ಕೊಚ್ಚಿ: ಎರಡನೇ ಬಾರಿ ಪ್ರಧಾನಿಯಾಗಿ ಅಧಿಕಾರ ವಹಿಸಿದ ಬಳಿಕ ನರೇಂದ್ರ ಮೋದಿಯವರು ಗಿ ಕೇರಳಕ್ಕೆ ಮೊದಲ ಆಗಮಿಸಿದ್ದಾರೆ. ಶುಕ್ರವಾರ ರಾತ್ರಿ 11.45ಕ್ಕೆ ವಿಶೇಷ ವಿಮಾನದಲ್ಲಿ ಕೊಚ್ಚಿಗೆ ಆಗಮಿಸಿದ ಪ್ರಧಾನಿಯವರನ್ನು ಕೇರಳ ರಾಜ್ಯಪಾಲ ಪಿ.ಸದಾಶಿವಂ, ಕೇಂದ್ರ ಸಚಿವ ವಿ.ಮುರಳೀಧರನ್, ಕೇರಳ ರಾಜ್ಯ ಸಚಿವ ಕಡಗಂಪಳ್ಳಿ ಸುರೇಂದ್ರನ್, ರಾಜ್ಯ ಸಭಾ ಸದಸ್ಯ ಸುರೇಶ್ ಗೋಪಿ ಮತ್ತಿತರರು ಸ್ವಾಗತಿಸಿದರು. ಬಳಿಕ ಪ್ರಧಾನಿ ಎರ್ನಾಕುಲಂ ಸರಕಾರಿ ಅತಿಥಿ ಗೃಹದಲ್ಲಿ ವಾಸ್ತವ್ಯ ಹೂಡಿದರು.
ಶನಿವರ ಬೆಳಿಗ್ಗೆ 8.45ಕ್ಕೆ ಹೆಲಿಕಾಪ್ಟರ್ ಮೂಲಕ ಗುರುವಾಯೂರಿಗೆ ತೆರಳುವರು. 10.10ಕ್ಕೆ ಗುರುವಾಯೂರು ಶ್ರೀಕೃಷ್ಣ ದೇವಸ್ಥಾನದಲ್ಲಿ ದರ್ಶನ ಪಡೆಯುವರು. ಈ ಸಂದರ್ಭ ತಾವರೆ ಹೂವಿನಲ್ಲಿ ತುಲಾಭಾರ ಸೇವೆ ನಡೆಸಲಿದ್ದಾರೆ. ಬಳಿಕ 11.15ಕ್ಕೆ ಗುರುವಾಯೂರು ಶ್ರೀಕೃಷ್ಣ ಹಯರ್ ಸೆಕೆಂಡರಿ ಕಾಲೇಜು ಗ್ರೌಂಡ್ ನಲ್ಲಿ ಬಿಜೆಪಿ ವತಿಯಿಂದ ನಡೆಯುವ ಅಭಿನಂದನಾ ಸಮ್ಮೇಳನದಲ್ಲಿ ಭಾಗವಹಿಸುವರು.
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…
ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…
2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…
ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…
ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…
ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…