ್ತು ಉತ್ಪನ್ನಗಳು ಸೇವನೆಗೆ ಸಂಪೂರ್ಣ ಸುರಕ್ಷಿತವೆಂದು ಕೆಎಂಎಫ್ ಸ್ಪಷ್ಟನೆ ನೀಡಿದೆ.…

1 day ago