Advertisement
ಧಾರ್ಮಿಕ

ಕೇನ್ಯದಲ್ಲಿ ಲಕ್ಷ್ಮೀ ನರಸಿಂಹ ಮಠದ ಗುಡಿ ನಿರ್ಮಾಣಕ್ಕೆ ಶಿಲಾನ್ಯಾಸ

Share

ಬಳ್ಪ:  ದೇವರ ವಿವಿಧ ರೂಪಗಳಲ್ಲಿ ಶ್ರೀ ಲಕ್ಷ್ಮಿ ನರಸಿಂಹ ದೇವರು ಒಂದು. ನರಸಿಂಹ ದೇವರು ಸ್ಥಂಭಮೂರ್ತಿಯಾಗಿ ದಿವ್ಯವಾಗಿ ಅವತರಿಸಿರುವರು. ನರಸಿಂಹ ದೇವರ ಉಪಾಸನೆಗೆ ಅಪಾರ ಶಕ್ತಿ ಹಾಗೂ ಅನಂತ ಪ್ರಭೆ ಇದೆ ಎಂದು ಸುಬ್ರಹ್ಮಣ್ಯ ಸಂಪುಟ ಶ್ರೀ ನರಸಿಂಹ ಸ್ವಾಮಿ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ ಶ್ರೀಗಳು ಹೇಳಿದರು.

ಅವರು ಕೇನ್ಯ ಗ್ರಾಮದ ಲಕ್ಷ್ಮೀ ನರಸಿಂಹ ದೇವರು ಕಾಯಂಬಾಡಿ ಮಠದ ನೂತನ ಆಲಯ ನಿರ್ಮಾಣಕ್ಕೆ ಶುಕ್ರವಾರ ಭೂಮಿ ಪೂಜೆ ನೆರವೇರಿಸಿ ಆಶಿರ್ವಚನ ನೀಡಿದರು. ಸೂರ್ಯನ ಬೆಳಕಿನ ಕಿರಣಗಳಲ್ಲಿ ಸಕಾರಾತ್ಮಕ ಶಕ್ತಿ ಇರುತ್ತವೆ, ಸೂರ್ಯನ ಕಿರಣಗಳು ಭೂಮಿಯ ಮೇಲೆ ಹರಿಯುವ ಸಂದರ್ಭ ಅದು ಶುಭಮುಹೂರ್ತ. ಈ ಕಾಲದಲ್ಲಿ ಜರಗುವ ಎಲ್ಲ ಕಾರ್ಯಗಳು ಯಶಸ್ವಿಯಾಗುತ್ತವೆ ಎಂದರು.
ಧಾರ್ಮಿಕ ಉಪನ್ಯಾಸ ನೀಡಿದ ಶ್ರೀ ಸರಸ್ವತಿ ವಿದ್ಯಾಲಯದ ಸಂಚಾಲಕ ಅವಿನಾಶ್ ಕೊಡಂಕೆರಿ,” ಪರಮಾತ್ಮನ ಆರಾಧನೆಯಿಂದ ಭಕ್ತರು ಬದುಕಿನಲ್ಲಿ ಸರಿಯಾದ ಪಥವನ್ನು ಹಿಡಿಯಲು ಸಾಧ್ಯ. ಇದಕ್ಕೆ ಆಲಯಗಳ ಅಗತ್ಯವಿದೆ. ಗ್ರಾಮದ ಸುಭೀಕ್ಷೆ ಹಾಗೂ ಸಮೃದ್ಧ ಆಕಾಂಕ್ಷೆಗೆ ದೇಗುಲಗಳ ನಿರ್ಮಾಣ ಆಗಬೇಕಿದೆ” ಎಂದರು.
ಸತ್ಯನಾರಾಯಣ ಭಟ್ ಕಾಯಂಬಾಡಿ ಪ್ರಸ್ತಾವನೆಗೈದರು. ಉದ್ಯಮಿ ಕೆ.ಅಚ್ಚುತ ಭಟ್ ಸಭಾಧ್ಯಕ್ಷತೆ ವಹಿಸಿದ್ದರು. ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಸದಸ್ಯ ಕೆ. ರವೀಂದ್ರ ಶೆಟ್ಟಿ, ನಿವೃತ್ತ ತಹಶೀಲ್ದಾರ್ ಜಿ. ಗೆಜ್ಜೆ ತಮ್ಮಯ್ಯ ಗೌಡ, ಉದ್ಯಮಿ ಸದಾನಂದ ರೈ ಅರ್ಗುಡಿ, ಕಾರ್ಕಳದ ಪ್ರಕೃತಿ ಸ್ಟೋನ್ ಕ್ರಾಪ್ಟ್ ಮಾಲಕ ಪ್ರದೀಪ್ ಪಾಠಕ್, ಬಳ್ಪ ಕುಂಜತ್ತಾಡಿ ಶ್ರೀ ವನದುರ್ಗಾ ದೇವಿ ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಬಾಲಕೃಷ್ಣ ರೈ ಬಿರ್ಕಿ, ಕಣ್ಕಲ್ ಬೀಡಿನ ರವಿ ಅಮ್ಮಣ್ಣಾಯ, ಯುವರಾಜ ಕಣ್ಕಲ್ಲು ಮುಖ್ಯ ಅತಿಥಿಗಳಾಗಿದ್ದರು.
ತಂತ್ರಿಗಳಾದ ರವಿಕುಮಾರ ಆಚಾರ್ಯ ಕಾರ್ಕಳ ಅವರ ನೇತೃತ್ವದಲ್ಲಿ ವೈದಿಕ ವಿಧಿವಿಧಾನಗಳು ನಡೆದವು.

ಪ್ರಕಾಶ್ ಭಟ್ ವಂದಿಸಿ ಕೃಷ್ಣ ವೈಲಾಯ ಕಾರ್ಯಕ್ರಮ ನಿರೂಪಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ಮಾರುಕಟ್ಟೆಯ ಸ್ಥಿತಿಗತಿ ಮತ್ತು ಬೆಳೆಗಾರರ ಅಭಿಪ್ರಾಯ : ಸಮೀಕ್ಷಾ ವರದಿ

ಅಡಿಕೆ ಮಾರುಕಟ್ಟೆಯಲ್ಲಿ ವರ್ತಕರ ಸಿಂಡಿಕೇಟ್ ಮತ್ತು ವಿದೇಶಿ ಆಮದು ಬೆಲೆ ಅಸ್ಥಿರತೆಗೆ ಕಾರಣವಾಗಿವೆ.…

6 hours ago

ಭಾರತದಲ್ಲಿ ವಿದ್ಯುತ್ ಉತ್ಪಾದನೆಗೆ ಐತಿಹಾಸಿಕ ಏರಿಕೆ : 55 ಗಿಗಾವ್ಯಾಟ್ ಹೆಚ್ಚಳ – ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ

ಭಾರತದಲ್ಲಿ ವಿದ್ಯುತ್ ಉತ್ಪಾದನೆ ಸಾಮರ್ಥ್ಯದಲ್ಲಿ ಐತಿಹಾಸಿಕವಾಗಿ 55 ಗಿಗಾವ್ಯಾಟ್ ಹೆಚ್ಚಳವಾಗಿದೆ. ನವೀಕರಿಸಬಹುದಾದ ಇಂಧನ…

7 hours ago

ದೇಶದಲ್ಲಿ LPG ವಿತರಣೆ ಸಾಮಾನ್ಯ ಹಂತಕ್ಕೆ : ಒಂದೇ ದಿನ 51.5 ಲಕ್ಷ ಸಿಲಿಂಡರ್ ವಿತರಣೆ

ದೇಶದಲ್ಲಿ LPG ವಿತರಣೆ ಸಾಮಾನ್ಯವಾಗಿದ್ದು, ಒಂದೇ ದಿನ 51.5 ಲಕ್ಷ ಸಿಲಿಂಡರ್ ವಿತರಿಸಲಾಗಿದೆ.…

7 hours ago

ರೈತರ ಪಂಪ್‌ಸೆಟ್‌ಗಳಿಗೆ ದಿನಕ್ಕೆ 7 ಗಂಟೆ ವಿದ್ಯುತ್ ಭರವಸೆ

ರೈತರ ಪಂಪ್‌ಸೆಟ್‌ಗಳಿಗೆ ದಿನಕ್ಕೆ 7 ಗಂಟೆ ವಿದ್ಯುತ್ ನೀಡಲು ಸರ್ಕಾರ ಕ್ರಮ ಕೈಗೊಳ್ಳುತ್ತಿದೆ.…

7 hours ago

2026 ಜೂನ್‌ನಲ್ಲಿ ಭಾರತದಲ್ಲಿ ಸಾಮಾನ್ಯ ಮುಂಗಾರು ಮುನ್ಸೂಚನೆ | ಪಶ್ಚಿಮ ಘಟ್ಟ-ಕರಾವಳಿ ಭಾಗದಲ್ಲಿ ಭಾರೀ ಮಳೆ ಸಾಧ್ಯತೆ

2026ರ ಮುಂಗಾರು ಸಾಮಾನ್ಯವಾಗಿ ಆರಂಭವಾದರೂ ನಂತರ ಮಳೆಯ ಕೊರತೆ ಸಂಭವಿಸಬಹುದು. ಎಲ್‌ನಿನೋ ಪರಿಣಾಮದಿಂದ…

23 hours ago

ಹವಾಮಾನ ವರದಿ | 12-04-2026 | ಬಿಸಿಲಿನ ತಾಪ ಹೆಚ್ಚಳದ ನಡುವೆ ಮಳೆಯ ನಿರೀಕ್ಷೆ| ಎಪ್ರಿಲ್ 15 ನಂತರ ಗುಡುಗು ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಇನ್ನೂ ಕೆಲ ದಿನಗಳು ಬಿಸಿಲು ತಾಪಮಾನ ಹೆಚ್ಚಾಗಿದ್ದು, ತುಂತುರು ಮಳೆ ಮಾತ್ರ…

23 hours ago