Advertisement
ರಾಷ್ಟ್ರೀಯ

ಕೇರಳ-ಕರ್ನಾಟಕದಲ್ಲಿ ಗಮನಾರ್ಹ ಸಂಖ್ಯೆಯಲ್ಲಿದ್ದಾರೆ ಐಸಿಸ್‌ ಉಗ್ರರು…..! ವಿಶ್ವಸಂಸ್ಥೆ ಎಚ್ಚರಿಸಿದ ವರದಿ…..!

Share

ಭಯೋತ್ಪಾದನೆ ಕುರಿತ  ವಿಶ್ವಸಂಸ್ಥೆಯ ವರದಿಯು ಕೇರಳ ಮತ್ತು ಕರ್ನಾಟಕದಲ್ಲಿ ಗಮನಾರ್ಹ ಸಂಖ್ಯೆಯ ಐಸಿಸ್ ಭಯೋತ್ಪಾದಕರು ಇದ್ದಾರೆ ಎಂದು ಎಚ್ಚರಿಸಿದೆ. ಭಾರತ, ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಮ್ಯಾನ್ಮಾರ್‌ನಿಂದ 150 ರಿಂದ 200 ಉಗ್ರರನ್ನು ಹೊಂದಿರುವ ಭಯೋತ್ಪಾದಕ ಗುಂಪಿನಲ್ಲಿರುವ ಅಲ್-ಖೈದಾ ವಿವಿಧ ಪ್ರದೇಶದಲ್ಲಿ ದಾಳಿ ಯೋಜಿಸುತ್ತಿದೆ ಎಂದು ಈ ವರದಿ ಎಚ್ಚರಿಸಿದೆ.

Advertisement

ವಿಶೇಷವಾಗಿ  ಕರ್ನಾಟಕ ಮತ್ತು ಕೇರಳದಲ್ಲಿ ಗಮನಾರ್ಹ ಸಂಖ್ಯೆಯಲ್ಲಿ ಐಸಿಸ್ ಭಯೋತ್ಪಾದಕರು ನೆಲೆ ಕಂಡುಕೊಂಡಿದ್ದಾರೆ  ಎಂದು ವಿಶ್ವ ಸಂಸ್ಥೆಯ ವರದಿ ಉಲ್ಲೇಖಿಸಿದೆ.

ಐಸಿಸ್, ಅಲ್-ಖೈದಾ ಮತ್ತು ಇತರ ವ್ಯಕ್ತಿಗಳು ಮತ್ತು ಘಟಕಗಳು ಈ ತಂಡಕ್ಕೆ ಬೆಂಬಲ ನೀಡುತ್ತಿದ್ದು2-3 ಉಗ್ರ ಸಂಘಟನೆಗಳು ಜೊತೆಯಾಗಿ ತ್ರಿ ಅಡಿಯಲ್ಲಿ ಕಾರ್ಯನಿರ್ವಹಿಸುತ್ತದೆ ಎಂದು ಹೇಳಿರುವ ಈ ವರದಿ ಅಲ್ ಖೈದಾ ಗುಂಪಿನ ನಾಯಕ ಆಸಿಮ್ ಉಮರ್  ಮೃತಪಟ್ಟ ನಂತರ ಇದರ ನಾಯಕತ್ವವನ್ನು ಭಾರತದಲ್ಲಿ ಒಸಮಾ ಮೊಹಮ್ಮದ್ ವಹಿಸಿಕೊಂಡಿದ್ದಾನೆ. ಈತ ಮಾಜಿ ನಾಯಕನ ಸಾವಿಗೆ ಪ್ರತೀಕಾರದ ಕಾರ್ಯಾಚರಣೆಯನ್ನು ಯೋಜಿಸುತ್ತಿದ್ದಾನೆ ಎಂದು ವರದಿ ಮಾಡಿದೆ.‌ ಇದಕ್ಕಾಗಿ ಈ ಗುಂಪಿನಲ್ಲಿ ಬಾಂಗ್ಲಾದೇಶ, ಭಾರತ, ಮ್ಯಾನ್ಮಾರ್ ಮತ್ತು ಪಾಕಿಸ್ತಾನದ 150 ರಿಂದ 200 ಸದಸ್ಯರು ಇದ್ದಾರೆ ಎಂದು ವರದಿಯಾಗಿದೆ. ಕಳೆದ ವರ್ಷ ಮೇ ತಿಂಗಳಲ್ಲಿ, ಇಸ್ಲಾಮಿಕ್ ಸ್ಟೇಟ್  ಭಯೋತ್ಪಾದಕ ಗುಂಪು ಭಾರತದಲ್ಲಿ ಹೊಸ ಪ್ರಾಂತ್ಯ ವನ್ನು ಸ್ಥಾಪಿಸಿದೆ ಎಂದು ಹೇಳಿಕೊಂಡಿದೆ, ಇದು ಕಾಶ್ಮೀರದಲ್ಲಿ ಉಗ್ರರು ಮತ್ತು ಭದ್ರತಾ ಪಡೆಗಳ ನಡುವಿನ ಘರ್ಷಣೆಯ ನಂತರ ಬಂದ ಮೊದಲ ರೀತಿಯ ಘೋಷಣೆಯಾಗಿದೆ. ಇದೀಗ ಸಂಘಟನೆಯ ಪ್ರಮುಖರು ಹಾಗೂ ಸದಸ್ಯರು ಕರ್ನಾಟಕ ಹಾಗೂ ಕೇರಳದಲ್ಲಿ ನಲೆಯೂರಿದ್ದಾರೆ ಎಂದು ವಿಶ್ವ ಸಂಸ್ಥೆಯ ವರದಿಯಲ್ಲಿ  ತಿಳಿಸಲಾಗಿದೆ.

( ಮೂಲ: ಪಿಟಿಐ)

 

 

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕರಾವಳಿಯಲ್ಲಿ ಅಕಾಲಿಕ ಮಳೆ ಅಬ್ಬರ | ಸುಬ್ರಹ್ಮಣ್ಯದ ಬಳಿ 42 ಮಿಮೀ, ಅಡಿಕೆ ಬೆಳೆಗಾರರಿಗೆ ಸಂಕಷ್ಟ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಹಲವೆಡೆ ಶನಿವಾರ ಸಂಜೆ ಅಕಾಲಿಕ ಮಳೆಯಾಗಿದ್ದು,…

2 hours ago

ಹವಾಮಾನ ವರದಿ | 21-02-2026 | ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಲಕ್ಷಣ | ಎಲ್ಲೆಲ್ಲಾ ಮಳೆ ಇದೆ…? ಎಷ್ಟು ದಿನ ಮಳೆ ಸಾಧ್ಯತೆ…?

ಕರ್ನಾಟಕದಲ್ಲಿ ಫೆಬ್ರುವರಿ 27ರವರೆಗೆ ಬಿಸಿಲಿನ ಜೊತೆಗೆ ತುಂತುರು ಮತ್ತು ಗುಡುಗು ಮಳೆಯ ಮುನ್ಸೂಚನೆ.…

8 hours ago

ಮಿಶ್ರ ಕೃಷಿಯತ್ತ ಮಲೆನಾಡಿನ ರೈತನ ಹೆಜ್ಜೆ ಅನಿವಾರ್ಯ

ಮಲೆನಾಡಿನಲ್ಲಿ ಅಡಿಕೆ ರೈತರು ಮಿಶ್ರ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಹವಾಮಾನ ಬದಲಾವಣೆ, ಬೆಲೆ…

13 hours ago

ನಂದಿನಿ ಉತ್ಪನ್ನಗಳ ವಿರುದ್ಧದ ವದಂತಿ ನಂಬಬೇಡಿ : ಗ್ರಾಹಕರಿಗೆ ಕೆಎಂಎಫ್ ಮನವಿ

ನಂದಿನಿ ಹಾಲು ಮತ್ತು ಉತ್ಪನ್ನಗಳು ಸೇವನೆಗೆ ಸಂಪೂರ್ಣ ಸುರಕ್ಷಿತವೆಂದು ಕೆಎಂಎಫ್ ಸ್ಪಷ್ಟನೆ ನೀಡಿದೆ.…

13 hours ago

ರೈತರಿಗೆ ಗನ್ ಪರವಾನಗಿ : ಶೀಘ್ರದಲ್ಲೇ ಆನ್ಲೈನ್ ವ್ಯವಸ್ಥೆ ಜಾರಿ – ಜಿಲ್ಲಾಧಿಕಾರಿ ದರ್ಶನ್ ಎಚ್.ವಿ

ರೈತರಿಗೆ ಗನ್ ಪರವಾನಗಿ ಹಾಗೂ ನವೀಕರಣ ಪ್ರಕ್ರಿಯೆಯನ್ನು ಸುಲಭಗೊಳಿಸಲು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ…

13 hours ago

ಮಂಗಳೂರು ಅಡಿಕೆ ಮಾರುಕಟ್ಟೆ ‘ಸೈಕಲಾಜಿಕಲ್ ಬಫರ್’ ಹಂತಕ್ಕೆ…!

ಮಂಗಳೂರಿನ ಅಡಿಕೆ ಮಾರುಕಟ್ಟೆಯು ಪ್ರಸ್ತುತ ಕೇವಲ ಬೆಲೆ ಏರಿಳಿತದ ಕೇಂದ್ರವಾಗಿ ಉಳಿದಿಲ್ಲ; ಬದಲಾಗಿ…

1 day ago