Advertisement
ಸುದ್ದಿಗಳು

ಕೇರಳದ ಪ್ರಸಿದ್ಧ ಕಣ್ ಸನ್ನೆ ನಟಿ ಪ್ರಿಯಾ ವಾರಿಯರ್ ಕೊಡಗಿನ ನಿಸರ್ಗಧಾಮಕ್ಕೆ ಭೇಟಿ

Share

ಮಡಿಕೇರಿ : ಕಣ್ ಸನ್ನೆಯ ವೀಡಿಯೋ ವೈರಲ್ ಆಗಿ ದೇಶದ ಎಲ್ಲೆಡೆ ಪ್ರಸಿದ್ಧವಾದ ಕೇರಳದ ಯುವನಟಿ ಪ್ರಿಯಾ ವಾರಿಯರ್ ಕೊಡಗಿನ ನಿಸರ್ಗಧಾಮಕ್ಕೆ ಭೇಟಿ ನೀಡಿದರು.

ನೆರೆಪ್ರವಾಹದ ಗುಂಗಿನಿಂದ ಪ್ರವಾಸಿಗರನ್ನು ಹೊರತರಲು ಕುಶಾಲನಗರದ ನಿಸರ್ಗಧಾಮ ಟೂರಿಸ್ಟ್ ಸೆಂಟರ್ ನವರು ಎನ್.ಟಿ.ಸಿ ಗೆ ಭೇಟಿ ನೀಡಲೆಂದು ಆಹ್ವಾನಿಸಿದ ಹಿನ್ನಲೆ ನಿಸರ್ಗಧಾಮ ಟೂರಿಸ್ಟ್ ಸೆಂಟರ್ ಗೆ ಭೇಟಿ ಕೊಟ್ಟ ಪ್ರಿಯಾ ವಾರಿಯರ್, ಕೊಡಗಿನ ಜನತೆ ಒಗ್ಗಟ್ಟಿನಿಂದ ಇರಬೇಕು. ಕೊಡಗಿನ ಜನತೆ ಸತತ ಎರಡನೇ ಭಾರಿ ಪ್ರವಾಹವನ್ನು ಎದಿರಿಸುತ್ತಿದ್ದು, ಒಬ್ಬರನ್ನೊಬ್ಬರು ಅರ್ಥೈಸಿಕೊಂಡು ಸಹಾಯ ಮಾಡುವುದರ ಮೂಲಕ ಒಗ್ಗಟ್ಟಿನಿಂದಿರಬೇಕು ಎಂದರು.

ಕೊಡಗಿಗೆ ಮೂರನೇ ಭಾರಿ ಭೇಟಿ ಮಾಡುತ್ತಿರುವ ಅವರು, ಕೊಡಗಿನಲ್ಲಿ ರಮಣೀಯವಾದ ಹಾಗೂ ಅದ್ಭುತವಾದ ಪ್ರವಾಸಿ ತಾಣಗಳಿವೆ. ಪ್ರವಾಹದ ಗುಂಗಿನಲ್ಲಿರುವ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಕೊಡಗಿಗೆ ಆಗಮಿಸಿ ಇಲ್ಲಿನ ಪ್ರವಾಸಿ ತಾಣಗಳಿಗೆ ಭೇಟಿ ನೀಡಿ ಎಂದರು. ಕೊಡಗಿನ ಜನತೆ ಪ್ರವಾಸಿಗರೊಂದಿಗೆ ಸೌಜನ್ಯದಿಂದ ವರ್ತಿಸುತ್ತಿರುವುದು ತುಂಬಾ ಸಂತೋಷವಾಗುತ್ತಿದೆ. “ವಿಸಿಟ್ ಟು ಸೇಫ್ ಆಂಡ್ ಪೀಸ್ ಕೂರ್ಗ್” ಎಂದು ಪ್ರಿಯಾ ವಾರಿಯರ್ ಪ್ರವಾಸಿಗರಿಗೆ ಕರೆ ನೀಡಿದರು.

ಮುಂದೆ ಬಿಡುಗಡೆಯಾಗಲಿರುವ ಚಿತ್ರದ ಬಗ್ಗೆ ಮಾತನಾಡಿದ ಅವರು, ಹಿಂದಿ, ತೆಲುಗು, ಹಾಗು ಕನ್ನಡ ಚಿತ್ರರಂಗದಲ್ಲಿ ಸಿನಿಮಾ ಮಾಡುತ್ತಲಿದ್ದೇನೆ. ‘ಅಡಾರ್ ಲವ್’ ಮಲಯಾಳಂ ಚಿತ್ರಕ್ಕೆ ನೀಡಿದ ಬೆಂಬಲವನ್ನು ನನ್ನ ಮುಂದಿನ ಸಿನಿಮಾಗಳಿಗೂ ನೀಡುತ್ತಾರೆ ಎಂಬ ನಿರೀಕ್ಷೆಯಲ್ಲಿದ್ದೇನೆ ಎಂದರು.
ಈ ಸಂದರ್ಭ ಪ್ರಿಯಾ ವಾರಿಯರ್ ಅಭಿಮಾನಿಗಳು ನಟಿಯೊಡನೆ ಸೆಲ್ಫಿ ತೆಗೆದುಕೊಂಡು ಆನಂದಿಸಿದರು. ಅಭಿಮಾನಿಗಳ ಒತ್ತಾಯದ ಮೇರೆಗೆ ಮತ್ತೊಮ್ಮೆ ಕಣ್ ಸನ್ನೆಯನ್ನು ಮಾಡಿ ಸಾರ್ವಜನಿಕರಿಗೆ ಮನೋರಂಜನೆ ನೀಡಿದರು.
ನಿಸರ್ಗಧಾಮ ಟೂರಿಸ್ಟ್ ಸೆಂಟರ್ ನ ಸ್ಪೈಸಸ್ ಮಳಿಗೆ, ಬಟ್ಟೆ ಮಳಿಗೆ, ಹಾಗೂ ಫ್ಯಾನ್ಸಿ ಮಳಿಗೆಗಳಿಗೆ ಭೇಟಿ ಶಾಪಿಂಗ್ ಮಾಡಿದರು.ಈ ಸಂದರ್ಭ ಪ್ರಿಯಾ ವಾರಿಯರ್ ಸ್ನೇಹಿತರು ಇದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಆಂಧ್ರಪ್ರದೇಶದ ಹೊಸ ಪ್ರಯೋಗ : ರೈತನ ತೋಟದಿಂದ ನೇರವಾಗಿ ಮನೆ ಬಾಗಿಲಿಗೆ ಕೃಷಿ ಉತ್ಪನ್ನ

ಆಂಧ್ರಪ್ರದೇಶ ಸರ್ಕಾರ ರೈತರಿಂದ ನೇರವಾಗಿ ಕೃಷಿ ಉತ್ಪನ್ನಗಳನ್ನು ಮನೆ ಬಾಗಿಲಿಗೆ ತಲುಪಿಸುವ “Farm-to-Home”…

8 hours ago

ಭಾರತ ಕೃಷಿಯಲ್ಲಿ ಭರ್ಜರಿ ದಾಖಲೆ : ಆಹಾರ ಉತ್ಪಾದನೆ 3765 ಮಿಲಿಯನ್ ಟನ್!

2025-26ರಲ್ಲಿ ಭಾರತದಲ್ಲಿ 3765.63 ಲಕ್ಷ ಟನ್ ಆಹಾರ ಉತ್ಪಾದನೆ ಸಾಧ್ಯತೆ ಇದ್ದು, ಇದು…

19 hours ago

ಮಂಗಳೂರಿನಲ್ಲಿ ಉದ್ಯೋಗಾವಕಾಶ : ಮೇ 30ರಂದು ಕಸ್ಟಮರ್ ಸಪೋರ್ಟ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ನೇರ ಸಂದರ್ಶನ

ವಿ.ಆರ್.ಎನ್ ಇನ್ಪೋಟೆಕ್ ಕಂಪೆನಿಯ ಕಸ್ಟಮರ್ ಸಪೋರ್ಟ್ ಎಕ್ಸಿಕ್ಯೂಟಿವ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ಮೇ…

19 hours ago

ಬ್ಲಿಂಕಿಟ್‌ನಲ್ಲಿ ಉದ್ಯೋಗಾವಕಾಶ : ಜೂನ್ 1ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಬ್ಲಿಂಕಿಟ್ ಕಂಪೆನಿಯ ಪಿಕ್ಕರ್ ಹಾಗೂ ಪ್ಯಾಕರ್ ಹುದ್ದೆಗಳಿಗೆ ಜೂನ್ 1ರಂದು ಮಂಗಳೂರಿನಲ್ಲಿ ನೇರ…

20 hours ago

ಬಕ್ರೀದ್‌ಗೂ ಮುನ್ನ ದೇಶದಲ್ಲಿ ಹೊಸ ಚರ್ಚೆ | “ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಿ” — ಮುಸ್ಲಿಂ ಸಂಘಟನೆಗಳ ಬೇಡಿಕೆ

ಬಕ್ರೀದ್‌ಗೂ ಮುನ್ನ ಗೋಹತ್ಯೆ ಮತ್ತು ಗೋ ರಕ್ಷಣೆಯ ವಿಚಾರ ಮತ್ತೆ ದೇಶದಲ್ಲಿ ಚರ್ಚೆಗೆ…

1 day ago

ಹವಾಮಾನ ಬದಲಾವಣೆ ಈಗ ಭವಿಷ್ಯದ ಸಮಸ್ಯೆಯಲ್ಲ- ಸ್ಥಳೀಯ ಮಟ್ಟದಲ್ಲೇ ಆರಂಭವಾಗುತ್ತಿದೆ ಕ್ರಿಯಾ ಯೋಜನೆ

ಹವಾಮಾನ ಬದಲಾವಣೆಯ ಪರಿಣಾಮಗಳನ್ನು ಎದುರಿಸಲು ದಕ್ಷಿಣ ಕನ್ನಡದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ…

1 day ago