ಕೇರಳ-ಕರ್ನಾಟಕದಲ್ಲಿ ಗಮನಾರ್ಹ ಸಂಖ್ಯೆಯಲ್ಲಿದ್ದಾರೆ ಐಸಿಸ್‌ ಉಗ್ರರು…..! ವಿಶ್ವಸಂಸ್ಥೆ ಎಚ್ಚರಿಸಿದ ವರದಿ…..!

July 25, 2020
9:32 PM

ಭಯೋತ್ಪಾದನೆ ಕುರಿತ  ವಿಶ್ವಸಂಸ್ಥೆಯ ವರದಿಯು ಕೇರಳ ಮತ್ತು ಕರ್ನಾಟಕದಲ್ಲಿ ಗಮನಾರ್ಹ ಸಂಖ್ಯೆಯ ಐಸಿಸ್ ಭಯೋತ್ಪಾದಕರು ಇದ್ದಾರೆ ಎಂದು ಎಚ್ಚರಿಸಿದೆ. ಭಾರತ, ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಮ್ಯಾನ್ಮಾರ್‌ನಿಂದ 150 ರಿಂದ 200 ಉಗ್ರರನ್ನು ಹೊಂದಿರುವ ಭಯೋತ್ಪಾದಕ ಗುಂಪಿನಲ್ಲಿರುವ ಅಲ್-ಖೈದಾ ವಿವಿಧ ಪ್ರದೇಶದಲ್ಲಿ ದಾಳಿ ಯೋಜಿಸುತ್ತಿದೆ ಎಂದು ಈ ವರದಿ ಎಚ್ಚರಿಸಿದೆ.

ವಿಶೇಷವಾಗಿ  ಕರ್ನಾಟಕ ಮತ್ತು ಕೇರಳದಲ್ಲಿ ಗಮನಾರ್ಹ ಸಂಖ್ಯೆಯಲ್ಲಿ ಐಸಿಸ್ ಭಯೋತ್ಪಾದಕರು ನೆಲೆ ಕಂಡುಕೊಂಡಿದ್ದಾರೆ  ಎಂದು ವಿಶ್ವ ಸಂಸ್ಥೆಯ ವರದಿ ಉಲ್ಲೇಖಿಸಿದೆ.

ಐಸಿಸ್, ಅಲ್-ಖೈದಾ ಮತ್ತು ಇತರ ವ್ಯಕ್ತಿಗಳು ಮತ್ತು ಘಟಕಗಳು ಈ ತಂಡಕ್ಕೆ ಬೆಂಬಲ ನೀಡುತ್ತಿದ್ದು2-3 ಉಗ್ರ ಸಂಘಟನೆಗಳು ಜೊತೆಯಾಗಿ ತ್ರಿ ಅಡಿಯಲ್ಲಿ ಕಾರ್ಯನಿರ್ವಹಿಸುತ್ತದೆ ಎಂದು ಹೇಳಿರುವ ಈ ವರದಿ ಅಲ್ ಖೈದಾ ಗುಂಪಿನ ನಾಯಕ ಆಸಿಮ್ ಉಮರ್  ಮೃತಪಟ್ಟ ನಂತರ ಇದರ ನಾಯಕತ್ವವನ್ನು ಭಾರತದಲ್ಲಿ ಒಸಮಾ ಮೊಹಮ್ಮದ್ ವಹಿಸಿಕೊಂಡಿದ್ದಾನೆ. ಈತ ಮಾಜಿ ನಾಯಕನ ಸಾವಿಗೆ ಪ್ರತೀಕಾರದ ಕಾರ್ಯಾಚರಣೆಯನ್ನು ಯೋಜಿಸುತ್ತಿದ್ದಾನೆ ಎಂದು ವರದಿ ಮಾಡಿದೆ.‌ ಇದಕ್ಕಾಗಿ ಈ ಗುಂಪಿನಲ್ಲಿ ಬಾಂಗ್ಲಾದೇಶ, ಭಾರತ, ಮ್ಯಾನ್ಮಾರ್ ಮತ್ತು ಪಾಕಿಸ್ತಾನದ 150 ರಿಂದ 200 ಸದಸ್ಯರು ಇದ್ದಾರೆ ಎಂದು ವರದಿಯಾಗಿದೆ. ಕಳೆದ ವರ್ಷ ಮೇ ತಿಂಗಳಲ್ಲಿ, ಇಸ್ಲಾಮಿಕ್ ಸ್ಟೇಟ್  ಭಯೋತ್ಪಾದಕ ಗುಂಪು ಭಾರತದಲ್ಲಿ ಹೊಸ ಪ್ರಾಂತ್ಯ ವನ್ನು ಸ್ಥಾಪಿಸಿದೆ ಎಂದು ಹೇಳಿಕೊಂಡಿದೆ, ಇದು ಕಾಶ್ಮೀರದಲ್ಲಿ ಉಗ್ರರು ಮತ್ತು ಭದ್ರತಾ ಪಡೆಗಳ ನಡುವಿನ ಘರ್ಷಣೆಯ ನಂತರ ಬಂದ ಮೊದಲ ರೀತಿಯ ಘೋಷಣೆಯಾಗಿದೆ. ಇದೀಗ ಸಂಘಟನೆಯ ಪ್ರಮುಖರು ಹಾಗೂ ಸದಸ್ಯರು ಕರ್ನಾಟಕ ಹಾಗೂ ಕೇರಳದಲ್ಲಿ ನಲೆಯೂರಿದ್ದಾರೆ ಎಂದು ವಿಶ್ವ ಸಂಸ್ಥೆಯ ವರದಿಯಲ್ಲಿ  ತಿಳಿಸಲಾಗಿದೆ.

( ಮೂಲ: ಪಿಟಿಐ)

 

 

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ನೈಸರ್ಗಿಕ ಕೃಷಿಗೆ ರಾಜಸ್ಥಾನದ ದೊಡ್ಡ ಹೆಜ್ಜೆ : 32 ಸಂಸ್ಥೆಗಳೊಂದಿಗೆ ಒಪ್ಪಂದ, ರೈತರಿಗೆ ತಂತ್ರಜ್ಞಾನ – ಮಾರುಕಟ್ಟೆ ಬೆಂಬಲ
July 13, 2026
10:46 PM
by: ದ ರೂರಲ್ ಮಿರರ್.ಕಾಂ
ಅಮರನಾಥದ ಹಿಮ ಶಿವಲಿಂಗ 90% ಕರಗಿತು…! ಹವಾಮಾನ ಬದಲಾವಣೆಯೇ ಕಾರಣವೇ?
July 13, 2026
7:17 AM
by: ದ ರೂರಲ್ ಮಿರರ್.ಕಾಂ
16 ವರ್ಷದೊಳಗಿನ ಮಕ್ಕಳಿಗೆ ಸೋಷಿಯಲ್ ಮೀಡಿಯಾ ನಿರ್ಬಂಧ – ಆಸ್ಟ್ರೇಲಿಯಾದ ಕ್ರಮಕ್ಕೆ ಪ್ರಧಾನಿ ಮೋದಿ ಮೆಚ್ಚುಗೆ
July 12, 2026
9:03 PM
by: ದ ರೂರಲ್ ಮಿರರ್.ಕಾಂ
ಚೀನಾಕ್ಕೆ ಹಲಸಿನ ಹಣ್ಣು ರಫ್ತು: ಬಾಂಗ್ಲಾದೇಶದ ವಿದೇಶಿ ವಿನಿಮಯ ಆದಾಯ ಹೆಚ್ಚುವ ನಿರೀಕ್ಷೆ
July 11, 2026
6:42 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror