Advertisement
ರಾಷ್ಟ್ರೀಯ

ಕೇರಳದಲ್ಲಿ ಮತ್ತೆ “ನಿಫಾ” ಭಯ

Share

ಎರ್ನಾಕುಲಂ : ಕಳೆದ ವರ್ಷ ಕೇರಳದಲ್ಲಿ ತೀವ್ರವಾಗಿ ಬಾಧಿಸಿದ್ದ ನಿಫಾ ವೈರಸ್ ಈ ಬಾರಿ ಮತ್ತೆ ಕಾಡಿದೆ. ಹೀಗಾಗಿ ಈಗ ಇಡೀ ಕೇರಳದಲ್ಲಿ ಆರೋಗ್ಯ ಇಲಾಖೆ  ಹೈಎಲರ್ಟ್ ಆಗಿದ್ದು ಮುಂಜಾಗ್ರತಾ ಕ್ರಮಗಳನ್ನು  ಘೋಷಿಸಿದೆ.

ಕೇರಳದಲ್ಲಿ  ಮತ್ತೆ ನಿಫಾ ಭಯ ಆರಂಭ ಆಗಿದ್ದು ಎನಾ೯ಕುಲಂ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ದಾಖಲಾಗಿದ್ದ ಯುವಕನಲ್ಲಿ  ನಿಫಾ ವೈರಸ್ ಸಂಶಯಗೊಂಡಿದೆ. ಹೀಗಾಗಿ ಪುಣೆ ವೈರಾಲಜಿ ವಿಭಾಗಕ್ಕೆ ಪರೀಕ್ಷೆಗಾಗಿ ಕಳುಹಿಸಲಾಗಿದ್ದು ವರದಿ ಬಂದ ಬಳಿಕವೇ ಖಚಿತಗೊಳ್ಳಲಿದೆ.

ಎರ್ನಾಕುಲಂ ಕಾಲೇಜು ವಿದ್ಯಾರ್ಥಿಯೊಬ್ಬನಿಗೆ ಜ್ವರದ ಬಾಧೆ ಕಾಣಿಸಿದ್ದು ಇದೀಗ ನಿಫಾ ವೈರಸ್ ಸಂದೇಹದ ಹಿನ್ನೆಲೆಯಲ್ಲಿ ಪರೀಕ್ಷೆಗೆ ಕಳುಹಿಸಲಾಗಿದೆ. ಈ ಯುವಕನಿಗೆ ಎನಾ೯ಕುಲಂ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ  ತೀವ್ರನಿಗಾ ವಿಭಾಗದಲ್ಲಿ  ಚಿಕಿತ್ಸೆ ನೀಡಲಾಗುತ್ತಿದೆ. ಜೊತೆಗೆ ವಿದ್ಯಾರ್ಥಿಯ ನಿಕಟ ವರ್ತಿಗಳ ಹಾಗೂ ಸುಮಾರು 80 ವಿದ್ಯಾರ್ಥಿಗಳ ಕಡೆಗೂ ನಿಗಾ ಇರಿಸಲಾಗಿದೆ. ಮುಂಜಾಗ್ರತಾ ಕ್ರಮ ಕೈಗೊಂಡಿದೆ.  ಯಾವುದೇ  ಆತಂಕ ಬೇಡವೆಂದು ಆರೋಗ್ಯ ಇಲಾಖೆ ಹೇಳಿದೆ.

ಈ ವೈರಸ್ ಬಾವಲಿ ಅಥವಾ ಹಂದಿಯ ಮೂಲಕ ಮತ್ತು ಮನುಷ್ಯರಿಂದ ಮನುಷ್ಯರಿಗೆ ಹರಡುತ್ತದೆ. ಬಾವಲಿಗಳು ತಿಂದ ವಸ್ತುಗಳು, ಹಣ್ಣುಗಳ ಮೂಲಕ ಬೇಗಬೆ ನಿಫಾ ಹರಡುತ್ತದೆ.

ನಿಫಾ ವೈರಸ್ ಬಾಧಿಸಿದ ವ್ಯಕ್ತಿಗಳಿಗೆ ಜ್ವರ, ತಲೆನೋವು, ತಲೆತಿರುಗುವುದು, ಸ್ಮೃತಿ ತಪ್ಪುವುದು , ಕೆಮ್ಮು , ಹೊಟ್ಟೆನೋವು, ವಾಂತಿ , ದೃಷ್ಟಿ ಮಂದವಾಗುವುದು  ಸೇರಿದಂತೆ ವಿವಿಧ ಲಕ್ಷಣಗಳು ಕಾಣಿಸುತ್ತದೆ.  ಜ್ವರ ಬಂದ 15 ದಿನಗಳ ನಂತರ ಇದೆಲ್ಲಾ ಲಕ್ಷಣ ಕಾಣಿಸುತ್ತದೆ. ಕೊನೆಗೆ ಕೋಮಾ ಸ್ಥಿತಿಗೂ ಹೋಗಬಹುದಾಗಿದೆ.

ಬಾವಲಿಗಳು ತಿಂದ ಹಣ್ಣು ತಿನ್ನುವುದು  ಸೇರಿದಂತೆ ಹಣ್ಣುಗಳನ್ನು  ಈಗ ತಿನ್ನುವಾಗ ಕೊಂಚ ಎಚ್ಚರಿಕೆ ವಹಿಸುವುದು  ಮೊದಲ ಮುಂಜಾಗ್ರತೆಯಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಉತ್ತರ ಭಾರತದಲ್ಲಿ ಮಂಗಳೂರು ಚಾಲಿ ಅಡಿಕೆಗೆ ಋತುಮಾನ ಬೇಡಿಕೆ | ಯಾವ ತಿಂಗಳಲ್ಲಿ ಹೆಚ್ಚು ಲಾಭ? ಯಾವಾಗ ಮಾರುಕಟ್ಟೆ ಮಂದಗತಿ?

ಉತ್ತರ ಭಾರತದಲ್ಲಿ ಮಂಗಳೂರು ಚಾಲಿ ಅಡಿಕೆಯ ಬೇಡಿಕೆ ಯಾವ ತಿಂಗಳಲ್ಲಿ ಹೆಚ್ಚು ಗೊತ್ತಾ?…

3 minutes ago

ವಿದೇಶಿ ಅಡಿಕೆ ಶಂಕೆ – ತೆರಿಗೆ ವಂಚನೆ ವಿವಾದ | ವಶಪಡಿಸಿಕೊಂಡ 380 ಚೀಲ ಬಿಡುಗಡೆಗೆ ಕೇರಳ ಹೈಕೋರ್ಟ್ ನಿರಾಕರಣೆ

ಕಸ್ಟಮ್ಸ್‌ ವಶಪಡಿಸಿಕೊಂಡಿದ್ದ 380 ಚೀಲ ಅಡಿಕೆ ಬಿಡುಗಡೆಗೆ ಕೇರಳ ಹೈಕೋರ್ಟ್ ನಿರಾಕರಿಸಿದೆ. ಅಡಿಕೆ…

27 minutes ago

ಆಂಧ್ರಪ್ರದೇಶದ ಹೊಸ ಪ್ರಯೋಗ : ರೈತನ ತೋಟದಿಂದ ನೇರವಾಗಿ ಮನೆ ಬಾಗಿಲಿಗೆ ಕೃಷಿ ಉತ್ಪನ್ನ

ಆಂಧ್ರಪ್ರದೇಶ ಸರ್ಕಾರ ರೈತರಿಂದ ನೇರವಾಗಿ ಕೃಷಿ ಉತ್ಪನ್ನಗಳನ್ನು ಮನೆ ಬಾಗಿಲಿಗೆ ತಲುಪಿಸುವ “Farm-to-Home”…

16 hours ago

ಭಾರತ ಕೃಷಿಯಲ್ಲಿ ಭರ್ಜರಿ ದಾಖಲೆ : ಆಹಾರ ಉತ್ಪಾದನೆ 3765 ಮಿಲಿಯನ್ ಟನ್!

2025-26ರಲ್ಲಿ ಭಾರತದಲ್ಲಿ 3765.63 ಲಕ್ಷ ಟನ್ ಆಹಾರ ಉತ್ಪಾದನೆ ಸಾಧ್ಯತೆ ಇದ್ದು, ಇದು…

1 day ago

ಮಂಗಳೂರಿನಲ್ಲಿ ಉದ್ಯೋಗಾವಕಾಶ : ಮೇ 30ರಂದು ಕಸ್ಟಮರ್ ಸಪೋರ್ಟ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ನೇರ ಸಂದರ್ಶನ

ವಿ.ಆರ್.ಎನ್ ಇನ್ಪೋಟೆಕ್ ಕಂಪೆನಿಯ ಕಸ್ಟಮರ್ ಸಪೋರ್ಟ್ ಎಕ್ಸಿಕ್ಯೂಟಿವ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ಮೇ…

1 day ago

ಬ್ಲಿಂಕಿಟ್‌ನಲ್ಲಿ ಉದ್ಯೋಗಾವಕಾಶ : ಜೂನ್ 1ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಬ್ಲಿಂಕಿಟ್ ಕಂಪೆನಿಯ ಪಿಕ್ಕರ್ ಹಾಗೂ ಪ್ಯಾಕರ್ ಹುದ್ದೆಗಳಿಗೆ ಜೂನ್ 1ರಂದು ಮಂಗಳೂರಿನಲ್ಲಿ ನೇರ…

1 day ago