ಸುದ್ದಿಗಳು

ಕೇರಳದ ಪ್ರಸಿದ್ಧ ಕಣ್ ಸನ್ನೆ ನಟಿ ಪ್ರಿಯಾ ವಾರಿಯರ್ ಕೊಡಗಿನ ನಿಸರ್ಗಧಾಮಕ್ಕೆ ಭೇಟಿ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಮಡಿಕೇರಿ : ಕಣ್ ಸನ್ನೆಯ ವೀಡಿಯೋ ವೈರಲ್ ಆಗಿ ದೇಶದ ಎಲ್ಲೆಡೆ ಪ್ರಸಿದ್ಧವಾದ ಕೇರಳದ ಯುವನಟಿ ಪ್ರಿಯಾ ವಾರಿಯರ್ ಕೊಡಗಿನ ನಿಸರ್ಗಧಾಮಕ್ಕೆ ಭೇಟಿ ನೀಡಿದರು.

Advertisement
Advertisement

ನೆರೆಪ್ರವಾಹದ ಗುಂಗಿನಿಂದ ಪ್ರವಾಸಿಗರನ್ನು ಹೊರತರಲು ಕುಶಾಲನಗರದ ನಿಸರ್ಗಧಾಮ ಟೂರಿಸ್ಟ್ ಸೆಂಟರ್ ನವರು ಎನ್.ಟಿ.ಸಿ ಗೆ ಭೇಟಿ ನೀಡಲೆಂದು ಆಹ್ವಾನಿಸಿದ ಹಿನ್ನಲೆ ನಿಸರ್ಗಧಾಮ ಟೂರಿಸ್ಟ್ ಸೆಂಟರ್ ಗೆ ಭೇಟಿ ಕೊಟ್ಟ ಪ್ರಿಯಾ ವಾರಿಯರ್, ಕೊಡಗಿನ ಜನತೆ ಒಗ್ಗಟ್ಟಿನಿಂದ ಇರಬೇಕು. ಕೊಡಗಿನ ಜನತೆ ಸತತ ಎರಡನೇ ಭಾರಿ ಪ್ರವಾಹವನ್ನು ಎದಿರಿಸುತ್ತಿದ್ದು, ಒಬ್ಬರನ್ನೊಬ್ಬರು ಅರ್ಥೈಸಿಕೊಂಡು ಸಹಾಯ ಮಾಡುವುದರ ಮೂಲಕ ಒಗ್ಗಟ್ಟಿನಿಂದಿರಬೇಕು ಎಂದರು.

ಕೊಡಗಿಗೆ ಮೂರನೇ ಭಾರಿ ಭೇಟಿ ಮಾಡುತ್ತಿರುವ ಅವರು, ಕೊಡಗಿನಲ್ಲಿ ರಮಣೀಯವಾದ ಹಾಗೂ ಅದ್ಭುತವಾದ ಪ್ರವಾಸಿ ತಾಣಗಳಿವೆ. ಪ್ರವಾಹದ ಗುಂಗಿನಲ್ಲಿರುವ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಕೊಡಗಿಗೆ ಆಗಮಿಸಿ ಇಲ್ಲಿನ ಪ್ರವಾಸಿ ತಾಣಗಳಿಗೆ ಭೇಟಿ ನೀಡಿ ಎಂದರು. ಕೊಡಗಿನ ಜನತೆ ಪ್ರವಾಸಿಗರೊಂದಿಗೆ ಸೌಜನ್ಯದಿಂದ ವರ್ತಿಸುತ್ತಿರುವುದು ತುಂಬಾ ಸಂತೋಷವಾಗುತ್ತಿದೆ. “ವಿಸಿಟ್ ಟು ಸೇಫ್ ಆಂಡ್ ಪೀಸ್ ಕೂರ್ಗ್” ಎಂದು ಪ್ರಿಯಾ ವಾರಿಯರ್ ಪ್ರವಾಸಿಗರಿಗೆ ಕರೆ ನೀಡಿದರು.

ಮುಂದೆ ಬಿಡುಗಡೆಯಾಗಲಿರುವ ಚಿತ್ರದ ಬಗ್ಗೆ ಮಾತನಾಡಿದ ಅವರು, ಹಿಂದಿ, ತೆಲುಗು, ಹಾಗು ಕನ್ನಡ ಚಿತ್ರರಂಗದಲ್ಲಿ ಸಿನಿಮಾ ಮಾಡುತ್ತಲಿದ್ದೇನೆ. ‘ಅಡಾರ್ ಲವ್’ ಮಲಯಾಳಂ ಚಿತ್ರಕ್ಕೆ ನೀಡಿದ ಬೆಂಬಲವನ್ನು ನನ್ನ ಮುಂದಿನ ಸಿನಿಮಾಗಳಿಗೂ ನೀಡುತ್ತಾರೆ ಎಂಬ ನಿರೀಕ್ಷೆಯಲ್ಲಿದ್ದೇನೆ ಎಂದರು.
ಈ ಸಂದರ್ಭ ಪ್ರಿಯಾ ವಾರಿಯರ್ ಅಭಿಮಾನಿಗಳು ನಟಿಯೊಡನೆ ಸೆಲ್ಫಿ ತೆಗೆದುಕೊಂಡು ಆನಂದಿಸಿದರು. ಅಭಿಮಾನಿಗಳ ಒತ್ತಾಯದ ಮೇರೆಗೆ ಮತ್ತೊಮ್ಮೆ ಕಣ್ ಸನ್ನೆಯನ್ನು ಮಾಡಿ ಸಾರ್ವಜನಿಕರಿಗೆ ಮನೋರಂಜನೆ ನೀಡಿದರು.
ನಿಸರ್ಗಧಾಮ ಟೂರಿಸ್ಟ್ ಸೆಂಟರ್ ನ ಸ್ಪೈಸಸ್ ಮಳಿಗೆ, ಬಟ್ಟೆ ಮಳಿಗೆ, ಹಾಗೂ ಫ್ಯಾನ್ಸಿ ಮಳಿಗೆಗಳಿಗೆ ಭೇಟಿ ಶಾಪಿಂಗ್ ಮಾಡಿದರು.ಈ ಸಂದರ್ಭ ಪ್ರಿಯಾ ವಾರಿಯರ್ ಸ್ನೇಹಿತರು ಇದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬೆಳಗಾವಿಯಲ್ಲಿ ಧಾರಾಕಾರ ಮಳೆ | ವ್ಯಾಪಕವಾಗಿ ಕೃಷಿಗೆ ಹಾನಿ

ಬೆಳಗಾವಿ ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ಸುರಿಯುತ್ತಿರುವ ಧಾರಾಕಾರ ಮಳೆ ಹಾಗೂ ಮಹಾರಾಷ್ಟ್ರದ…

12 hours ago

ಪುತ್ತೂರಿನಲ್ಲಿ ಜೂನ್ 30 ರಿಂದ ಜುಲೈ 6 ರ ತನಕ ಯಕ್ಷಗಾನ ತಾಳಮದ್ದಳೆ ಸಪ್ತಾಹ | ‘ಕುರಿಯ ಪ್ರಶಸ್ತಿ’ ಪ್ರದಾನ

ಪುತ್ತೂರಿನ ಶ್ರೀ ಲಕ್ಷ್ಮೀವೆಂಕಟ್ರಮಣ ದೇವಸ್ಥಾನ ಹಾಗೂ ಕುರಿಯ ವಿಠಲ ಶಾಸ್ತ್ರಿ ಸಾಂಸ್ಕೃತಿಕ ಪ್ರತಿಷ್ಠಾನ …

12 hours ago

ಅಡಿಕೆ ಮಾರಾಟದ ದಾರಿಗಳು ಯಾವುದೆಲ್ಲಾ…?

ಬೆಳೆಗಾರರು ಸಹಕಾರಿ ಸಂಸ್ಥೆಗಳು ಮತ್ತು ಬೆಳೆಗಾರದ್ದೇ ಆದ ಇತರ ಸಂಸ್ಥೆಗಳ ಮೂಲಕ ವ್ಯವಹಾರ…

13 hours ago

ಹವಾಮಾನ ಆಧರಿತ ಬೆಳೆ ವಿಮಾ ಯೋಜನೆ | ಕೃಷಿಕರಿಗೆ ಹೇಗೆ ಪ್ರಯೋಜನವಾಗುತ್ತಿದೆ…?

ಹವಾಮಾನ ಆಧರಿತ ಬೆಳೆ ವಿಮಾ ಯೋಜನೆ ಜಾರಿಯಾಗಿ ವರ್ಷಗಳು ಕೆಲವು ಉರುಳಿದವು. ಇಂದಿಗೂ…

13 hours ago

ಸಕಲ ಸಂಕಷ್ಟಗಳನ್ನು ಮಾಯ ಮಾಡ್ತಾಳೆ ಈ ಉಕ್ಕಡ ಮಾರಮ್ಮ | ಆಷಾಡ ಶುಕ್ರವಾರ ಈ ದೇವಿಯನ್ನು ಈ ರೀತಿ ಪೂಜಿಸಿ

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

13 hours ago

ಬೆಳೆವಿಮೆ ಯೋಜನೆ | ರೈತರಿಗೆ ತೋಟಗಾರಿಕಾ ಇಲಾಖೆ ಸೂಚನೆ

ತೋಟಗಾರಿಕೆ ಬೆಳೆ ಬೆಳೆದ ರೈತರು ಹವಾಮಾನ ವೈಪರೀತ್ಯದಿಂದ ಬೆಳೆ ನಷ್ಟ ಸಂಭವಿಸಿದಲ್ಲಿ ನಷ್ಟ…

20 hours ago