ಕೇರಳದ ಪ್ರಸಿದ್ಧ ಕಣ್ ಸನ್ನೆ ನಟಿ ಪ್ರಿಯಾ ವಾರಿಯರ್ ಕೊಡಗಿನ ನಿಸರ್ಗಧಾಮಕ್ಕೆ ಭೇಟಿ

August 27, 2019
10:00 AM

ಮಡಿಕೇರಿ : ಕಣ್ ಸನ್ನೆಯ ವೀಡಿಯೋ ವೈರಲ್ ಆಗಿ ದೇಶದ ಎಲ್ಲೆಡೆ ಪ್ರಸಿದ್ಧವಾದ ಕೇರಳದ ಯುವನಟಿ ಪ್ರಿಯಾ ವಾರಿಯರ್ ಕೊಡಗಿನ ನಿಸರ್ಗಧಾಮಕ್ಕೆ ಭೇಟಿ ನೀಡಿದರು.

ನೆರೆಪ್ರವಾಹದ ಗುಂಗಿನಿಂದ ಪ್ರವಾಸಿಗರನ್ನು ಹೊರತರಲು ಕುಶಾಲನಗರದ ನಿಸರ್ಗಧಾಮ ಟೂರಿಸ್ಟ್ ಸೆಂಟರ್ ನವರು ಎನ್.ಟಿ.ಸಿ ಗೆ ಭೇಟಿ ನೀಡಲೆಂದು ಆಹ್ವಾನಿಸಿದ ಹಿನ್ನಲೆ ನಿಸರ್ಗಧಾಮ ಟೂರಿಸ್ಟ್ ಸೆಂಟರ್ ಗೆ ಭೇಟಿ ಕೊಟ್ಟ ಪ್ರಿಯಾ ವಾರಿಯರ್, ಕೊಡಗಿನ ಜನತೆ ಒಗ್ಗಟ್ಟಿನಿಂದ ಇರಬೇಕು. ಕೊಡಗಿನ ಜನತೆ ಸತತ ಎರಡನೇ ಭಾರಿ ಪ್ರವಾಹವನ್ನು ಎದಿರಿಸುತ್ತಿದ್ದು, ಒಬ್ಬರನ್ನೊಬ್ಬರು ಅರ್ಥೈಸಿಕೊಂಡು ಸಹಾಯ ಮಾಡುವುದರ ಮೂಲಕ ಒಗ್ಗಟ್ಟಿನಿಂದಿರಬೇಕು ಎಂದರು.

ಕೊಡಗಿಗೆ ಮೂರನೇ ಭಾರಿ ಭೇಟಿ ಮಾಡುತ್ತಿರುವ ಅವರು, ಕೊಡಗಿನಲ್ಲಿ ರಮಣೀಯವಾದ ಹಾಗೂ ಅದ್ಭುತವಾದ ಪ್ರವಾಸಿ ತಾಣಗಳಿವೆ. ಪ್ರವಾಹದ ಗುಂಗಿನಲ್ಲಿರುವ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಕೊಡಗಿಗೆ ಆಗಮಿಸಿ ಇಲ್ಲಿನ ಪ್ರವಾಸಿ ತಾಣಗಳಿಗೆ ಭೇಟಿ ನೀಡಿ ಎಂದರು. ಕೊಡಗಿನ ಜನತೆ ಪ್ರವಾಸಿಗರೊಂದಿಗೆ ಸೌಜನ್ಯದಿಂದ ವರ್ತಿಸುತ್ತಿರುವುದು ತುಂಬಾ ಸಂತೋಷವಾಗುತ್ತಿದೆ. “ವಿಸಿಟ್ ಟು ಸೇಫ್ ಆಂಡ್ ಪೀಸ್ ಕೂರ್ಗ್” ಎಂದು ಪ್ರಿಯಾ ವಾರಿಯರ್ ಪ್ರವಾಸಿಗರಿಗೆ ಕರೆ ನೀಡಿದರು.

ಮುಂದೆ ಬಿಡುಗಡೆಯಾಗಲಿರುವ ಚಿತ್ರದ ಬಗ್ಗೆ ಮಾತನಾಡಿದ ಅವರು, ಹಿಂದಿ, ತೆಲುಗು, ಹಾಗು ಕನ್ನಡ ಚಿತ್ರರಂಗದಲ್ಲಿ ಸಿನಿಮಾ ಮಾಡುತ್ತಲಿದ್ದೇನೆ. ‘ಅಡಾರ್ ಲವ್’ ಮಲಯಾಳಂ ಚಿತ್ರಕ್ಕೆ ನೀಡಿದ ಬೆಂಬಲವನ್ನು ನನ್ನ ಮುಂದಿನ ಸಿನಿಮಾಗಳಿಗೂ ನೀಡುತ್ತಾರೆ ಎಂಬ ನಿರೀಕ್ಷೆಯಲ್ಲಿದ್ದೇನೆ ಎಂದರು.
ಈ ಸಂದರ್ಭ ಪ್ರಿಯಾ ವಾರಿಯರ್ ಅಭಿಮಾನಿಗಳು ನಟಿಯೊಡನೆ ಸೆಲ್ಫಿ ತೆಗೆದುಕೊಂಡು ಆನಂದಿಸಿದರು. ಅಭಿಮಾನಿಗಳ ಒತ್ತಾಯದ ಮೇರೆಗೆ ಮತ್ತೊಮ್ಮೆ ಕಣ್ ಸನ್ನೆಯನ್ನು ಮಾಡಿ ಸಾರ್ವಜನಿಕರಿಗೆ ಮನೋರಂಜನೆ ನೀಡಿದರು.
ನಿಸರ್ಗಧಾಮ ಟೂರಿಸ್ಟ್ ಸೆಂಟರ್ ನ ಸ್ಪೈಸಸ್ ಮಳಿಗೆ, ಬಟ್ಟೆ ಮಳಿಗೆ, ಹಾಗೂ ಫ್ಯಾನ್ಸಿ ಮಳಿಗೆಗಳಿಗೆ ಭೇಟಿ ಶಾಪಿಂಗ್ ಮಾಡಿದರು.ಈ ಸಂದರ್ಭ ಪ್ರಿಯಾ ವಾರಿಯರ್ ಸ್ನೇಹಿತರು ಇದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಸರಿಯಾದ ಆಹಾರ ಪದ್ಧತಿಯೇ ರೋಗಮುಕ್ತ ಜೀವನದ ಮೂಲ – ರಾಘವೇಶ್ವರ ಶ್ರೀ
July 30, 2026
8:38 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 30-07-2026 | ಕರ್ನಾಟಕದಲ್ಲಿ ಇನ್ನೆರಡು ದಿನ ಉತ್ತಮ ಮಳೆ
July 30, 2026
4:18 PM
by: ಸಾಯಿಶೇಖರ್ ಕರಿಕಳ
ಸಮಾಜಕ್ಕೆ ಸರಿದಾರಿಯನ್ನು ತೋರುವುದು ಗುರುವಿನ ಕಾರ್ಯ : ರಾಘವೇಶ್ವರ ಶ್ರೀ
July 30, 2026
7:39 AM
by: ದ ರೂರಲ್ ಮಿರರ್.ಕಾಂ
ಅಪೊಲೊ ಫಾರ್ಮಸಿಯಲ್ಲಿ ಉದ್ಯೋಗಾವಕಾಶ : ಆಗಸ್ಟ್‌ 1ರಂದು ಪುತ್ತೂರಿನಲ್ಲಿ ನೇರ ಸಂದರ್ಶನ
July 30, 2026
7:26 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror