ಭಯೋತ್ಪಾದನೆ ಕುರಿತ ವಿಶ್ವಸಂಸ್ಥೆಯ ವರದಿಯು ಕೇರಳ ಮತ್ತು ಕರ್ನಾಟಕದಲ್ಲಿ ಗಮನಾರ್ಹ ಸಂಖ್ಯೆಯ ಐಸಿಸ್ ಭಯೋತ್ಪಾದಕರು ಇದ್ದಾರೆ ಎಂದು ಎಚ್ಚರಿಸಿದೆ. ಭಾರತ, ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಮ್ಯಾನ್ಮಾರ್ನಿಂದ 150 ರಿಂದ 200 ಉಗ್ರರನ್ನು ಹೊಂದಿರುವ ಭಯೋತ್ಪಾದಕ ಗುಂಪಿನಲ್ಲಿರುವ ಅಲ್-ಖೈದಾ ವಿವಿಧ ಪ್ರದೇಶದಲ್ಲಿ ದಾಳಿ ಯೋಜಿಸುತ್ತಿದೆ ಎಂದು ಈ ವರದಿ ಎಚ್ಚರಿಸಿದೆ.
ವಿಶೇಷವಾಗಿ ಕರ್ನಾಟಕ ಮತ್ತು ಕೇರಳದಲ್ಲಿ ಗಮನಾರ್ಹ ಸಂಖ್ಯೆಯಲ್ಲಿ ಐಸಿಸ್ ಭಯೋತ್ಪಾದಕರು ನೆಲೆ ಕಂಡುಕೊಂಡಿದ್ದಾರೆ ಎಂದು ವಿಶ್ವ ಸಂಸ್ಥೆಯ ವರದಿ ಉಲ್ಲೇಖಿಸಿದೆ.
ಐಸಿಸ್, ಅಲ್-ಖೈದಾ ಮತ್ತು ಇತರ ವ್ಯಕ್ತಿಗಳು ಮತ್ತು ಘಟಕಗಳು ಈ ತಂಡಕ್ಕೆ ಬೆಂಬಲ ನೀಡುತ್ತಿದ್ದು2-3 ಉಗ್ರ ಸಂಘಟನೆಗಳು ಜೊತೆಯಾಗಿ ತ್ರಿ ಅಡಿಯಲ್ಲಿ ಕಾರ್ಯನಿರ್ವಹಿಸುತ್ತದೆ ಎಂದು ಹೇಳಿರುವ ಈ ವರದಿ ಅಲ್ ಖೈದಾ ಗುಂಪಿನ ನಾಯಕ ಆಸಿಮ್ ಉಮರ್ ಮೃತಪಟ್ಟ ನಂತರ ಇದರ ನಾಯಕತ್ವವನ್ನು ಭಾರತದಲ್ಲಿ ಒಸಮಾ ಮೊಹಮ್ಮದ್ ವಹಿಸಿಕೊಂಡಿದ್ದಾನೆ. ಈತ ಮಾಜಿ ನಾಯಕನ ಸಾವಿಗೆ ಪ್ರತೀಕಾರದ ಕಾರ್ಯಾಚರಣೆಯನ್ನು ಯೋಜಿಸುತ್ತಿದ್ದಾನೆ ಎಂದು ವರದಿ ಮಾಡಿದೆ. ಇದಕ್ಕಾಗಿ ಈ ಗುಂಪಿನಲ್ಲಿ ಬಾಂಗ್ಲಾದೇಶ, ಭಾರತ, ಮ್ಯಾನ್ಮಾರ್ ಮತ್ತು ಪಾಕಿಸ್ತಾನದ 150 ರಿಂದ 200 ಸದಸ್ಯರು ಇದ್ದಾರೆ ಎಂದು ವರದಿಯಾಗಿದೆ. ಕಳೆದ ವರ್ಷ ಮೇ ತಿಂಗಳಲ್ಲಿ, ಇಸ್ಲಾಮಿಕ್ ಸ್ಟೇಟ್ ಭಯೋತ್ಪಾದಕ ಗುಂಪು ಭಾರತದಲ್ಲಿ ಹೊಸ ಪ್ರಾಂತ್ಯ ವನ್ನು ಸ್ಥಾಪಿಸಿದೆ ಎಂದು ಹೇಳಿಕೊಂಡಿದೆ, ಇದು ಕಾಶ್ಮೀರದಲ್ಲಿ ಉಗ್ರರು ಮತ್ತು ಭದ್ರತಾ ಪಡೆಗಳ ನಡುವಿನ ಘರ್ಷಣೆಯ ನಂತರ ಬಂದ ಮೊದಲ ರೀತಿಯ ಘೋಷಣೆಯಾಗಿದೆ. ಇದೀಗ ಸಂಘಟನೆಯ ಪ್ರಮುಖರು ಹಾಗೂ ಸದಸ್ಯರು ಕರ್ನಾಟಕ ಹಾಗೂ ಕೇರಳದಲ್ಲಿ ನಲೆಯೂರಿದ್ದಾರೆ ಎಂದು ವಿಶ್ವ ಸಂಸ್ಥೆಯ ವರದಿಯಲ್ಲಿ ತಿಳಿಸಲಾಗಿದೆ.
( ಮೂಲ: ಪಿಟಿಐ)
ಅಡಿಕೆ ಎಲೆ ಚುಕ್ಕೆ ರೋಗವು ಗಾಳಿ ಮತ್ತು ತೇವಾಂಶದಿಂದ ವೇಗವಾಗಿ ಹರಡುತ್ತಿದ್ದು, ತೋಟಗಳಿಗೆ…
ಇಂಟರ್ನೆಟ್ ಸೇವೆ ವ್ಯತ್ಯಯಕ್ಕೆ ಸುಳ್ಯದ ಗ್ರಾಹಕನಿಗೆ ₹30,000 ಪರಿಹಾರ ನೀಡಲು ಆದೇಶ. ಬಿ…
ಮೇ 2ರಿಂದ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಕಡಿಮೆಯಾಗುವ ಸೂಚನೆಗಳು ಕಂಡುಬರುತ್ತಿವೆ. ಮೇ…
ಚಿಕ್ಕಮಗಳೂರಿನಲ್ಲಿ ಅಕ್ರಮವಾಗಿ ಶೇಖರಿಸಿದ್ದ ಯೂರಿಯಾ ಗೊಬ್ಬರ ಜಪ್ತಿ ಮಾಡಲಾಗಿದೆ. 181 ಚೀಲಗಳು ಹಾಗೂ…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಕೆಲ ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ.…
NEET ಪರೀಕ್ಷೆಯ ಒತ್ತಡದಿಂದ ವಿದ್ಯಾರ್ಥಿಗಳಲ್ಲಿ ಮಾನಸಿಕ ಸಮಸ್ಯೆಗಳು ಹೆಚ್ಚುತ್ತಿವೆ. ಒತ್ತಡರಹಿತ, ಅನುಭವಾಧಾರಿತ ಶಿಕ್ಷಣ…